ಆಳ್ವಾಸ್ ನುಡಿಸಿರಿ ಸಮ್ಮೇಳನದಲ್ಲಿ ಸಾಂಸ್ಕೃತಿಕ ಲೋಕ ಅನಾವರಣ
ಮಂಗಳೂರು, ನವೆಂಬರ್.17: ಮೂರು ದಿನಗಳ ಕಾಲ ನಡೆಯುತ್ತಿರುವ ಸಾಹಿತ್ಯ ಜಾತ್ರೆಯ ಸಂಭ್ರಮ ಕಳೆಕಟ್ಟಿದೆ. ಕನ್ನಡ ನಾಡು-ನುಡಿ-ಜಲದ ಕುರಿತ ಗಂಭೀರ ಚಿಂತನೆಗೆ ವೇದಿಕೆಯಾಗುವ ಸಾಹಿತ್ಯ ಹಬ್ಬ ಆಳ್ವಾಸ್ ನುಡಿಸಿರಿಗೆ ವಿದ್ಯುಕ್ತ ಚಾಲನೆ ದೊರೆತಿದೆ.
ಮುಂಜಾನೆಯ ಚುಮು ಚುಮು ಚಳಿಯ ನಡುವೆ ಮಂಜಿನ ಹನಿ ಸೂರ್ಯನ ಕಿರಣಗಳ ಸ್ಪರ್ಶಕ್ಕೆ ಕರಗುತ್ತಿದ್ದಂತೆ ವಿದ್ಯಾಗಿರಿಯಲ್ಲಿ ಕನ್ನಡ ನಾಡು, ನುಡಿಯ ಸಾಂಸ್ಕೃತಿಕ ಲೋಕ ತೆರೆದು ಕೊಳ್ಳುತ್ತದೆ. ಮುಂಜಾನೆಯಿಂದ ಸೂರ್ಯಾಸ್ಥದವರೆಗೆ ಆಳ್ವಾಸ್ ನುಡಿಸಿರಿಯಲ್ಲಿ ಪುಟ್ಟ ಸಾಹಿತ್ಯ ಲೋಕ ಅನಾವರಣಗೊಳ್ಳಲಿದೆ.
ಈ ಸಮ್ಮೇಳನ ಕೇವಲ ಕನ್ನಡ ನಾಡು-ನುಡಿ-ಜನದ ಗಂಭೀರ ಚಿಂತನೆ, ಕನ್ನಡ ಸಾಹಿತ್ಯಕ್ಕೆ ಮಾತ್ರ ಸೀಮಿತವಾಗಿರದೆ ಕೃಷಿಯ ಅದ್ಭುತ ಲೋಕವೇ ತೆರೆದುಕೊಂಡಿದೆ. ಸಾಹಿತ್ಯ ಲೋಕದಲ್ಲಿ ಸಂಚರಿಸಿ ದಣಿದವರಿಗೆ ವಿಜ್ಞಾನ ಹಾಗೂ ಕೃಷಿ ಸಿರಿ ಕಣ್ಮನ ತಣಿಸುತ್ತಿದೆ. ಆಳ್ವಾಸ್ ಸಮ್ಮೇಳನಕ್ಕೆ ಬಂದ ಎಲ್ಲರಿಗೂ ಊಟ ಉಪಚಾರದ ವ್ಯವಸ್ಥೆ ಬೆರಗು ಮೂಡಿಸುತ್ತದೆ.

ಜೈನರ ಶೈಲಿಯ ರುಚಿಕರ ಊಟ ಒಂದೆಡೆ ಸಾಹಿತ್ಯಾಸಕ್ತರ ಹೊಟ್ಟೆ ತಣಿಸಿದರೆ ಇನ್ನೊಂದೆಡೆ ಅಲ್ಲಲ್ಲಿ ನಡೆಯುತ್ತಿರುವ ಮನೋರಂಜನಾ ಕಾರ್ಯಕ್ರಮ ನೋಡುಗರ ಮನ ತಣಿಸುತ್ತದೆ.
ಸಲ್ಮಾನ್ ಖಾನ್ ಅಭಿನಯದ 'ಸುಲ್ತಾನ್ ' ಚಿತ್ರದಲ್ಲಿ ಬರುವ ಓಂಗೋಲ್ ತಳಿಯ ಗೂಳಿ ಭಾರೀ ಗಾತ್ರದ್ದು. ಇದರ ವಯಸ್ಸು 6 ವರ್ಷ. ತೂಕ ಮಾತ್ರ ಬರೋಬ್ಬರಿ 1,462 ಕೆಜಿ. ಉಡುಪಿಯ ಬ್ರಹ್ಮಾವರದ ಮಾನಾಮಾ ಫಾರ್ಮ್ಸ್ ನವರು ಈ ಹೋರಿಯನ್ನು ನುಡಿಸಿರಿಯಲ್ಲಿ ಪ್ರದರ್ಶಿಸಿದ್ದಾರೆ.

ದಿನ ಒಂದಕ್ಕೆ ಈ ಗೂಳಿಯ ಸಾಕಣೆ ವೆಚ್ಚ ಸರಿಸುಮಾರು 650 ರೂಪಾಯಿ. ಜೋಳದ ಗಿಡ, ಹುಲ್ಲು, ಧಾನ್ಯ , ಬೆಣ್ಣೆ , ತುಪ್ಪ, ಒಣ ದ್ರಾಕ್ಷಿ , ಖರ್ಜೂರ, ಕಡ್ಲೆ ಹಿಂಡಿಯನ್ನು ಗೂಳಿ ಸೇವಿಸುತ್ತದೆ.
ಅಷ್ಟೇ ಅಲ್ಲ, ನುಡಿಸಿರಿ ಸಮ್ಮೇಳನದಲ್ಲಿ ಆಯೋಜಿಸಲಾಗಿರುವ ಪುಸ್ತಕ ಮೇಳ ಸಾಹಿತ್ಯಾಸಕ್ತರ ಗಮನ ಸೆಳೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಪುಸ್ತಕ ಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತಿನ ನಡುವೆ ಆಳ್ವಾಸ್ ನುಡಿಸಿರಿಯಲ್ಲಿರುವ ಪುಸ್ತಕ ಪ್ರದರ್ಶನ ಮಳಿಗೆಗಳು ಈ ಮಾತನ್ನು ಸುಳ್ಳಾಗಿಸಿವೆ.

ಇಲ್ಲಿನ 70 ಪುಸ್ತಕ ಮಳಿಗೆಗಳಲ್ಲಿಯೂ ಸಾಹಿತ್ಯಾಸಕ್ತರು ಇಣುಕುತ್ತಿದ್ದಾರೆ. ಸಾಹಿತ್ಯ ಜಾತ್ರೆಯೊಂದಿಗೆ ನುಡಿಸಿರಿಯಲ್ಲಿ ಕನ್ನಡ, ಪ್ರಾದೇಶಿಕ ಭಾಷಾ ಚಲನಚಿತ್ರಗಳು ಜನರ ಆಕರ್ಷಣೆಯ ಮುಖ್ಯ ಕೇಂದ್ರವಾಗಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications