ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ 'ಕಾಂಗ್ರೆಸ್‌ -ಬಿಜೆಪಿ' ಹೊಯ್ ಕೈ

|
Google Oneindia Kannada News

ಮಂಗಳೂರು, ಡಿಸೆಂಬರ್ 9: ಇಂದಿರಾ ಕ್ಯಾಂಟೀನ್ ಉದ್ಘಾಟನೆ ಸಂದರ್ಭದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳದಲ್ಲಿ ಭಾನುವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ಈ ಗಲಾಟೆ ನಡೆದಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮೇಲೆ ಮಾಜಿ ಸಚಿವ ರಮಾನಾಥ ರೈ ಆಪ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಕೈ ಮಾಡಲು ಮಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು, ಘರ್ಷಣೆ ಆಗಿದೆ.

ಚಿಕ್ಕಮಗಳೂರಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ರಾಜಕೀಯ ದೊಂಬರಾಟ ಚಿಕ್ಕಮಗಳೂರಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ರಾಜಕೀಯ ದೊಂಬರಾಟ

ಪೊಲೀಸರ ಮಧ್ಯೆ ಸಚಿವ ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕಾರ್ಯಕರ್ತರು ತಳ್ಳಾಡಿದ್ದಾರೆ. ಸಂಸದ ನಳಿನ್ ಕುಮಾರ್, ಉಸ್ತುವಾರಿ ಸಚಿವ ಯು.ಟಿ ಖಾದರ್ ಸಮ್ಮುಖದಲ್ಲೇ ಕಾಂಗ್ರೆಸ್‌ ಕಾರ್ಯಕರ್ತರು ಸೇರಿದಂತೆ ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶ ಶೆಟ್ಟಿ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Clash between Congress and BJP party workers in Bantwal

ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ತಿನ್ನೋಕೆ ಹೋದ ಡಿಸಿಎಂ ಪೇಚಿಗೆ ಸಿಲುಕಿದ್ರುಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ತಿನ್ನೋಕೆ ಹೋದ ಡಿಸಿಎಂ ಪೇಚಿಗೆ ಸಿಲುಕಿದ್ರು

ಚಂದ್ರಪ್ರಕಾಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಗೂಂಡಾಗಿರಿ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.

English summary
There is clash between Congress and BJP party workers in Bantwal during Indira canteen inauguration program on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X