ಮಂಗಳೂರಿಗೆ ಯೋಗಿ ಆದಿತ್ಯನಾಥ್ ಭೇಟಿ; ರಾಮಮಂದಿರದ ಬಗ್ಗೆ ಪೇಜಾವರ ಶ್ರೀ ಜತೆ ಚರ್ಚೆ

ಮಂಗಳೂರು, ಫೆಬ್ರವರಿ 22: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಭಾನುವಾರ ಕಾಸರಗೋಡು ಪ್ರವಾಸಗೈದು ಹಿಂದಿರುಗುವ ಸಂದರ್ಭ ದಾರಿ ಮಧ್ಯೆ ಕದ್ರಿಯಲ್ಲಿರುವ ಕದಲೀ ಶ್ರೀ ಯೋಗೇಶ್ವರ ಮಠಕ್ಕೆ ಭೇಟಿ ನೀಡಿದರು.

ಮಠದ ಬಾಲಾಯದಲ್ಲಿರುವ ಕಾಲಭೈರವ ಮತ್ತು ಶಿವನ ಪೂಜೆ ನೆರವೇರಿಸಿದ ಯೋಗಿ ಆದಿತ್ಯನಾಥ್, ಶ್ರೀ ರಾಜ ಯೋಗಿ ನಿರ್ಮಲನಾಥ ಜಿ ಮಹಾರಾಜ್‌ ಜತೆ ಮಾತುಕತೆ ನಡೆಸಿದರು. ಬಳಿಕ ಮಠದ ಗುರು ಸಭಾಗೃಹ ಮತ್ತು ಅನ್ನಛತ್ರವನ್ನು ಉದ್ಘಾಟಿಸಿದರು.

ಮಠದಲ್ಲಿ ಮುಂದೆ ನಡೆಯುವ ದೇವಸ್ಥಾನದ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವಕ್ಕೆ ಆಗಮಿಸುವಂತೆ ಯೋಗಿ ಆದಿತ್ಯನಾಥ್ ಅವರಿಗೆ ಆಮಂತ್ರಣ ನೀಡಲಾಯಿತು.

CM Yogi Adityanath Visits Mangaluru; Talks With The Pajawar Sri About The Ram Mandir

ಪೇಜಾವರ ಶ್ರೀ ಚರ್ಚೆ
ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಸದಸ್ಯರಾಗಿರುವ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕುರಿತು ಉತ್ತರ ಪ್ರದೇಶ ಸಿಎಂ ಜೊತೆ ಮಾತುಕತೆ ನಡೆಸಿದರು.

ಮಠದಲ್ಲಿ ಚಪಾತಿ, ಅನ್ನ, ಹಣ್ಣು ಹಂಪಲು ಸಹಿತ ಭೋಜನ ಸ್ವೀಕಾರ ಮಾಡಿ, ಬಳಿಕ ಮಂಗಳೂರು ವಿಮಾನ ನಿಲ್ದಾಣ ಮೂಲಕ ಉತ್ತರ ಪ್ರದೇಶಕ್ಕೆ ಯೋಗಿ ಆದಿತ್ಯನಾಥ್ ತೆರಳಿದರು.ಶಾಸಕ ವೇದವ್ಯಾಸ ಡಿ.ಕಾಮತ್‌, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಕಾರ್ಪೊರೇಟರ್‌ಗಳಾದ ಶಕಿಲಾ ಕಾವ ಮತ್ತು ಮನೋಹರ ಶೆಟ್ಟಿ, ಮಠದ ಅಭಿಮಾನಿಗಳಾದ ಅಜಯ್ ಕುಮಾರ್‌, ವಾಸುದೇವ ಡಿ.ಕಾಮತ್‌, ಎಚ್‌.ಕೆ.ಪುರುಷೋತ್ತಮ, ಎಆರ್‌ಟಿಒ ಗಂಗಾಧರ್‌, ಕಿರಣ್‌ ಕುಮಾರ್‌ ಜೋಗಿ ಮತ್ತಿತರರಿದ್ದರು.

ಇದಕ್ಕೂ ಮುನ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌ ಕಟೀಲ್ ಸ್ವಾಗತಿಸಿದರು. ಶಾಸಕ ಡಾ.ಭರತ್‌ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಎಂ., ಮುಡಾ ಅಧ್ಯಕ್ಷ ರವಿಶಂಕರ್‌ ಮಿಜಾರು, ಮೇಯರ್ ದಿವಾಕರ ಪಾಂಡೇಶ್ವರ ಮತ್ತಿತರರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+