ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿಯಲ್ಲಿ ಹೆಚ್ಚಾದ ಸಮುದ್ರದ ಅಲೆಗಳ ಅಬ್ಬರ;ಮಳೆಯ ಮುನ್ಸೂಚನೆ

|
Google Oneindia Kannada News

ಮಂಗಳೂರು, ಮೇ 11:ರಾಜ್ಯದ ಕರಾವಳಿಯಲ್ಲಿ ಮುಂದಿನ 2 ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಒತ್ತಡದ ಪರಿಣಾಮ ಭಾನುವಾರದಿಂದ (ಮೇ.10) 2 ದಿನಗಳ ಕಾಲ ಕರಾವಳಿಯ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿಯಲ್ಲಿ ಸಮುದ್ರದಲ್ಲಿ ಬಲವಾದ ಗಾಳಿ ಬೀಸುತ್ತಿದೆ.ಪರಿಣಾಮ ಅಲೆಗಳ ಅಬ್ಬರ ಹೆಚ್ಚಾಗಿದೆ. ಅಲೆಗಳ ಏರಿಳಿತದಲ್ಲಿ ವ್ಯತ್ಯಾಸ ಗೋಚರಿಸುತ್ತಿದ್ದು, ಶುಕ್ರವಾರ ಮತ್ತಷ್ಟು ಬಿರುಸುಗೊಂಡಿತ್ತು ಎಂದು ಹೇಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಡರಾತ್ರಿ ಗುಡುಗು ಸಹಿತ ಸುರಿದ ಮಳೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಡರಾತ್ರಿ ಗುಡುಗು ಸಹಿತ ಸುರಿದ ಮಳೆ

ಈ ನಡುವೆ ಕೇರಳದ ಕಾಸರಗೋಡು ಕಡಲತಡಿಯಲ್ಲಿ ಕಡಲ್ಕೊರೆತ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಕಾಸರಗೋಡು ಆಸುಪಾಸಿನಲ್ಲಿ ಮುಂದಿನ 24 ತಾಸುಗಳಲ್ಲಿ ತೀವ್ರ ಕಡಲ್ಕೊರೆತ ತಲೆದೋರುವ ಸಾಧ್ಯತೆಯಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Coastal districts expected to get rain for two days

ರಾಜ್ಯದ ಕರಾವಳಿಯಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದರಿಂದ ಪ್ರವಾಸಿಗರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉಡುಪಿಯ ಸೈಂಟ್‌ ಮೇರೀಸ್‌ ದ್ವೀಪಕ್ಕೆ ತೆರಳುವ ಟೂರಿಸ್ಟ್‌ ಬೋಟುಗಳ ಪ್ರಯಾಣವನ್ನು ನಿಲ್ಲಿಸಲಾಗಿದೆ.

ರಾಜಧಾನಿಯಲ್ಲಿ ಸುರಿದ ಧಾರಾಕಾರ ಮಳೆ, ಎಲ್ಲೆಲ್ಲಿ ಅವಾಂತರರಾಜಧಾನಿಯಲ್ಲಿ ಸುರಿದ ಧಾರಾಕಾರ ಮಳೆ, ಎಲ್ಲೆಲ್ಲಿ ಅವಾಂತರ

ಸಮುದ್ರ ಕಿನಾರೆಗಳಲ್ಲಿ ಯಾವುದೇ ಜಲಸಾಹಸ ಕ್ರೀಡೆಗಳಿಗೆ ತಡೆ ಒಡ್ಡಲಾಗಿದೆ. ನಾಲ್ಕೈದು ದಿನಗಳವರೆಗೆ ಸಮುದ್ರದಲ್ಲಿ ಈ ವ್ಯತ್ಯಾಸ ಇರುವ ಸಾಧ್ಯತೆ ಇದೆ ಎಂದು ಮೀನುಗಾರರು ಅಭಿಪ್ರಾಯಪಟ್ಟಿದ್ದಾರೆ.

English summary
Meteorological department predicted two day normal rain in Coastal Karnataka districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X