ಸ್ವಾತಂತ್ರ್ಯ ವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ
ಮಂಗಳೂರು, ನವೆಂಬರ್ 19: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಮಂಗಳೂರಿನ ಬಾವುಟಗುಡ್ಡೆಯ ಟಾಗೋರ್ ಪಾರ್ಕ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದ ಸ್ವಾಮೀಜಿ ಅನಾವರಣಗೊಳಿಸಿದರು.
ಭಾರತದಲ್ಲಿ ಬ್ರಿಟಿಷರಿಗೆ ಮೊದಲ ಸೋಲಿನ ಭೀತಿ ಹುಟ್ಟಿಸಿದ, ಭಾರತದ ಜನಸಾಮಾನ್ಯರಿಗೆ ಬ್ರಿಟಿಷರ ವಿರುದ್ಧ ಪ್ರಥಮ ಜಯ ದೊರಕಿಸಿಕೊಟ್ಟ ಮಂಗಳೂರು ಕ್ರಾಂತಿಯ ರೂವಾರಿ ಎನ್ನುವ ಹೆಗ್ಗಳಿಕೆಗೆ ಕೆದಂಬಾಡಿ ರಾಮಯ್ಯ ಗೌಡ ಪಾತ್ರರಾಗಿದ್ದರು.
ಪ್ರತಿಮೆ ಅನಾವರಣ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಂಗಳೂರಿಗೆ ಇವತ್ತು ಮಹತ್ವದ ದಿನ, ಇತಿಹಾಸಕ್ಕೆ ಮಹತ್ವ ಕೊಡುವ ದಿನ. ಬೆಳಕಿಗೆ ಬಾರದ ರಾಮಯ್ಯ ಗೌಡರ ಕಥೆ ಈಗ ಸುದ್ದಿಗೆ ಬಂದಿದೆ. ರಾಮಯ್ಯ ಗೌಡರಂಥ ನಿರಂತರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಇತಿಹಾಸದಲ್ಲಿ ಇಂಥಹ ಮತ್ತಷ್ಟು ಸತ್ಯಗಳು ಹೊರಗೆ ಬರಬೇಕಿದೆ ಎಂದು ಹೇಳಿದರು.

ಮಾತು ಮುಂದುವರಿಸಿದ ಅವರು ರಾಮಯ್ಯ ಗೌಡ ಒರ್ವ ಶ್ರೇಷ್ಟ ಕ್ರಾಂತಿಕಾರಿ ಪುರುಷ. ಅವರನ್ನು ಸೋಲಿಸಲು ಬ್ರಿಟಿಷ್ ಸೈನ್ಯ ಒಟ್ಟಾಗಿ ಬಂದು ಗಲ್ಲಿಗೇರಿಸಿತು. ಇಂತಹ ಹೋರಾಟದ ಕಥೆ ಇಡೀ ದೇಶಕ್ಕೆ ಪರಿಚಯ ಆಗಬೇಕು. ಇದೀಗ ಅವರ ಮೂರ್ತಿ ಸ್ಥಾಪನೆ ಮೂಲಕ ಅವರ ಇತಿಹಾಸ ಜಗತ್ತಿಗೆ ಗೊತ್ತಾಗಿದೆ. ಇಂತಹ ಅನಾಮಧೇಯ ಹೋರಾಟಗಾರರು ನಮ್ಮಲ್ಲಿ ಬಹಳಷ್ಟು ಜನ ಇದ್ದಾರೆ. ಇಂತ ಅನಾಮಧೇಯ ಹೋರಾಟಗಾರರ ಸ್ಮಾರಕ ಮಾಡಲು ನನಗೆ ಸ್ಪೂರ್ತಿ ಬಂದಿದೆ. ಇವತ್ತಿನ ಪೀಳಿಗೆಗೆ ಇದನ್ನು ತಿಳಿ ಹೇಳಿ ಸ್ಪೂರ್ತಿ ತುಂಬುವ ಕೆಲಸ ಆಗಬೇಕಿದೆ ಎಂದು ಹೇಳಿದರು.
ಯಾರು ಈ ಕೆದಂಬಾಡಿ ರಾಮಯ್ಯ..?
ಜನಸಾಮಾನ್ಯರು ಹಾಗೂ ರೈತರ ಮೇಲೆ ಬ್ರಿಟಿಷರ ಕ್ರೌರ್ಯ ಹಾಗೂ ದಬ್ಬಾಳಿಕೆಯನ್ನು ಸಹಿಸದ ಕೆದಂಬಾಡಿ ರಾಮಯ್ಯ ಗೌಡರು 1837ರಲ್ಲಿ ಬ್ರಿಟಿಷರ ವಿರುದ್ಧ ರೈತ ಸೇನೆಯನ್ನು ಕಟ್ಟಿ, ಸ್ಮರಣೀಯ ಹೋರಾಟ ನಡೆಸಿದವರು. ಬೆಳ್ಳಾರೆಯಿಂದ ಸುಮಾರು 2000ದಷ್ಟು ಇದ್ದ ರೈತ ಸೇನೆಯು ಕೆದಂಬಾಡಿ ರಾಮಯ್ಯ ಗೌಡರ ಮನೆಯಿಂದ ಹೊರಟು ಮೊದಲಿಗೆ ಬೆಳ್ಳಾರೆಯಲ್ಲಿದ್ದ ಖಜಾನೆಯನ್ನು ವಶಪಡಿಸಿಕೊಂಡಿತು. ಹಾಗೆ ಬಂದ ರೈತ ದಂಡು ಸುಮಾರು 90 ಕಿ.ಮೀ.ದೂರದಲ್ಲಿರುವ ಮಂಗಳೂರು ಕಲೆಕ್ಟರ್ ಆಫೀಸ್ನ್ನು ಮುತ್ತಿಗೆ ಹಾಕಿತು. ಬಳಿಕ ನಗರದ ಗುಡ್ಡದ ಮೇಲಿನ ಲೈಟ್ ಹೌಸ್ನಲ್ಲಿ ವಿಜಯದ ಸಂಕೇತವಾದ ಬಾವುಟವನ್ನು ಹಾರಿಸಿದರು. ಮುಂದಕ್ಕೆ ಈ ಪ್ರದೇಶವು ಬಾವುಟಗುಡ್ಡವೆಂದೇ ಗುರುತಿಸಿಕೊಂಡಿತು.

ಈ ಮೂಲಕ ಕೆದಂಬಾಡಿ ರಾಮಯ್ಯ ಗೌಡರ ನೇತೃತ್ವದಲ್ಲಿ 13 ದಿನಗಳ ಕಾಲ ಸ್ಥಾಪಿತ ಸರಕಾರವನ್ನು ಮುನ್ನಡೆಸಲಾಯಿತು. ಇದು ಭಾರತದ ನೆಲದಲ್ಲಿ ಬ್ರಿಟಿಷರಿಗೆ ಒದಗಿದ ಪ್ರಥಮ ಸೋಲು ಹಾಗೂ ಭಾರತದ ಸಾಮಾನ್ಯ ಜನರಿಗೆ ಬ್ರಿಟಿಷರ ವಿರುದ್ಧ ದೊರಕಿದ ಪ್ರಪ್ರಥಮ ಜಯ. ಈ ಹೋರಾಟದಲ್ಲಿ ಹುತಾತ್ಮರಾದ ಕೆದಂಬಾಡಿ ರಾಮಯ್ಯ ಗೌಡರ ಹೆಸರನ್ನು ಭಾರತದ ಇತಿಹಾಸದ ಪುಟಗಳಲ್ಲಿ ದಾಖಲಿಸಿ ಮಂಗಳೂರಿನ ಚಾರಿತ್ರಿಕ ಸ್ಥಳವಾದ ಬಾವುಟಗುಡ್ಡೆಯಲ್ಲಿ ಅವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ಮೂಲಕ ಅವರ ಹೆಸರನ್ನು ಈ ನಾಡಿನಲ್ಲಿ ಶಾಶ್ವತವಾಗಿ ಉಳಿಸುವ ಪ್ರಯತ್ನ ಮಾಡಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications