Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ಮೊದಲ ಬಾರಿಗೆ ಕಂಪ್ಯೂಟರ್ ಬಸ್‌: ಕ್ಲಾಸ್ ಆನ್ ವೀಲ್ಸ್‌ನ ವಿಶೇಷತೆಗಳೇನು..?

ಮಂಗಳೂರು, ನವೆಂಬರ್‌ 18: ಸರ್ಕಾರ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ತರಗತಿಗಳು ನಡೆಯಬೇಕೆಂದು ಹೇಳುತ್ತವೆ. ಆದರೆ ಗ್ರಾಮೀಣ ಭಾಗದಲ್ಲಿ ಶಿಕ್ಷಕರ ಕೊರತೆ, ಇಂಟರ್ನೆಟ್ ಸೌಲಭ್ಯ ಮರೀಚಿಕೆ. ಹೀಗಾಗಿ ಮೂಲಭೂತ ವ್ಯವಸ್ಥೆ ಇಲ್ಲದಿರುವುದು ಮಕ್ಕಳ ಭವಿಷ್ಯಕ್ಕೆ ಕೊಡಲಿಯೇಟು ನೀಡುತ್ತದೆ.

ನಗರದ ವಿದ್ಯಾರ್ಥಿಗಳ ರೀತಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಇಲ್ಲದಿರುವುದನ್ನು ಕಂಡು ಮಂಗಳೂರಿನ ಎಂ ಚಾರಿಟೇಬಲ್ ಟ್ರಸ್ಟ್ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಕಂಪ್ಯೂಟರ್ ಬಸ್‌ಅನ್ನು ನಿರ್ಮಾಣ ಮಾಡಿದೆ.

Class On Wheels: Mangaluru M. Friends Trust Has Started Computer Bus For The First Time In The State

ಕ್ಲಾಸ್ ಆನ್ ವೀಲ್ಸ್ ಎಂಬ ನೂತನ ಪ್ರಯೋಗದ ಕಂಪ್ಯೂಟರ್ ಬಸ್ ಶನಿವಾರ ದಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶವನ್ನು ಸುತ್ತಲಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಕಂಪ್ಯೂಟರ್ ಜ್ಞಾನವನ್ನು ಬಿತ್ತಲಿದೆ. ಈ 'ಕ್ಲಾಸ್ ಆನ್ ವ್ಹೀಲ್ಸ್' ಎಂಬ ಹೆಸರಲ್ಲಿ ಐಷಾರಾಮಿ ಹವಾನಿಯಂತ್ರಿತ ಬಸ್, ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಉಚಿತ ಸೇವೆಯೊಂದಿಗೆ ಕಾರ್ಯಾಚರಿಸಲಿದೆ.

ವಾರ್ಷಿಕ ಐದು ಸಾವಿರ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ನ ಮೂಲಭೂತ ಶಿಕ್ಷಣ ನೀಡುವ ಗುರಿ ಮತ್ತು ಅದಮ್ಯವಾದ ಬಯಕೆಯನ್ನು ಈ ಡಿಜಿಟಲ್ ಬಸ್ ಹೊಂದಿದೆ. ಕಂಪ್ಯೂಟರ್ ಬಸ್‌ಅನ್ನು ಸಂಪೂರ್ಣ ಕ್ಲಾಸ್ ರೂಮ್ ಆಗಿ ಪರಿವರ್ತಿಸಲಾಗಿದೆ. ತರಗತಿಯೊಳಗೆ ಒಂದು ಟನ್ನಿನ ಎರಡು ಎ.ಸಿ. ಅಳವಡಿಸಲಾಗಿದೆ.

Class On Wheels: Mangaluru M. Friends Trust Has Started Computer Bus For The First Time In The State

ಏಕಕಾಲದಲ್ಲಿ 16 ಅಥವಾ 32 ವಿದ್ಯಾರ್ಥಿಗಳು ಕಲಿಯಲು 16 ಲ್ಯಾಪ್ ಟಾಪ್ ಕಂಪ್ಯೂಟರ್, ಕೀಪೇಡ್, ಮೌಸ್, ಚಾರ್ಜರ್ಸ್, ಕೂರಲು 16 ರಿವೋಲ್ವಿಂಗ್ ಚೆಯರ್ಸ್, 16 ಮಡಚುವ ಸಂವಿಧಾನವಿರುವ ಡೆಸ್ಕ್ ಇದೆ. ಶಿಕ್ಷಕರಿಗೆ ಪ್ರತ್ಯೇಕ ಕಂಪ್ಯೂಟರ್, ಚೆಯರ್, ಡೆಸ್ಕ್ ನಿರ್ಮಿಸಲಾಗಿದೆ. ಕಾನ್ಫರೆನ್ಸ್‌ಗೆ ಪ್ರಾಜೆಕ್ಟರ್, ಪ್ರಸೆಂಟೇಶನ್‌ಗೆ ಟಿ.ವಿ., ಮ್ಯೂಸಿಕ್ ಸಿಸ್ಟಮ್ ವ್ಯವಸ್ಥೆ, ಮೈಕ್ ಸೌಂಡ್ ಸಿಸ್ಟಮ್, ಲೈಟಿಂಗ್ಸ್, ಎಲ್ಇಡಿ ಡಿಜಿಟಲ್ ಬೋರ್ಡ್ ಅಳವಡಿಸಲಾಗಿದೆ.

ಅಂತರ್ಜಾಲದ ವಿದ್ಯೆಗಾಗಿ ವೈಫೈ, ಇಂಟರ್ನೆಟನ್ನೂ ಒಳಗೊಂಡಿದೆ. ಅವಶ್ಯಕತೆಗಾಗಿ ಕಲರ್ ಪ್ರಿಂಟರ್, ಫೋಟೋ ಕೋಪಿ ಮತ್ತು ಸ್ಕ್ಯಾನರ್ ಇದೆ. ವಿದ್ಯಾರ್ಥಿಗಳ, ಶಿಕ್ಷಕರ ಹಾಜರಾತಿಗೆ ಬಸ್ ಬಾಗಿಲ ಬಳಿ ಅತ್ಯಾಧುನಿಕ ಬಯೋಮೆಟ್ರಿಕ್ ಡಿವೈಸ್ ಸ್ಥಾಪಿಸಲಾಗಿದೆ. ಇತರ ಸಮಯಗಳಲ್ಲಿ 25 ಜನರ ಸಭೆ ಸಮಾರಂಭಗಳನ್ನು ಬಸ್ ನೊಳಗೆ ಎಲ್ಲಿ ಬೇಕಾದರೂ ಮಾಡುವಂತಹ ಮಲ್ಟಿಸ್ಪೆಶಾಲಿಟಿ ವ್ಯವಸ್ಥೆ ಇದೆ.

ತರಗತಿ ಒಳ ಹೋಗಲು ಮೂರು ಪ್ರವೇಶ ದ್ವಾರಗಳಿವೆ. ಮಕ್ಕಳ ಸುರಕ್ಷತೆಗಾಗಿ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಸಲಾಗಿದೆ. ಸ್ವಂತ ವಿದ್ಯುತ್ ಸಂಚಲನಕ್ಕಾಗಿ 6.8 ಕೆ.ವಿ. ಯ ಅತ್ಯಾಧುನಿಕ ಜನರೇಟರ್, ಹೊರಗಿನ ವಿದ್ಯುತ್ ಸಂಪರ್ಕದ ಸೌಲಭ್ಯದ ಪಾಯಿಂಟ್, ಕೈ ಮುಖ ತೊಳೆಯಲು ಬಸ್ ಟಾಪಲ್ಲಿ 200 ಲೀಟರಿನ ನೀರಿನ ಟ್ಯಾಂಕ್, ವಾಶ್ ಬೇಸಿನ್, 40 ಲೀಟರಿನ ಕುಡಿಯುವ ನೀರಿನ ಸೌಲಭ್ಯ, ಎರಡು ಎಸಿ ಔಟ್ ಡೋರ್ ಯೂನಿಟ್, ಬ್ಯಾಟರಿ ಬಾಕ್ಸ್, ಟೂಲ್ ಬಾಕ್ಸ್, ಪವರ್ ಪಾಯಿಂಟ್ ಮೊದಲಾದವನ್ನು ಬಸ್ ಹೊಂದಿದೆ.

ಹನೀಫ್ ಪುತ್ತೂರು ಅವರು ಸದ್ಯ ದುಬೈಯ ಮಹಮ್ಮದ್ ಬಿನ್ ರಾಶಿದ್ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಪ್ರಯೋಗಾಲಯದಲ್ಲಿ ಕ್ಲೌಡ್ & ಇನ್ಫ್ರಾಸ್ಟ್ರೆಕ್ಚರ್ ಮೆನೇಜರ್ ಆಗಿ ಉದ್ಯೋಗದಲ್ಲಿದ್ದು, ಯುಎಇ ಗೋಲ್ಡನ್ ವೀಸಾ ಹೊಂದಿದ್ದಾರೆ. ಮಂಗಳೂರು ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಯುಎಇ ಪ್ರಾಂತ್ಯದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಯುಎಇಯ ಅಬುದಾಬಿಯಲ್ಲಿನ ಸಂಸ್ಥೆಯೊಂದು ಹಮ್ಮಿಕೊಂಡಿರುವ ಸ್ಪರ್ಧೆಯಲ್ಲಿ ಪುತ್ತೂರು ಸಮೀಪದ ಆರ್ಯಾಪು ಗ್ರಾಮದ ಬಲ್ಲೇರಿ ಅಬ್ಬಾಸ್ ಹಾಜಿ ಅವರ ಪುತ್ರ ಮಹಮ್ಮದ್ ಹನೀಫ್ ಅವರು ವಿಜೇತರಾಗುವ ಮೂಲಕ ಕರಾವಳಿ ಜಿಲ್ಲೆಗೆ ಹೆಸರು ತಂದಿದ್ದರು.

ಹನೀಫ್ ಅವರು ತನ್ನೂರಿನ ಗ್ರಾಮೀಣ ಪ್ರದೇಶದಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಕಂಪ್ಯೂಟರ್ ಬಸ್ ಪ್ರಾರಂಭಿಸುವ ಉದ್ದೇಶದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಒಂದು ಮೊಬೈಲ್ ಬಸ್ ನ್ನು ಅತ್ಯಾಧುನಿಕ ಟೆಕ್ನಾಲಜಿಯಲ್ಲಿ ನಿರ್ಮಿಸಿ ಶಾಲೆಗಳಿಗೆ ತೆರಳಿ ಕಂಪ್ಯೂಟರ್ ಬೋಧಿಸುವ ಕನಸನ್ನು ಬಿಚ್ಚಿಟ್ಟರು.

ಈ ಯೋಜನೆಯನ್ನು ಮೆಚ್ಚಿ ಲಕ್ಷಾಂತರ ಜನರು ಆನ್ಲೈನ್ ವೋಟ್ ಮಾಡುವ ಮೂಲಕ ಅವರನ್ನು ವಿಜೇತರನ್ನಾಗಿಸಿದ್ದರು. ಅದರಲ್ಲಿ ದೊರೆತ ಬಹುಮಾನದ ಮೊತ್ತಕ್ಕೆ ತಮ್ಮಿಂದಾಗುವ ಹಣವನ್ನು ಸೇರಿಸಿ ತಾನು ಸೇವೆಗೈಯ್ಯುವ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ಗೆ ಆ ಮೊತ್ತ ಹಸ್ತಾಂತರಿಸಿ ಬಸ್ ಕನಸನ್ನು ಸಾಕ್ಷಾತ್ಕರಿಸಿದರು.

ಬಸ್‌ಗೆ ಒಟ್ಟು 60 ಲಕ್ಷ ರೂ. ಖರ್ಚು ಆಗಿದ್ದು, ಹೆಚ್ಚುವರಿ ಭಾಗಶಃ ಮೊತ್ತವನ್ನು ಎಂ.ಫ್ರೆಂಡ್ಸ್ ಟ್ರಸ್ಟ್ ಭರಿಸಿದೆ. ಅರವಿಂದ್ ಮೋಟಾರ್ಸ್‌ನ ಟಾಟಾ ಕಂಪೆನಿಯ ಹೀರಾ ಮಾಡೆಲಿನ ಈ ಬಸ್‌ಅನ್ನು ಕಂಪ್ಯೂಟರ್ ಕ್ಲಾಸ್ ರೂಮ್ ಆಗಿ ಸುಸಜ್ಜಿತವಾಗಿ ಪರಿವರ್ತಿಸಿದವರು ಬೈಕಂಪಾಡಿಯ ರೋಡ್ರಿಕ್ಸ್ ಇಂಡಸ್ಟ್ರೀಸ್ ನವರು.

ಈ ಬಸ್ ಜಿಲ್ಲೆಯ ಗ್ರಾಮೀಣ ವಿದ್ಯಾಸಂಸ್ಥೆಗಳಿಗೆ ತೆರಳಿ ಶಾಲಾ ಆವರಣದಲ್ಲೇ ಕಂಪ್ಯೂಟರ್ ಶಿಕ್ಷಣ ನೀಡಲಿದೆ. ಒಂದು ವಿದ್ಯಾರ್ಥಿಗೆ ಕನಿಷ್ಟ 15 ರಿಂದ 20 ತಾಸುಗಳ ತರಬೇತಿಯನ್ನು ಹಂತ ಹಂತವಾಗಿ ಕೊಡಲಿದೆ. ಒಂದು ದಿನದಲ್ಲಿ ಮೂರು ಅಥವಾ ನಾಲ್ಕು ಶಾಲೆಗಳಿಗೆ ತೆರಳಿ ತಲಾ ಒಂದರಿಂದ ಒಂದೂವರೆ ತಾಸಿನ ತರಗತಿಯನ್ನು ಬಿತ್ತರಿಸಲಿದೆ. ಇದಕ್ಕಾಗಿಯೇ ಪ್ರತ್ಯೇಕ ಸಿಲೆಬಸ್ ರಚಿಸಲಾಗಿದೆ. ಬಸ್‌ನಲ್ಲಿ ಇಬ್ಬರು ಕಂಪ್ಯೂಟರ್ ಶಿಕ್ಷಕಿಯರು, ಅನುಭವಿ ಚಾಲಕ ಮತ್ತು ನಿರ್ವಾಹಕರು ಇರುತ್ತಾರೆ. ಸರಕಾರಿ ರಜೆ ಹೊರತುಪಡಿಸಿ ಬೆಳಿಗ್ಗೆ 9 ರಿಂದ ಸಂಜೆ 4 ರ ತನಕ ಡಿಜಿಬಸ್ ಕಾರ್ಯಾಚರಿಸಲಿದೆ. ಈ ಯೋಜನೆಗೆ ವಾರ್ಷಿಕ 10 ಲಕ್ಷ ರೂಪಾಯಿ ವೆಚ್ಚ ತಗುಲಲಿದೆ.

ಹನೀಫ್ ಅವರು ಪ್ರಾಥಮಿಕ ಶಾಲಾ ಶಿಕ್ಷಣ ಪಡೆದ ಕುಂಜೂರು ಪಂಜ ಶಾಲೆಯಿಂದಲೇ ಈ ಡಿಜಿ ಬಸ್ ಪ್ರಾರಂಭವಾಗಲಿದ್ದು, ತಾನು ಉನ್ನತ ಹುದ್ದೆಗೇರಿದಾಗ ಕಲಿತ ಶಾಲೆಯನ್ನು ಮರೆತು ಬಿಡುವವರಿಗೆ ಇದೊಂದು ಪ್ರೇರಣಾ ಶಕ್ತಿಯಾಗಿ ಕಲಿತ ಶಾಲೆಗೂ, ಊರಿಗೂ ಹೆಮ್ಮೆಯ ಪ್ರತೀಕವಾಗಲಿದೆ.

ಎಂ.ಫ್ರೆಂಡ್ಸ್‌ನ ಈ ಕಂಪ್ಯೂಟರ್ ಬಸ್ ರಾಜ್ಯಕ್ಕೆ ಹೊಸ ಯೋಜನೆಯಾಗಿದೆ. ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ತನ್ನ ದಶಮಾನೋತ್ಸವದ ಸವಿ ನೆನಪಿಗಾಗಿ ಈ ವಿದ್ಯಾ ಯೋಜನೆಯನ್ನು ಬಿಡುಗಡೆಗೊಳಿಸಿದೆ. 2013 ರಲ್ಲಿ ವಾಟ್ಸಪ್ ಗ್ರೂಪ್ ಮೂಲಕ ಪ್ರಾರಂಭವಾದ ಎಂ. ಫ್ರೆಂಡ್ಸ್ ತಂಡ ಇಂದು ಪ್ರಸಿದ್ಧ ಚಾರಿಟಿ ಟ್ರಸ್ಟ್ ಆಗಿ ಪರಿವರ್ತನೆಗೊಂಡಿದೆ.

ಕಳೆದ 10 ವರ್ಷದಲ್ಲಿ ಕೋಟ್ಯಾಂತರ ರೂಪಾಯಿ ವ್ಯಯಿಸಿ ಹಲವಾರು ಸೇವಾ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ ಗುರುತಿಸಿಕೊಂಡಿದೆ. ಅನಾರೋಗ್ಯ ಪೀಡಿತರ ಸೇವೆ ಮೂಲಕ ಪ್ರಾರಂಭವಾದ ಟ್ರಸ್ಟ್ ನ ಸೇವೆ ಜಿಲ್ಲೆಯ 8 ಕುಗ್ರಾಮಗಳನ್ನು ಸಮೀಕ್ಷೆ ಮಾಡಿ ಅಲ್ಲಿನ ಮೂಲಭೂತ ಸೌಕರ್ಯ, ವಿದ್ಯಾಭ್ಯಾಸ, ಆರೋಗ್ಯಕ್ಕೆ ದೊಡ್ಡ ಕೊಡುಗೆ ನೀಡಿದೆ. ಅನ್ನದಾನದ ಮಹತ್ವವನ್ನು ಅರಿತು ಕಳೆದ ಆರು ವರ್ಷಗಳಿಂದ ಮಂಗಳೂರಿನ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಹವರ್ತಿಗಳಿಗೆ ದಿನನಿತ್ಯ ಸುಮಾರು 500 ಬಡ/ಅಶಕ್ತರಿಗೆ ರಾತ್ರಿಯ ಭೋಜನವನ್ನು ಉಚಿತವಾಗಿ ವಿತರಿಸುತ್ತಿದೆ. ಇದೀಗ ಕಂಪ್ಯೂಟರ್ ಡಿಜಿಟಲ್ ಬಸ್ಸಿನ ಹೊಸ ಯೋಜನೆ ಸಹಸ್ರಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+