ಕಲ್ಲಡ್ಕದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಗುಂಪುಗಳ ಮಧ್ಯೆ ಮಾರಾಮಾರಿ
ಕಲ್ಲಡ್ಕದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಸೆಕ್ಷನ್ 144 ನಿಷೇಧಾಜ್ಞೆಯ ಮಧ್ಯೆಯೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಕಲ್ಲಡ್ಕದ ರತ್ನಾಕರ್ ಶೆಟ್ಟಿ ಎಂಬುವರಿಗೆ ಚೂರಿಯಲ್ಲಿ ಇರಿಯಲಾಗಿದೆ.
ಮಂಗಳೂರು, ಜೂನ್ 13: ಕಲ್ಲಡ್ಕದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಸೆಕ್ಷನ್ 144 ನಿಷೇಧಾಜ್ಞೆಯ ಮಧ್ಯೆಯೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಕಲ್ಲಡ್ಕದ ರತ್ನಾಕರ್ ಶೆಟ್ಟಿ ಎಂಬುವರಿಗೆ ಚೂರಿಯಲ್ಲಿ ಇರಿಯಲಾಗಿದೆ.
ಇಂದು ಸಂಜೆ ಖಲೀಲ್ ಹಾಗೂ ರತ್ನಾಕರ್ ಶೆಟ್ಟಿ ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಪರಿಣಾಮ ಘಟನಾ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನೆಡದಿದ್ದು ಕಲ್ಲಡ್ಕದ ರಾಮಮಂದಿರ ಹಾಗೂ ಮಸೀದಿಗೆ ಕಲ್ಲು ಎಸೆದಿದ್ದಾರೆ.

ಪೋಲೀಸರ ಎದುರಲ್ಲೇ ಗುಂಪುಗಳು ಹೊಡೆದಾಟ ನಡೆಸಿದ್ದು, ಇದರಿಂದ ಸ್ಥಳದಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದೆ.
ಚೂರಿ ಇರಿತಕ್ಕೆ ಒಳಗಾದ ರತ್ನಾಕರ್ ಶೆಟ್ಟಿಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು, ಹಲವು ತಂಡಗಳಲ್ಲಿ ಶೋಧ ನಡೆಸುತ್ತಿದ್ದಾರೆ.

ಚೂರಿ ಇರಿತದ ವಿಷಯ ತಿಳಿಯುತ್ತಿದ್ದಂತೆ ಕಲ್ಲಡ್ಕ ಪಟ್ಟಣದಲ್ಲಿ ಜನ ಜಮಾಯಿಸಿದ್ದಾರೆ. ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ಮುಂಜಾಗೃತ ಕ್ರಮವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆ ಎಸ್ಸೈ ಎ.ಕೆ.ರಕ್ಷಿತ್ ಹಾಗೂ ಅವರ ಸಿಬ್ಬಂದಿ ದೌಡಾಯಿಸಿ ಬಂದೋಬಸ್ತ್ ಕಲ್ಪಿಸಿದ್ದಾರೆ.

ಇನ್ನು ಇತ್ತೀಚಿಗಷ್ಟೇ ಜುಮಾ ನಮಾಝ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮೂವರು ಮುಸ್ಲಿಂ ಯುವಕರ ಮೇಲೆ ಮೂವರು ಹಿಂದೂ ಯುವಕರು ಹಲ್ಲೆ ನಡೆಸಿ, ಒಬ್ಬನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು.
ಈ ಹಿನ್ನಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿತ್ತು. ಇದೀಗ ಇದರ ಮಧ್ಯೆಯೇ ಹೊಡೆದಾಟ ನಡೆದಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications