ದಾರಿಯುದ್ದಕ್ಕೂ ಫೋನ್ ನಲ್ಲಿ ಕ್ಷಮೆ ಕೇಳಿದ್ದ ಸಿದ್ಧಾರ್ಥ
ಮಂಗಳೂರು, ಜುಲೈ 30: ಕೆಫೆ ಕಾಫಿ ಡೇ ಮಾಲೀಕ ಉದ್ಯಮಿ ಸಿದ್ಧಾರ್ಥ ಅವರ ನಾಪತ್ತೆ ಪ್ರಕರಣವನ್ನು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
CCD Owner VG Siddhartha Missing LIVE: 'ಮಾದರಿ ಉದ್ಯಮಿ'ಯ ಹಠಾತ್ ನಾಪತ್ತೆ: ಕ್ಷಣ-ಕ್ಷಣದ ಮಾಹಿತಿ
ಸಿದ್ದಾರ್ಥ ನಾಪತ್ತೆಯಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆ ಮೇಲೆ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮರಾದಲ್ಲಿ ದಾಖಲಾಗಿರುವ ವಿಡಿಯೋಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಿದ್ದಾರ್ಥ ಅವರು ಬಳಸಿದ ಕಾರನ್ನು ನಗರದ ಕಂಕನಾಡಿ ನಗರ ಠಾಣೆಯಲ್ಲಿ ಇರಿಸಲಾಗಿದೆ.
ಕಾಫಿ ಡೇ ಸಿದ್ಧಾರ್ಥ ನಾಪತ್ತೆ: ಸುಳಿವು ನೀಡದ ಡ್ರೈವರ್ ದೂರು
ನೇತ್ರಾವತಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದ್ದು, ಮುಳುಗು ತಜ್ಜರು, ಎನ್ ಡಿಆರ್ ಫ್ ಟೀಮ್ ಅಳವೆ ಬಾಗಿಲಿನಲ್ಲಿ ಕಾರ್ಯಾಚರಣೆ ಮುಂದುವರೆಸಿದೆ. ಶೋಧಕಾರ್ಯಕ್ಕೆ ಭಾರತೀಯ ತಟ ರಕ್ಷಣಾ ಪಡೆಯ ಹೋವರ್ ಕ್ರಾಫ್ಟ್ ಸಹಾಯ ಪಡೆಯಲಾಗಿದೆ.
ಈ ನಡುವೆ ಸಿದ್ಧಾರ್ಥ್ ನಾಪತ್ತೆಯಾಗುವ ಮೊದಲು ಕಾರಿನಲ್ಲಿ ತನ್ನ ಸ್ನೇಹಿತರಿಗೆಲ್ಲಾ ಕರೆ ಮಾಡಿ ನನ್ನನ್ನು ಕ್ಷಮಿಸಿಬಿಡಿ ಎಂದು ಹೇಳುತ್ತಿದ್ದರು ಎಂದು ಅವರ ಕಾರಿನ ಡ್ರೈವರ್ ಬಸವರಾಜ್ ಮಾಹಿತಿ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಕಾಫಿ ಡೇ ಸಿದ್ಧಾರ್ಥ ನಾಪತ್ತೆ: ಕೊನೆಯ ಇ- ಮೇಲ್ನಲ್ಲೇನಿದೆ?
ದಾರಿಯುದ್ದಕ್ಕೂ ಸ್ನೇಹಿತರಿಗೆಲ್ಲಾ ಕರೆ ಮಾಡಿ ನನ್ನನ್ನು ಕ್ಷಮಿಸಿಬಿಡಿ ಎಂದು ಕೇಳಿಕೊಳ್ಳುತ್ತಿದ್ದರು. ಮಂಗಳೂರು ಸರ್ಕಲ್ ಗೆ ಹೋಗುವವರೆಗೂ ಸ್ನೇಹಿತರ ಬಳಿ ಕ್ಷಮೆ ಕೇಳಿದರು ಎಂದು ಬಸವರಾಜ್ ವಿವರಿಸಿರುವುದಾಗಿ ತಿಳಿದುಬಂದಿದೆ.