ಪೊಲೀಸರನ್ನು ಬಳಸಿ ಮಾಧ್ಯಮ ನಿರ್ಬಂಧಕ್ಕೆ ಮುಂದಾದ ಮುಖ್ಯಮಂತ್ರಿ
ಉಡುಪಿ, ಮೇ 01: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೋದಲ್ಲಿ ಬಂದಲ್ಲಿ ಮಾಧ್ಯಮಗಳ ಮೇಲೆ ಉರಿದು ಬೀಳುತ್ತಿದ್ದಾರೆ. ಅದರಲ್ಲೂ ಸುದ್ದಿವಾಹಿನಗಳ ಕ್ಯಾಮೆರಾ ಕಂಡರೆ ಸಿ ಎಂ ಗೆ ಎಲ್ಲಿಲ್ಲದ ಕೋಪ ಬರುತ್ತಿದೆ. ಹೋದಲೆಲ್ಲಾ ಸಿ ಎಂ ಮುಖ ಕಂಪಾಗಿಸಿಕೊಂಡು ಮಾಧ್ಯಮ ಗಳ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ.
ಎಡ-ಬಿಡದೆ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಪ್ರಕೃತಿ ಚಿಕಿತ್ಸೆ ಪಡೆಯಲು ಏಪ್ರಿಲ್ 28 ರ ರಾತ್ರಿ ಉಡುಪಿಯ ಕಾಪು ಎಂಬಲ್ಲಿರುವ ಹೆಲ್ತ್ ರೆಸಾರ್ಟ್ ಗೆ ಬಂದುತಂಗಿದ್ದಾರೆ .
ಹೆಲ್ತ್ ರಿಸಾರ್ಟ್ ಗೆ ಬರುವ ಸಂದರ್ಭದಲ್ಲೇ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ತಮ್ಮ ಮುನಿಸು ತೋರಿಸಿದ್ದರು. ಬೆಂಗಳೂರಿನಲ್ಲಿ ಮಾಧ್ಯಮ ವರದಿಗಾರರ ಮೇಲೆ ತಮ್ಮ ಮುನಿಸು ಹೊರಹಾಕಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಪು ಹೆಲ್ತೆ ರೆಸಾರ್ಟ್ ಭೇಟಿಯನ್ನು ಸಂಪೂರ್ಣ ಖಾಸಗಿಯಾಗಿಯೇ ಕಳೆಯಲು ಬಯಸಿದ್ದರು. ಹಾಗಾಗಿ ರೆಸಾರ್ಟ್ ನ ಅಸುಪಾಸಿಗೂ ಯಾರೂ ಬರದಂತೆ ಪೊಲೀಸರಿಗೆ ಸೂಚಿಸಿದ್ದರು.
ಅಂದು ರಾತ್ರಿ ಚಿತ್ರೀಕರಣಕ್ಕೆ ತೆರಳಿದ್ದ ಮಾಧ್ಯಮದವರಿಗೆ ಪೊಲೀಸರು ಅಡ್ಡಿಪಡಿಸಿದ್ದರು. ಮಾಧ್ಯಮ ವರದಿಗಾರರಿಗೆ ಸಾರ್ವಜನಿಕ ರಸ್ತೆಯಲ್ಲೂ ನಿಲ್ಲಲು ಅವಕಾಶ ನಿರಾಕರಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗು ಮಾದ್ಯಮ ಪ್ರತಿನಿಧಿಗೊಂದಿಗೆ ಮಾತಿನ ಚಕಮಕಿಯೂ ನಡೆದಿತ್ತು.

'ಯಾರ್ರಿ ಇವರನ್ನು ಒಳಗೆ ಬಿಟ್ಟಿದ್ದು'
ಈ ಮೊದಲು ಏಪ್ರಿಲ್ 21 ರಂದು ಕಾಪು ಹೆಲ್ತ್ ರಿಸಾರ್ಟ್ ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಗಮಿಸುತ್ತಿದ್ದಂತೆ ಮಾಧ್ಯಮದವರ ವಿರುದ್ಧ ಕಿಡಿಕಾರಿದ್ದರು. ರೆಸಾರ್ಟ್ ಗೆ ಆಗಮಿಸುತ್ತಿದ್ದಂತೆ ಮಾಧ್ಯಮದವರ ಕ್ಯಾಮೆರಾಗಳನ್ನು ಕಂಡು ಕೋಪಗೊಂಡ ಕಮಾರಸ್ವಾಮಿ , 'ಯಾರ್ರೀ ಇವರನ್ನ ಒಳಗೆ ಬಿಟ್ಟವರು. ಸ್ವಲ್ಪನೂ ಮ್ಯಾನರ್ಸ್ ಇಲ್ವೇನ್ರೀ ಇವರಿಗೆ. ಮಾಧ್ಯಮಗಳಿಗೆ ಮಾಹಿತಿ ಕೊಟ್ಟೋರು ಯಾರು? ಖಾಸಗಿ ಕಾರ್ಯಕ್ರಮ ಅಂತ ಗೊತ್ತಿಲ್ವಾ ನಿಮ್ಗೆ? ಕಾಮನ್ ಸೆನ್ಸ್ ಇಲ್ವಾ ನಿಮಗೆ' ಎಂದು ರೆಸಾರ್ಟ್ ಪ್ರವೇಶ ಶೂಟಿಂಗ್ ಮಾಡಿದ್ದಕ್ಕೆ ಗರಂ ಆಗಿದ್ದರು.

ಪೊಲೀಸರನ್ನು ಬಳಸಿ ಮಾಧ್ಯಮದ ಮೇಲೆ ದಬ್ಬಾಳಿಕೆ
ಈಗ ಮತ್ತೇ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಪೊಲೀಸ್ ಆಧಿಕಾರಿಗಳನ್ನು ಬಳಸಿ ಮಾಧ್ಯಮಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ.

ಮನೆಯವರ ಮೇಲೆ ಪೊಲೀಸರ ದಬ್ಬಾಳಿಕೆ
ಕಾಪು ರಿಸಾರ್ಟ್ ಪಕ್ಕದಲ್ಲಿರುವ ಸಣ್ಣ ಮನೆ ಅಂಗಳದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ಕೆಂಗಣ್ಣು ಬೀರಿದ್ದಾರೆ. ಮಾಧ್ಯಮದವರಿಗೆ ಕುಡಿಯಲು ನೀರು ಕೊಟ್ಟು ಮನೆಯ ಜಗಲಿಯ ಮೇಲೆ ವಿಶ್ರಾಂತಿ ಪಡೆಯಲು ಅವಕಾಶ ನೀಡಿದ್ದ ಮನೆಯವರ ಮೇಲೆ ಪೋಲಿಸರಿಂದ ದಬ್ಬಾಳಿಕೆ ನಡೆಸಲಾಗಿದೆ. ಮಾಧ್ಯಮದವರಿಗೆ ಆಶ್ರಯ ನೀಡದಂತೆ ರಿಸಾರ್ಟ್ ಸುತ್ತಲಿನ ಮನೆಯವರಿಗೆ ಪೊಲೀಸ್ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ.

ಜನರಿಗೆ ತೊಂದರೆ ಕೊಡುತ್ತಿರುವ ಪೊಲೀಸರು?
ಮಾಧ್ಯಮದವರಿಗೆ ಆಶ್ರಯ ನೀಡದಂದೆ, ಒಂದು ವೇಳೆ ಆಶ್ರಯ ನೀಡಿದರೆ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಗೆ ನೀಡಲಾಗಿದೆ. ಮಾಧ್ಯಮ ನಿರ್ಬಂದ ಹೆಸರಿನಲ್ಲಿ ಪೋಲಿಸರಿಂದ ಪರಿಸರದ ಜನರಿಗೆ ತೊಂದರೆ ನೀಡಲಾಗುತ್ತಿದೆ. ಮಾಧ್ಯಮದವರು ಸಾರ್ವಜನಿಕ ರಸ್ತೆಯಲ್ಲೂ ನಿಲ್ಲದಂತೆ ಪೋಲಿಸರು ಒತ್ತಡ ಹೇರುತ್ತಿದ್ದಾರೆ.

ಮಾಧ್ಯಮದವರಿಗೆ ಆಶ್ರಯ ನೀಡಿದ್ದವರ ಮೇಲೆ ದರ್ಪ
ಮಾಧ್ಯಮದವರು ಜಗಲಿಯ ಮೇಲೆ ವಿಶ್ರಾತಿಗೆ ಅವಕಾಶ ನೀಡಿದ್ದ ಮನೆಗೆ ಇಂದು ಆಗಮಿಸಿದ ಕಾಪು ಪೊಲೀಸ್ ಠಾಣೆಯ ಎಸ್ ಐ ನವೀನ್ ಎಸ್ ನಾಯ್ಕ್ ನಿಮ್ಮ ಮನೆಯ ದಾಖಲೆ ಕೊಡಿ ಎಂದು ಮನೆಯವರಿಗೆ ಬೆದರಿಕೆ ಹಾಕಿದ್ದಾರೆ. ಮಧ್ಯಮ ದವರಿಗೆ ಇಲ್ಲಿ ಆಶ್ರಯ ನೀಡಬೇಡಿ ಮುಂದೆ ನಿಮ್ಮ ಮೇಲೂ ಕ್ರಮ ಆಗುತ್ತೆ ಎಂದು ಪೋಲಿಸ ಅಧಿಕಾರಿ ಬೆದರಿಕೆ ಹಾಕಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಹಾಗು ಪೊಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಮಾಧ್ಯಮದವರ ಮೇಲೆ ಸಿಎಂ ಉರಿದು ಬೀಳುತ್ತಿದ್ದಾರೆ
ಖಾಸಗಿ ಜಾಗಕ್ಕೂ ಬಂದು ಪೋಲಿಸರ ದರ್ಪ ತೋರುತ್ತಿರುವುದರ ಹಿಂದಿನ ಮರ್ಮವೇನು ? ಏನನ್ನು ಮುಚ್ಚಿಡಲು ಈ ಎಲ್ಲಾ ಕಸರತ್ತು ನಡೆಯುತ್ತಿದೆ ಎಂಬ ಪ್ರಶ್ನೆ ಪರಿಸರದಲ್ಲಿ ಮೂಡಲಾರಂಭಿಸಿದೆ. ಮುಖ್ಯಮಂತ್ರಿಗಳ ವಿಶ್ರಾಂತಿಗೆ ಭಂಗದರುವ ಯಾವ ಕಾರ್ಯಕ್ಕೂ ಮಾಧ್ಯಮ ಮರದಿಗಾರರು ಮುಂದಾಗಿಲ್ಲ. ಸಿ ಎಂ ಖಾಸಗಿ ಸಮಯದಲ್ಲೂ ಎಂಟ್ರಿ ಕೊಟ್ಟಿಲ್ಲ. ಆದರೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮಾಧ್ಯಮಗಳನ್ನು ಕಂಡರೆ ಯಾಕೆ ಉರಿದು ಬೀಳುತ್ತಾರೆ ಎಂಬುದೇ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications