Get Updates
Get notified of breaking news, exclusive insights, and must-see stories!

ಕಲ್ಲಡ್ಕದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಗುಂಪುಗಳ ಮಧ್ಯೆ ಮಾರಾಮಾರಿ

ಕಲ್ಲಡ್ಕದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಸೆಕ್ಷನ್ 144 ನಿಷೇಧಾಜ್ಞೆಯ ಮಧ್ಯೆಯೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಕಲ್ಲಡ್ಕದ ರತ್ನಾಕರ್ ಶೆಟ್ಟಿ ಎಂಬುವರಿಗೆ ಚೂರಿಯಲ್ಲಿ ಇರಿಯಲಾಗಿದೆ.

ಮಂಗಳೂರು, ಜೂನ್ 13: ಕಲ್ಲಡ್ಕದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಸೆಕ್ಷನ್ 144 ನಿಷೇಧಾಜ್ಞೆಯ ಮಧ್ಯೆಯೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಕಲ್ಲಡ್ಕದ ರತ್ನಾಕರ್ ಶೆಟ್ಟಿ ಎಂಬುವರಿಗೆ ಚೂರಿಯಲ್ಲಿ ಇರಿಯಲಾಗಿದೆ.

ಇಂದು ಸಂಜೆ ಖಲೀಲ್ ಹಾಗೂ ರತ್ನಾಕರ್ ಶೆಟ್ಟಿ ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಪರಿಣಾಮ ಘಟನಾ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನೆಡದಿದ್ದು ಕಲ್ಲಡ್ಕದ ರಾಮಮಂದಿರ ಹಾಗೂ ಮಸೀದಿಗೆ ಕಲ್ಲು ಎಸೆದಿದ್ದಾರೆ.

Clashes erupt between two groups at Kalladka, Temple and Mosque stone pelted

ಪೋಲೀಸರ ಎದುರಲ್ಲೇ ಗುಂಪುಗಳು ಹೊಡೆದಾಟ ನಡೆಸಿದ್ದು, ಇದರಿಂದ ಸ್ಥಳದಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದೆ.
ಚೂರಿ ಇರಿತಕ್ಕೆ ಒಳಗಾದ ರತ್ನಾಕರ್ ಶೆಟ್ಟಿಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು, ಹಲವು ತಂಡಗಳಲ್ಲಿ ಶೋಧ ನಡೆಸುತ್ತಿದ್ದಾರೆ.

Clashes erupt between two groups at Kalladka, Temple and Mosque stone pelted

ಚೂರಿ ಇರಿತದ ವಿಷಯ ತಿಳಿಯುತ್ತಿದ್ದಂತೆ ಕಲ್ಲಡ್ಕ ಪಟ್ಟಣದಲ್ಲಿ ಜನ ಜಮಾಯಿಸಿದ್ದಾರೆ. ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್‌ ಆಗಿದ್ದು ಮುಂಜಾಗೃತ ಕ್ರಮವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆ ಎಸ್ಸೈ ಎ.ಕೆ.ರಕ್ಷಿತ್ ಹಾಗೂ ಅವರ ಸಿಬ್ಬಂದಿ ದೌಡಾಯಿಸಿ ಬಂದೋಬಸ್ತ್ ಕಲ್ಪಿಸಿದ್ದಾರೆ.

Clashes erupt between two groups at Kalladka, Temple and Mosque stone pelted

ಇನ್ನು ಇತ್ತೀಚಿಗಷ್ಟೇ ಜುಮಾ ನಮಾಝ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮೂವರು ಮುಸ್ಲಿಂ ಯುವಕರ ಮೇಲೆ ಮೂವರು ಹಿಂದೂ ಯುವಕರು ಹಲ್ಲೆ ನಡೆಸಿ, ಒಬ್ಬನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು.

ಈ ಹಿನ್ನಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿತ್ತು. ಇದೀಗ ಇದರ ಮಧ್ಯೆಯೇ ಹೊಡೆದಾಟ ನಡೆದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+