ಯೂರೋಪ್ ರಾಷ್ಟ್ರಗಳಲ್ಲಿ ಕರಾವಳಿಯ ಯಕ್ಷಗಾನ ಕಲರವ
ಮಂಗಳೂರು, ಜೂನ್, 16: ಭಾರತದ ಅಭಿಜಾತ ಕಲಾಪ್ರಕಾರವಾಗಿ ಗುರುತಿಸಬೇಕಾದ ಯಕ್ಷಗಾನವು ಕರಾವಳಿಯ ಕಡಲಾಚೆಯೂ ತನ್ನ ಕಂಪನ್ನು ಪಸರಿಸುತ್ತಿದೆ. ಮಳೆಗಾಲದಲ್ಲಿ ರಾಜ್ಯದ ಇತರೆಡೆಗಳಲ್ಲಿ, ಮುಂಬೈ, ದೆಹಲಿಯಲ್ಲಿ ಕರಾವಳಿಯ ಯಕ್ಷಗಾನ ಸದ್ದು ಮಾಡುತ್ತಿದೆ. ಅದೇ ರೀತಿ ಇದೀಗ ಯಕ್ಷಧ್ರುವ ಪಟ್ಲ ಫೌಂಡೇಶನ್ನಿಂದ ಯುರೋಪ್ ದೇಶದ ವಿವಿಧ ಭಾಗಗಳಲ್ಲಿ ಯಕ್ಷಗಾನ ಪ್ರದರ್ಶನ ನಿನ್ನೆಯಿಂದ ಆರಂವಾಗಿದ್ದು, ಇನ್ನು ಒಂದು ವಾರಗಳ ಕಾಲ ನಡೆಯಲಿದೆ.
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ತಂಡ ಲಂಡನ್ ತಲುಪಿದೆ. ಒಂದು ವಾರ ಲಂಡನ್, ಮಿಡ್ಲ್ಯಾಂಡ್, ಎಡಿನ್ ಬರ್ಗ್, ಸ್ಕಾಟ್ ಲ್ಯಾಂಡ್ಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡಲಿದ್ದಾರೆ. ಕನ್ನಡಿಗರೊಂದಿಗೆ ಬ್ರಿಟೀಷ್ ಪ್ರಜೆಗಳು ಇಲ್ಲಿ ಯಕ್ಷಗಾನವನ್ನು ಆಸ್ವಾದಿಸಲು ಸಜ್ಜಾಗಿದ್ದಾರೆ.

ಇನ್ನು ದುರಾಅಮ್ ಹಾಗೂ ಲೀಡ್ಸ್ ವಿಶ್ವವಿದ್ಯಾಲಯಗಳಲ್ಲಿ ಯಕ್ಷಗಾನದ ಶಿಬಿರ ನಡೆಯಲಿದೆ. ಇಲ್ಲಿ ಬಣ್ಣಗಾರಿಕೆಯೊಂದಿಗೆ ಕುಣಿತ, ಅಭಿನಯಗಳೊಂದಿಗೆ ಪ್ರಾತ್ಯಕ್ಷಿಕೆ ನಡೆಯಲಿದೆ. ನಂತರ ಆಗಸ್ಟ್ನಲ್ಲಿ ಫ್ರಾನ್ಸ್, ಪ್ಯಾರಿಸ್, ಫ್ರಾಂಕ್ ಫರ್ಟ್, ಮನಿಚ್, ಜರ್ಮನಿ, ಬಿಲ್ಲಿಂಗಾಮ್ಗಳಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಈ ವೇಳೆ ಕಲಾವಿದರು ಶ್ರೀಕೃಷ್ಣ ಲೀಲೆ - ಕಂಸವಧೆ, ನರಕಾಸುರ ಮೋಕ್ಷ, ಸುದರ್ಶನ ವಿಜಯ ಪ್ರಸಂಗವನ್ನು ಪ್ರದರ್ಶಿಸಲಿದ್ದಾರೆ.
ಪಣಂಬೂರು ವಾಸು ಐತಾಳ್ ಅವರ ನೇತೃತ್ವದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿಯವರೊಂದಿಗೆ ಪ್ರೊ.ಎಂ.ಎಲ್.ಸಾಮಗ, ಕಲಾವಿದರಾದ ಪದ್ಮನಾಭ ಉಪಾಧ್ಯಾಯ, ಚೈತನ್ಯಕೃಷ್ಣ ಪದ್ಯಾಣ, ಚಂದ್ರಶೇಖರ ಧರ್ಮಸ್ಥಳ, ಮಹೇಶ್ ಮಣಿಯಾಣಿ, ಪ್ರಶಾಂತ್ ಶೆಟ್ಟಿ ನೆಲ್ಯಾಡಿ, ಮೋಹನ್ ಬೆಳ್ಳಿಪಾಡಿಯವರು ಕಡಲಾಚೆ ಯಕ್ಷಗಾನದ ಕಲರವ ಮೂಡಿಸಲಿದ್ದಾರೆ.
ಈಗಾಗಲೇ ಯಕ್ಷಗಾನ ಬಯಲಾಟಗಳು ತಮ್ಮ ಪ್ರದರ್ಶನ ನಿಲ್ಲಿಸಿದ್ದು, ಮಳೆಗಾಲ ಮುಗಿದ ಬಳಿಕ ಮತ್ತೆ ಯಕ್ಷಗಾನ ಪ್ರದರ್ಶನ ಆರಂಭಗೊಳ್ಳಲಿದೆ. ಮುಂದಿನ ಎರಡು ತಿಂಗಳು ಅಲ್ಲಲ್ಲಿ ಕಲಾವಿದರ ತಂಡಗಳು ಆಹ್ವಾನಿತ ಪ್ರದರ್ಶನ ನೀಡಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ITI ವಿದ್ಯಾರ್ಥಿಗಳಿಂದ ಸಾಧನೆ
ಮಾನ್ವಿ ಪಟ್ಟಣದ ಬಸವ ಐಟಿಐ ಕಾಲೇಜು ವಿದ್ಯಾರ್ಥಿಗಳು ಜೀಪ್ ಮಾದರಿಯಲ್ಲಿ ವಿನೂತನವಾದ ಪರಿಸರ ಸ್ನೇಹಿ ಸೋಲಾರ್ ಎಲೆಕ್ಟ್ರಿಕ್ ವಾಹನ ತಯಾರಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ಬಸವ ಐಟಿಐ ಕಾಲೇಜಿನ ಎಲೆಕ್ಟ್ರಾನಿಕ್ ಮೆಕ್ಯಾನಿಕ್ ವಿಭಾಗದ ಅಂತಿಮ ವರ್ಷದ ಮೂರ್ತಿ ಶೇಷ ಚಾಗಬಾವಿ ಕ್ಯಾಂಪ್, ಸಿದ್ದಪ್ಪ ಮಾಡಗಿರಿ, ವಿ.ಎಸ್. ರುತಿನ್ ಬಲ್ಲಟಗಿ, ಅಶೋಕ ಹರವಿ, ಶ್ರೀನಿವಾಸ ಬಲ್ಲಟಗಿ ಇತರ 16 ಜನ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲ ತಿಪ್ಪಣ್ಣ ಎಂ.ಹೊಸಮನಿ ಬಲ್ಲಟಗಿ ಹಾಗೂ ಕಿರಿಯ ತರಬೇತಿ ಅಧಿಕಾರಿ ಶಿವಪುತ್ರ ಅವರ ಮಾರ್ಗದರ್ಶನದಲ್ಲಿ ಈ ವಾಹನ ಸಿದ್ಧಪಡಿಸಿದ್ದಾರೆ.
ಎರಡು ಸೋಲಾರ್ ಪ್ಯಾನಲ್, 70 ಎಎಚ್ ಬ್ಯಾಟರಿ , 1 ಕಿಲೋವ್ಯಾಟ್ ಬಿಎಲ್ಡಿಸಿ ಮೋಟಾರ್ ಜತೆಗೆ ಕಂಟ್ರೋಲರ್, ಎಕ್ಸಲೇಟರ್, ಡಿಸ್ಕ್ ಬ್ರೇಕ್, ಬ್ಯಾಕ್ ವ್ಹೀಲ್ ಡಿಫರೆನ್ಷಿಯಲ್, ಹೆಡ್ ಲೈಟ್, ಇಂಡಿಕೇಟರ್ಗಳನ್ನು ಬಳಸಿ ನಾಲ್ಕು ಸೀಟುಗಳನ್ನು ಹೊಂದಿರುವ ಈ ವಾಹನ ತಯಾರಿಸಲಾಗಿದೆ.
ಈ ವಾಹನವು ಪ್ರತಿ ಗಂಟೆಗೆ 35ರಿಂದ 40 ಕಿ.ಮೀ. ಚಲಿಸುವ ಸಾಮರ್ಥ್ಯ ಹೊಂದಿದೆ. ಈ ವಾಹನಕ್ಕೆ 5ರಿಂದ 6 ಕಿಲೋವ್ಯಾಟ್ ಸಾಮರ್ಥ್ಯದ ಮೋಟಾರ್ ಬಳಸಿದರೆ ಪ್ರತಿ ಗಂಟೆಗೆ 100ರಿಂದ 120 ಕಿ.ಮೀ. ವೇಗದಲ್ಲಿ ಚಲಿಸುತ್ತದೆ ಎಂದು ಪ್ರಾಂಶುಪಾಲ ತಿಪ್ಪಣ್ಣ ಎಂ.ಹೊಸಮನಿ ವಿವರಿಸಿದ್ದಾರೆ.
ಪೆಟ್ರೋಲ್ ಅಥವಾ ಡೀಸೆಲ್ ಬಳಸದೆ ಸೌರಶಕ್ತಿಯ ಮೂಲಕ ಬಳಸಲ್ಪಡುವ ಈ ಸೋಲಾರ್ ಎಲೆಕ್ಟ್ರಿಕ್ ವಾಹನ ವಾಯು ಮಾಲಿನ್ಯ ತಡೆಗಟ್ಟಲು ಪೂರಕ ಎಂಬುದು ವಿದ್ಯಾರ್ಥಿಗಳ ಅಭಿಪ್ರಾಯ. ಹೊರನೋಟಕ್ಕೆ ಜೀಪಿನಂತೆ ಕಾಣುವ ಈ ವಾಹನದಲ್ಲಿ ವಿದ್ಯಾರ್ಥಿಗಳು ಮಾನ್ವಿ ಪಟ್ಟಣದಲ್ಲಿ ಸಂಚರಿಸುವ ಮೂಲಕ ಸ್ಥಳೀಯರ ಗಮನ ಸೆಳೆಯುತ್ತಿದ್ದಾರೆ.
ಕಳೆದ ವರ್ಷ ಇದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಸೋಲಾರ್ ಇ-ಬೈಸಿಕಲ್ ತಯಾರಿಸಿ ಸಾಧನೆ ಮಾಡಿದ್ದರು. ಅಂತರರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರದ ಯುಎನ್ಡಿಪಿ ಸಂಸ್ಥೆ, ಪ್ರಾಜೆಕ್ಟ್ ಕೋಡ್ ಉನ್ನತಿ, ರಾಜ್ಯ ಸರ್ಕಾರದ ಕೌಶಲಾಭಿವೃದ್ಧಿ ಇಲಾಖೆ ಹಾಗೂ ಎಸ್ಎಪಿ ಲ್ಯಾಬ್ಸ್ ಸಂಸ್ಥೆಗಳ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿ ಮೂಡಿಸಲು ಹಮ್ಮಿಕೊಳ್ಳಲಾಗಿದ್ದ ಹೊಸ ಆವಿಷ್ಕಾರಗಳ ಸ್ಪರ್ಧೆಯಲ್ಲಿ ಬಸವ ಐಟಿಐ ಕಾಲೇಜು ವಿದ್ಯಾರ್ಥಿಗಳು ಆವಿಷ್ಕರಿಸಿದ ಸೋಲಾರ್ ಇ-ಬೈಸಿಕಲ್ ಬಗ್ಗೆ ತೀರ್ಪುಗಾರರಿಂದ ಪ್ರಶಂಸೆ ವ್ಯಕ್ತವಾಗಿತ್ತು. ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ₹1ಲಕ್ಷ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಪ್ರೋತ್ಸಾಹಿಸಿತ್ತು.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications