ಜ. 19ರಂದು ಮಂಗಳೂರು ವಿವಿಗೆ ಸಿದ್ದರಾಮಯ್ಯ ಭೇಟಿ
ಮಂಗಳೂರು, ಜನವರಿ. 18 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 19ರಂದು ಗುರುವಾರ ಮಂಗಳೂರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿಲಿದ್ದಾರೆ.
ರಾಜ್ಯ ಸರ್ಕಾರದ ಎರಡು ಕೋಟಿ ರೂ. ಅನುದಾನ ದಲ್ಲಿ ನಿರ್ಮಾಣವಾಗಿರುವ ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮತ್ತು ಸಸ್ಯಶಾಸ್ತ್ರ ವಿಭಾಗದ ಹೊಸ ಕಟ್ಟಡವನ್ನು ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.[ಮಂಜೇಶ್ವರದಲ್ಲಿ ಜ. 19ರಂದು ಡಾ. ಗೋವಿಂದಪೈ ಸ್ಮಾರಕ ಉದ್ಘಾಟನೆ]
ವಿವಿಯಲ್ಲಿ ನಿರ್ಮಿಸಿರುವ ಅಂತಾರಾಷ್ಟ್ರೀಯ ಮಟ್ಟದ ಮಾಡ್ಯುಲರ್ ಪ್ರಯೋಗಾಲಯಗಳನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅನಾವರಣಗೊಳಿಸಲಿದ್ದಾರೆ.

ಇದಲ್ಲದೆ 2016-17 ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ದಾಖಲೆ ನಿರ್ಮಿಸಿದ ಮಂಗಳೂರು ವಿವಿಯ ಕ್ರೀಡಾಪಟುಗಳಿಗೆ ಬಿ.ರಮಾನಾಥ ರೈ ಸನ್ಮಾನ ಮಾಡಲಿದ್ದಾರೆ.
ಅಧ್ಯಯನ ಪೀಠದ ಬ್ರಹ್ಮಶ್ರೀ ನಾರಾಯಣ ಗುರು ಪುಸ್ತಕವನ್ನು ಶಾಸಕ ವಿನಯ್ ಕುಮಾರ್ ಸೊರಕೆ ಬಿಡುಗಡೆ ಮಾಡಲಿದ್ದಾರೆ.

ವಿಶ್ವ ವಿದ್ಯಾನಿಲಯ ಪ್ರಸಾರಾಂಗದ ರಜತ ಮಹೋತ್ಸವದ ಅಂಗವಾಗಿ ಪ್ರಸಾರಾಂಗ 25 ಪುಸ್ತಕಗಳನ್ನು ಪ್ರಕಟಗೊಳಿಸುವ ಗುರಿ ಇದ್ದು,
ಮೂರೂ ಆಂಗ್ಲ ಪುಸ್ತಕಗಳು ಸೇರಿದಂತೆ 19 ಪುಸ್ತಕಗಳ ಬಿಡುಗಡೆಯನ್ನು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪಾ ಹಾಗೂ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿವಿಯ ವಿಶ್ರಾಂತ ಕುಲಪತಿ ಪ್ರೊ.ವಿವೇಕ ರೈ ನೆರವೇರಿಸಲಿದ್ದಾರೆ.
ಅದೆ ದಿನ ಜನವರಿ 19ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಗಳ ನಿವಾಸ ಹಾಗೂ ಗೋವಿಂದ ಪೈ ಪ್ರತಿಮೆಯನ್ನು ಮಂಜೇಶ್ವರದಲ್ಲಿ ಉದ್ಘಾಟಿಸುವರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications