ಹವಾಮಾನ ವೈಪರೀತ್ಯ, ಮೀನುಗಾರರ ಬದುಕಿಗೇ ಲಂಗರು!
ಮಂಗಳೂರು, ಮಾರ್ಚ್ 17: ಸಮುದ್ರದಲ್ಲಿ ಉಂಟಾಗುತ್ತಿರುವ ಹವಮಾನ ವೈಪರಿತ್ಯ ಕರಾವಳಿ ಜಿಲ್ಲೆಯ ಮೀನುಗಾರರ ಬದುಕಲ್ಲಿ ಬಿರುಗಾಳಿ ಎಬ್ಬಿಸಿದೆ. ಕಡಲಿನಲ್ಲಿ ಮೀನುಗಳ ಕೊರತೆ, ಜೊತೆಗೆ ಆಗಾಗ್ಗೆ ಸಂಭವಿಸುತ್ತಿರುವ ಬಿರುಗಾಳಿ ಚಂಡ ಮಾರುತಗಳ ಕಾರಣಗಳಿಂದಾಗಿ ಮೀನು ಇಳುವರಿ ಸಂಪೂರ್ಣ ಕುಸಿದಿದ್ದು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮಾಡಿದೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ ಬಂದ ಓಖಿ ಚಂಡಮಾರುತ ಕರಾವಳಿ ಮೀನುಗಾರಿಕೆಗೆ ಸಾಕಷ್ಟು ಹೊಡೆತ ನೀಡಿತ್ತು. ನಂತರ ಕಡಲಿನಲ್ಲಿ ನಿರಂತರ ಹವಮಾನ ವೈಫರಿತ್ಯ, ತೂಫಾನ್ ಸಂಭವಿಸುತ್ತಿದ್ದ ಕಾರಣ ತಿಂಗಳುಗಟ್ಟಲೆ ಮೀನುಗಾರಿಕೆ ಅಸ್ತವ್ಯಸ್ತಗೊಂಡಿತ್ತು. ಪರಿಸ್ಥಿತಿ ಬಿಟ್ಟು ಬುಡದೇ ಹೀಗೆ ಮುಂದುವರೆಯುತ್ತಿರುವುದು ಮೀನುಗಾರ ಬದುಕನ್ನು ಕಷ್ಟಕ್ಕೆ ದೂಡಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಅಲ್ಲದೇ ಇತ್ತೀಚೆಗೆ ಅರಬೀ ಸಮುದ್ರ ಪ್ರದೇಶದಲ್ಲಿ ವಾಯುಭಾರ ಕುಸಿತದಿಂದಾಗಿ ಕೇರಳ ಸಮುದ್ರದಲ್ಲಿ ಭಾರಿ ಅಲೆಗಳ ಮುನ್ಸೂಚನೆ ಹಿನ್ನಲೆಯಲ್ಲಿ ಮಂಗಳೂರು, ಮಲ್ಪೆ ಸಹಿತ ಉಭಯ ಜಿಲ್ಲೆಗಳಲ್ಲಿ ಮೀನುಗಾರಿಕೆ ಸ್ಥಗಿತಗೊಂಡಿದೆ. ಉಭಯ ಜಿಲ್ಲೆಗಳ ಸುಮಾರು ಶೇಕಡ 80 ರಷ್ಟು ದೋಣಿಗಳು ಲಂಗರು ಹಾಕಿವೆ. ಅಲ್ಲದೇ ಮೀನಗಾರಿಕೆಗೆ ತೆರಳಿದ್ದ ದೋಣಿಗಳು ಕಳೆದ ಎರಡು ದಿನಗಳಿಂದ ಹಿಂತಿರುಗಿ ಬರುತ್ತಿದೆ.

ಹವಮಾನ ಇಲಾಖೆಯ ಮುನ್ಸೂಚನೆಯಿರುವುದರಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟುಗಳು ವಾಪಾಸ್ ದಡ ಸೇರಿವೆ. ಅಲ್ಲದೆ ಮುಂದಿನ ಆದೇಶದವರೆಗೆ ಮೀನುಗಾರಿಕೆಗೆ ತೆರಳಬಾರದಂದು ಜಿಲ್ಲಾಡಳಿತ ಮುನ್ಸೂಚನೆ ನೀಡಿರುವುದರಿಂದ ಬೋಟುಗಳ ಬಂದರಿನಲ್ಲಿ ಲಂಗರು ಹಾಕಿವೆ. ಆಂದ್ರಪ್ರದೇಶ, ತಮಿಳುನಾಡು ಮೀನುಗಾರರ ಅನಿರೀಕ್ಷಿತವಾಗಿ ಸಿಕ್ಕ ಬಿಡುವಿನಲ್ಲಿ ತಮ್ಮ ತಮ್ಮ ಊರಿಗೆ ಹೊರಟು ಹೋಗಿದ್ದಾರೆ. ಕೆಲವು ಮೀನುಗಾರರು ತಮ್ಮ ದೋಣಿಗಳ ಸಣ್ಣಪುಟ್ಟ ರಿಪೇರಿ ಕೆಲಸದಲ್ಲಿ ತೊಡಗಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಒಟ್ಟು ಮೀನು ಉದ್ಯಮದಲ್ಲಿ ಕುಸಿತ ಕಂಡು ಬಂದಿದೆ. ಒಂದೆಡೆ ಮೀನು ಲಭ್ಯತೆ ಇಲ್ಲ. ತೂಫಾನ್ , ಹವಮಾನ ವೈಪರಿತ್ಯ ಒಟ್ಟು ಮೀನುಗಾರಿಕೆಗೆ ದೊಡ್ಡ ಹೊಡೆತವನ್ನು ನೀಡಿದೆ. ಪ್ರತಿವರ್ಷ ಈ ಸಮಯದಲ್ಲಿ ನಿರೀಕ್ಷಿತ ಮೀನುಗಾರಿಕೆ ನಡೆಯುವುದರಿಂದ ಮೀನುಗಾರರು ಕಂಗೆಟ್ಟಿದ್ದಾರೆ. ಲಕ್ಷಾಂತರ ಮೀನುಗಾರರು, ಕಾರ್ಮಿಕರು, ಮೀನುಗಾರಿಕೆಯನ್ನೇ ನೆಚ್ಚಿಕೊಂಡಿದ್ದು ಆಗಾಗ ಎದುರಾಗುತ್ತಿರುವ ಮೀನುಗಾರಿಕೆ ಸ್ಥಗಿತ ಪರಿಸ್ಥಿತಿ ಅವರ ಬದುಕನ್ನು ಶೋಚನೀಯವಾಗಿಸುತ್ತಿದೆ.

ಗಗನಕ್ಕೇರಿದ ಮೀನು ರೇಟು
ಕಳೆದ ಎರಡು ಮೂರು ದಿನಗಳಿಂದ ಮೀನುಗಾರಿಕೆ ಸ್ತಬ್ದಗೊಂಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಮೀನು ದರದಲ್ಲಿ ಏರಿಕೆಯಾಗಿದೆ. ಮೀನು ಮಾರುಕಟ್ಟೆಯಲ್ಲಿ ಬಂಗುಡೆ, ಅಂಜಲ್, ಬೂತಾಯಿ, ಬೊಂಡಾಸ್, ಕಾಣೆ ಮೀನುಗಳ ದರದಲ್ಲಿ ಶೇಕಡ 40 ರಷ್ಟು ಏರಿಕೆಯಾಗಿದೆ. ಇದರ ಪರಿಣಾಮ ಹೋಟೆಲ್ ಗಳಲ್ಲೂ ಮೀನು ಖಾದ್ಯಗಳ ಮೇಲೂ ಆಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications