ವಿ.ಜಿ ಸಿದ್ದಾರ್ಥ ಮೃತದೇಹ ಪತ್ತೆ, ನೇತ್ರಾವತಿ ಪಾಲಾದ ಕಾಫಿ ಕಿಂಗ್
Recommended Video
ಮಂಗಳೂರು, ಜುಲೈ 31: ಮಂಗಳೂರು-ಉಳ್ಳಾಲ ರಸ್ತೆಯ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದ ಉದ್ಯಮಿ ವಿ. ಜಿ ಸಿದ್ದಾರ್ಥ ಅವರ ಮೃತ ದೇಹ ಬುಧವಾರ ಬೆಳಗ್ಗೆ ನದಿಯ ಹಿನ್ನೀರು ಪ್ರದೇಶ ಹೊಯ್ಗೆ ಬಜಾರ್ ಎಂಬ ಪ್ರದೇಶದಲ್ಲಿ ಪತ್ತೆಯಾಗಿದೆ. ಸತತ 36 ಗಂಟೆಗಳ ಕಾರ್ಯಾಚರಣೆ ಬಳಿಕ ಸಿದ್ದಾರ್ಥ ಶವ ಪತ್ತೆ ಹಚ್ಚಲಾಗಿದೆ.
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅಳಿಯ, ಕೆಫೆ ಕಾಫಿ ಡೇ ಸ್ಥಾಪಕ, ಕರ್ನಾಟಕದ ಪ್ರಮುಖ ಉದ್ಯಮಿ ವಿ.ಜಿ ಸಿದ್ದಾರ್ಥ ಅವರ ಯಶೋಗಾಥೆ ಈ ಮೂಲಕ ದುರಂತ ಅಂತ್ಯ ಕಂಡಿದೆ.
ಸೋಮವಾರ(ಜುಲೈ 29) ಸಂಜೆ 6 ಗಂಟೆ ಸುಮಾರಿಗೆ ಮಂಗಳೂರು- ಉಳ್ಳಾಲ ರಸ್ತೆಯ ಬಳಿಯಿರುವ ನೇತ್ರಾವತಿ ನದಿ ಬಳಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದರು, ನೇತ್ರಾವತಿ ಸೇತುವೆ ಬಳಿ ಇನ್ನೋವಾ ಕಾರು ಚಲಿಸುತ್ತಿದ್ದಂತೆ, ಚಾಲಕನಿಗೆ ವಾಹನ ನಿಲ್ಲಿಸುವಂತೆ ಸೂಚಿಸಿದ್ದರು. ಕಾರನ್ನು ಯೂ ಟರ್ನ್ ಮಾಡಿ ಬಂದ ಚಾಲಕನಿಗೆ ಕಾರಿನಲ್ಲೇ ಕುಳಿತಿರುವಂತೆ ಸೂಚಿಸಿ ಸೇತುವೆ ಬಳಿಯಿಂದ ಕಣ್ಮರೆಯಾಗಿದ್ದರು.

ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ?: ವಿ.ಜಿ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದರೂ ಯಾರೂ ನಂಬಲು ತಯಾರಿರಲಿಲ್ಲ. ಸ್ಥಳೀಯ ಮೀನುಗಾರರು ಬುಧವಾರ ಬೆಳಗ್ಗೆ ನದಿ ನೀರಿನಲ್ಲಿ ಮೀನಿಗಾಗಿ ಬಲೆ ಬೀಸಲು ಮುಂದಾದಾಗ, ಶವ ಪತ್ತೆಯಾಗಿದೆ, ತಕ್ಷಣವೇ ಶೋಧ ಕಾರ್ಯ ನಡೆಸುತ್ತಿದ್ದ ತಂಡಕ್ಕೆ ತಿಳಿಸಿದ್ದಾರೆ...
ಈ ಬಗ್ಗೆ ಮಾತನಾಡಿದ ಮೀನುಗಾರ ಅಬ್ಸೆ ಬಜಾರಿನ ರಿತೇಶ್, "ಹೊಯ್ಗೆ ಬಜಾರ್ ಎಂಬಲ್ಲಿ ಮೃತ ದೇಹ ಪತ್ತೆಯಾಗಿದೆ. ನಿನ್ನೆ ಕೂಡಾ ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದೆ, ಮಳೆ ಕಾರಣ ನಿನ್ನೆ ರಾತ್ರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು, ಬೆಳಗ್ಗೆ 6.45ರ ಸುಮಾರಿಗೆ ನದಿಗೆ ಇಳಿದ ಸ್ವಲ್ಪ ಹೊತ್ತಿನಲ್ಲೇ ಮೃತದೇಹ ಕಂಡಿದೆ" ಎಂದಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದಾರೆ. ಮೃತದೇಹದ ಪರಿಶೀಲನೆ ನಡೆಸಿ, ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಕುಟುಂಬಸ್ಥರು, ಸಂಬಂಧಿಕರು ನಿರ್ಧಾರದಂತೆ ಮರಣೋತ್ತರ ಪರೀಕ್ಷೆ ಮುಂದಿನ ಕಾರ್ಯಗಳು ನಡೆಯಲಿವೆ ಎಂದು ನಮ್ಮ ಪ್ರತಿನಿಧಿ ತಿಳಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications