ನಾಗರ ಪಂಚಮಿ ದಿನದಂದೇ ನಡೆಯಿತು ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಅಚ್ಚರಿ!
ಮಂಗಳೂರು, ಜುಲೈ 25: ನಾಡಿನ ಪ್ರಸಿದ್ದ ನಾಗಸನ್ನಿಧಿ ಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಾಗರ ಪಂಚಮಿಯ ದಿನದಂದೇ ಅಚ್ಚರಿಯೊಂದು ನಡೆದಿದೆ.
Recommended Video
ಕ್ಷೇತ್ರದ ಹೊರಾಂಗಣ ಮತ್ತು ಒಳಾಂಗಣದಲ್ಲಿ ನಾಗರಹಾವು ಪ್ರತ್ಯಕ್ಷವಾಗಿ, ಇಡೀ ದೇವಾಲಯಕ್ಕೆ ಪ್ರದಕ್ಷಿಣೆಯನ್ನು ಹಾಕಿದೆ. ಮೂಲ ದೇವರಿಗೆ ಪಂಚಾಮೃತ ಅಭಿಷೇಕದ ನಂತರ ನಾಗರಹಾವು ಪ್ರತ್ಯಕ್ಷವಾಗಿದೆ.
ಕೋವಿಡ್ ಕಾರಣ, ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಗರ್ಭಗುಡಿಯೊಳಗಿನ ಹುತ್ತದಿಂದ ನಾಗರಹಾವು ಹೊರಗೆ ಬಂದಿದ್ದು ವಿಶೇಷವಾಗಿತ್ತು. ಮೊದಲಿಗೆ ಅರ್ಚಕರ ಕಣ್ಣಿಗೆ ಬಿದ್ದಿದೆ. ನಾಗ ದೇವರೇ ಪ್ರತ್ಯಕ್ಷರಾದರು ಎನ್ನುವ ಭಾವನೆಯನ್ನು ದೇವಲಾಯದ ಅರ್ಚಕರು ವ್ಯಕ್ತ ಪಡಿಸಿದ್ದಾರೆ.

ದೇವಾಲಯದ ಪ್ರಧಾನ ಅರ್ಚಕರು ಹಾವಿಗೆ ಹಾಲನ್ನು ನೀಡಿದ ಬಳಿಕ, ಹಾವು ದೇವಸ್ಥಾನದ ಅಂಗಣದಿಂದ ಹೊರ ನಡೆದಿದೆ. ಗರ್ಭಗುಡಿಯ ಹಿಂಬಾಗದಲ್ಲಿ ಹುತ್ತವಿದ್ದು, ವರ್ಷಕ್ಕೊಮ್ಮೆ ಇಲ್ಲಿಂದ ಮೂರು ಹಿಡಿ ಮಣ್ಣನ್ನು (ಮೃತ್ತಿಕೆ) ತೆಗೆಯಲಾಗುತ್ತದೆ. ಇದು, ದೇವಾಲಯದ ಮೂಲ ಪ್ರಸಾದವಾಗಿದೆ.
ನಾಗರ ಪಂಚಮಿಯ ದಿನದಂದೇ ನಾಗರಹಾವು ದೇವಾಲಯಕ್ಕೆ ಪ್ರದಕ್ಷಿಣೆ ಹಾಕಿ, ಹಾಲು ಕುಡಿದು ಹೋಗಿರುವುದಕ್ಕೆ ದೇವಾಲಯದ ಅರ್ಚಕ ವೃಂದ ಮತ್ತು ಸಿಬ್ಬಂದಿಗಳು ಧನ್ಯತೆ ವ್ಯಕ್ತಪಡಿಸಿದ್ದಾರೆ.
ಇದೇ ಮೊದಲ ಬಾರಿಗೆ ನಾಗರಪಂಚಮಿಯಂದು ಭಕ್ತರಿಗೆ ದೇಗುಲಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿರಲಿಲ್ಲ. ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿತ್ತು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications