ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾರಿಯುದ್ದಕ್ಕೂ ಫೋನ್ ನಲ್ಲಿ ಕ್ಷಮೆ ಕೇಳಿದ್ದ ಸಿದ್ಧಾರ್ಥ

|
Google Oneindia Kannada News

ಮಂಗಳೂರು, ಜುಲೈ 30: ಕೆಫೆ ಕಾಫಿ ಡೇ ಮಾಲೀಕ ಉದ್ಯಮಿ ಸಿದ್ಧಾರ್ಥ ಅವರ ನಾಪತ್ತೆ ಪ್ರಕರಣವನ್ನು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

CCD Owner VG Siddhartha Missing LIVE: 'ಮಾದರಿ ಉದ್ಯಮಿ'ಯ ಹಠಾತ್ ನಾಪತ್ತೆ: ಕ್ಷಣ-ಕ್ಷಣದ ಮಾಹಿತಿCCD Owner VG Siddhartha Missing LIVE: 'ಮಾದರಿ ಉದ್ಯಮಿ'ಯ ಹಠಾತ್ ನಾಪತ್ತೆ: ಕ್ಷಣ-ಕ್ಷಣದ ಮಾಹಿತಿ

ಸಿದ್ದಾರ್ಥ ನಾಪತ್ತೆಯಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆ ಮೇಲೆ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮರಾದಲ್ಲಿ ದಾಖಲಾಗಿರುವ ವಿಡಿಯೋಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಿದ್ದಾರ್ಥ ಅವರು ಬಳಸಿದ ಕಾರನ್ನು ನಗರದ ಕಂಕನಾಡಿ ನಗರ ಠಾಣೆಯಲ್ಲಿ ಇರಿಸಲಾಗಿದೆ.

 ಕಾಫಿ ಡೇ ಸಿದ್ಧಾರ್ಥ ನಾಪತ್ತೆ: ಸುಳಿವು ನೀಡದ ಡ್ರೈವರ್ ದೂರು ಕಾಫಿ ಡೇ ಸಿದ್ಧಾರ್ಥ ನಾಪತ್ತೆ: ಸುಳಿವು ನೀಡದ ಡ್ರೈವರ್ ದೂರು

ನೇತ್ರಾವತಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದ್ದು, ಮುಳುಗು ತಜ್ಜರು, ಎನ್ ಡಿಆರ್ ಫ್ ಟೀಮ್ ಅಳವೆ ಬಾಗಿಲಿನಲ್ಲಿ ಕಾರ್ಯಾಚರಣೆ ಮುಂದುವರೆಸಿದೆ. ಶೋಧಕಾರ್ಯಕ್ಕೆ ಭಾರತೀಯ ತಟ ರಕ್ಷಣಾ ಪಡೆಯ ಹೋವರ್ ಕ್ರಾಫ್ಟ್ ಸಹಾಯ ಪಡೆಯಲಾಗಿದೆ.

Coffee Day Founder Vg Siddhartha Missing Case

ಈ ನಡುವೆ ಸಿದ್ಧಾರ್ಥ್ ನಾಪತ್ತೆಯಾಗುವ ಮೊದಲು ಕಾರಿನಲ್ಲಿ ತನ್ನ ಸ್ನೇಹಿತರಿಗೆಲ್ಲಾ ಕರೆ ಮಾಡಿ ನನ್ನನ್ನು ಕ್ಷಮಿಸಿಬಿಡಿ ಎಂದು ಹೇಳುತ್ತಿದ್ದರು ಎಂದು ಅವರ ಕಾರಿನ ಡ್ರೈವರ್ ಬಸವರಾಜ್ ಮಾಹಿತಿ ನೀಡಿರುವುದಾಗಿ ಮೂಲಗಳು ತಿಳಿಸಿವೆ.

ಕಾಫಿ ಡೇ ಸಿದ್ಧಾರ್ಥ ನಾಪತ್ತೆ: ಕೊನೆಯ ಇ- ಮೇಲ್‌ನಲ್ಲೇನಿದೆ?ಕಾಫಿ ಡೇ ಸಿದ್ಧಾರ್ಥ ನಾಪತ್ತೆ: ಕೊನೆಯ ಇ- ಮೇಲ್‌ನಲ್ಲೇನಿದೆ?

ದಾರಿಯುದ್ದಕ್ಕೂ ಸ್ನೇಹಿತರಿಗೆಲ್ಲಾ ಕರೆ ಮಾಡಿ ನನ್ನನ್ನು ಕ್ಷಮಿಸಿಬಿಡಿ ಎಂದು ಕೇಳಿಕೊಳ್ಳುತ್ತಿದ್ದರು. ಮಂಗಳೂರು ಸರ್ಕಲ್ ಗೆ ಹೋಗುವವರೆಗೂ ಸ್ನೇಹಿತರ ಬಳಿ ಕ್ಷಮೆ ಕೇಳಿದರು ಎಂದು ಬಸವರಾಜ್ ವಿವರಿಸಿರುವುದಾಗಿ ತಿಳಿದುಬಂದಿದೆ.

English summary
Cafe Coffee Day proprietor Siddhartha's missign case is being investigated by police in all dimensions. Police are investigating videos recorded on a CC TV camera mounted on the Ullala Netravathi Bridge. In the mean time, Siddharth's car driver, Basavaraj, had informed that Siddhartha apologized on the phone along the way.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X