Get Updates
Get notified of breaking news, exclusive insights, and must-see stories!

ಮೂಡುಬಿದರೆ : ಆಳ್ವಾಸ್ ವಿರಾಸತ್ ಸುದ್ದಿ ಮತ್ತು ಚಿತ್ರಗಳು

ಮೂಡಬಿದಿರೆ, ಜ. 9 : ನಾಲ್ಕು ದಿನಗಳ ರಾಷ್ಟ್ರೀಯ ಸಾಂಸ್ಕತಿಕ ಉತ್ಸವ 'ಆಳ್ವಾಸ್ ವಿರಾಸತ್ 2015'ಗೆ ಗುರುವಾರ ಚಾಲನೆ ದೊರಕಿದೆ. ಮೂಡುಬಿದರೆ ವಿದ್ಯಾಗಿರಿಯ ಆಳ್ವಾಸ್ ಪ್ಯಾಲೇಸ್ ಗ್ರೌಂಡ್‌ನಲ್ಲಿನ ಉದ್ಘಾಟನಾ ಕಾರ್ಯಕ್ರಮಕ್ಕೆ 20 ಸಾವಿರಕ್ಕೂ ಅಧಿಕ ಜನರು ಸಾಕ್ಷಿಯಾದರು.

Alvas

ಸಮ್ಮೇಳನ ಉದ್ಘಾಟನೆಗೂ ಮುನ್ನ ನಾಡಿನ ವಿವಿಧ ಜಾನಪದ ಕಲಾತಂಡಗಳ ಅದ್ದೂರಿ ಮೆರವಣಿಗೆ ನಡೆಯಿತು. ಕೊಂಬು, ಕಹಳೆ, ಚೆಂಡೆಗಳ ಸದ್ದಿನ ನಡುವೆ ಕಾರ್ಯಕ್ರಮದ ಸಂಯೋಜಕ ಡಾ. ಎಂ. ಮೋಹನ್ ಆಳ್ವ ಮುಂದಾಳತ್ವದಲ್ಲಿ ಸರೋದ್ ವಾದಕ ಪದ್ಮವಿಭೂಷಣ ಉಸ್ತಾದ್ ಅಮ್ಜದ್ ಆಲಿಖಾನ್ ಹಾಗೂ ಗಣ್ಯರನ್ನು ಸ್ವಾಗತಿಸಲಾಯಿತು.

Alvas Virasat

ವೇದಿಕೆ ಕಾರ್ಯಕ್ರಮದಲ್ಲಿ 2015ನೇ ಸಾಲಿನ ಆಳ್ವಾಸ್ ವಿರಾಸತ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸರೋದ್ ಮಾಂತ್ರಿಕ ಉಸ್ತಾದ್ ಅಮ್ಜದ್ ಅಲಿಖಾನ್, ಸಂಗೀತವೇ ದೇವರೆಂದು ತಿಳಿದಿರುವ ತಾನು ಆ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯ ಮೂಡಿಸುವ ಮಹತ್ತರ ಜವಾಬ್ದಾರಿಯನ್ನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಹೇಳಿದರು. [ಅಮ್ಜದ್ ಅಲಿಖನ್ ಗೆ ವಿರಾಸತ್ ಪ್ರಶಸ್ತಿ]

Ustad Amjad Ali Khan

ಶೈಕ್ಷಣಿಕ ಹಾಗೂ ವೈಜ್ಞಾನಿಕವಾಗಿ ಮುಂದುವರಿದ 21ನೇ ಶತಮಾನದಲ್ಲಿ ಶಾಂತಿ ಮತ್ತು ಸಾಮರಸ್ಯ ಇರಬೇಕು ಎಂಬುದಾಗಿ ಅಪೇಕ್ಷಿಸುತ್ತಿದ್ದರೂ, ಧರ್ಮದ ಹೆಸರಿನಲ್ಲಿ ದ್ವೇಷ ಮೂಡುತ್ತಿರುವುದು ವಿಪರ್ಯಾಸ ಎಂದು ಅವರು ಬೇಸರ ವ್ಯಕ್ತಪಡಿಸಿದರು.

Karkala

ಕಾರ್ಯಕ್ರಮ ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು, ಆಳ್ವಾಸ್ ವಿರಾಸತ್ ಸಾಂಸ್ಕತಿಕ ಉತ್ಸವ ಸಾಮಾಜಿಕ ಸಾಮರಸ್ಯಕ್ಕೆ ಮೂಲವಾಗಲಿ ಎಂದು ಆಶಿಸಿದರು. ಸಾಂಸ್ಕತಿಕ ಕಾರ್ಯಕ್ರಮವನ್ನು ಹೊಸ ಪರಿಕಲ್ಪನೆಯೊಂದಿಗೆ ನೀಡುವ ಆಳ್ವಾಸ್ ವಿರಾಸತ್, ಕೇವಲ ಒಂದು ಹೋಬಳಿ ಕೇಂದ್ರವಾಗಿರುವ ಮೂಡುಬಿದಿರೆಗೆ ವಿರಾಟ್ ಖ್ಯಾತಿಯನ್ನು ತಂದಿದೆ ಎಂದರು.

Mangaluru

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಎನ್.ವಿನಯ್ ಹೆಗ್ಡೆ ಅವರು ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದ ಕಲಾವಿದರ ಕಾರ್ಯಕ್ರಮ ಆಯೋಜಿಸಿ ಯುವ ವಿದ್ಯಾರ್ಥಿಗಳಲ್ಲಿ ಆಸಕ್ತಿ ಉಂಟು ಮಾಡುವ ಮೂಲಕ ಅನೇಕ ಕಲಾವಿದರು ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸಷ್ಟಿಯಾಗಿದ್ದಾರೆ ಎಂದರು.

Karnataka

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮಾತನಾಡಿ, ಯುವ ವಿದ್ಯಾರ್ಥಿ ಸಮುದಾಯದಲ್ಲಿ ಮಾತ್ರವಲ್ಲದೆ ಗ್ರಾಮೀಣ ಭಾಗದಲ್ಲಿ ಸಾಂಸ್ಕತಿಕ ಸೌಂದರ್ಯ ಪ್ರಜ್ಞೆ ಬೆಳೆಸುವ ಕಾರ್ಯ ವಿರಾಸತ್‌ನ ಗುರಿಯಾಗಿದೆ. ಮುಂದಿನ ದಿನದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ''ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್' ಅಯೋಜಿಸಲಾಗುವುದು ಎಂದು ಹೇಳಿದರು.

Alvas Virasat 10

ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ನಿಕ್, ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ವಿ.ಎಸ್.ಕಷ್ಣ ಕುಮಾರ್, ಕರ್ಣಾಟಕ ಬ್ಯಾಂಕ್ ಸಿಇಒ ಪಿ.ಜಯರಾಮ ಭಟ್, ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ನಾಡೋಜ ಜಿ.ಶಂಕರ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+