Breaking: ಬೆಳ್ಳಾರೆಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಜುಲೈ 28; ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬವನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಾಲಿದ್ದಾರೆ.
ಇಂದು ಮಧ್ಯಾಹ್ನ 3:30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳಲಿದ್ದಾರೆ. ಬೆಳ್ಳಾರೆಗೆ ತೆರಳಿ ಮೃತ ಪ್ರವೀಣ್ ಕುಟುಂಬದವರಿಗೆ ಸಾಂತ್ವನ ಹೇಳುತ್ತೇನೆ ಎಂದು ಸಿಎಂ ಬೆಂಗಳೂರಿನಲ್ಲಿ ಹೇಳಿದರು.

ಬುಧವಾರ ಬಿಜೆಪಿ ನಾಯಕರು ಬೆಳ್ಳಾರೆಗೆ ಹೋದಾಗ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿದನ್ನು ಗಮನದಲ್ಲಿ ಇಟ್ಟುಕೊಂಡು ಸಿಎಂ ಈಗ ಬೆಳ್ಳಾರೆಗೆ ಹೋಗುವುದು ಸರಿಯಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೂ ಕೂಡ ಪ್ರವೀಣ್ ಕುಟುಂಬವನ್ನು ಭೇಟಿಯಾಗಲು ಬಸವರಾಜ ಬೊಮ್ಮಾಯಿ ಹೊರಟಿದ್ದಾರೆ.












Click it and Unblock the Notifications