ಮಂಗಳೂರು: ಬಡಮಕ್ಕಳಿಗೆ ಪುಸ್ತಕ ವಿತರಣೆ
ಮಂಗಳೂರು, ಮೇ. 22: ನಗರದ ಸ್ವಯಂ ಸೇವಾ ಸಂಸ್ಥೆ ಸಂತ ಕ್ರಿಸ್ಟೋಫರ್ ಅಸೋಸಿಯೇಶನ್ ಸಮಾಜದ ಬಡ ವಿದ್ಯಾರ್ಥಿಗಳಿಗೆ ನೀಡಿದ ಪುಸ್ತಕಗಳನ್ನು ರೊಸಾರಿಯೋ ಚರ್ಚ್ನಲ್ಲಿ ವಿತರಿಸಲಾಯಿತು.
ಮಂಗಳೂರು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಫ್ರಾನ್ಸಿಸ್ ಕುಟಿನ್ಹೊ ಪುಸ್ತಕಗಳನ್ನು ವಿತರಿಸಿ ಮಾತನಾಡಿ " ಲಕ್ಷಾಂತರ ಬಡ ಮಕ್ಕಳು ಇಂದು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಸಮಾಜ ಅಂಥವರನ್ನು ಗುರುತಿಸಿ ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಅಗತ್ಯವಿದೆ. ಬಡ ವಿದ್ಯಾರ್ಥಿಗಳ ಅವಶ್ಯಕತೆಯನ್ನು ಮನಗಂಡು ಈ ಪರಿಸರದ ನೂರಾರು ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ವಿತರಿಸಲು ಮುಂದಾಗಿರುವ ಕ್ರಿಸ್ಟೋಫರ್ ಅಸೋಸಿಯೇಶನ್ ಕಾರ್ಯ ಶ್ಲಾಘನೀಯವೆನಿಸಿದೆ" ಎಂದರು.[ಮಂಗಳೂರು ವಿವಿ ಆವರಣದಲ್ಲಿ 'ಜೋಡಿ' ಶವ]
ಸಂತ ಕ್ರಿಸ್ಟೋಫರ್ ಅಸೋಸಿಯೇಶನ್ 1967ರಲ್ಲಿ ಆರಂಭಗೊಂಡಿದ್ದು ಪ್ರತಿವರ್ಷ ಶಾಲೆ ಆರಂಭಗೊಳ್ಳುವ ಮುನ್ನಾ ಬಡ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನಿರಂತರವಾಗಿ ವಿತರಿಸುತ್ತಿದೆ.
ಸಂಘದ ಅಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.