ಕೊರೊನಾ ವೈರಸ್ ಅಪಪ್ರಚಾರ; ಮಂಗಳೂರಿನಲ್ಲಿ ದೂರು ದಾಖಲು
ಮಂಗಳೂರು, ಫೆಬ್ರವರಿ 14: ಚೀನಾದಲ್ಲಿ ನೂರಾರು ಜನರ ಸಾವಿಗೆ ಕಾರಣವಾಗಿರುವ ಕೊರೊನಾ ವೈರಸ್ ಬಗ್ಗೆ ಇಡೀ ಜಗತ್ತಿನಲ್ಲಿ ಆತಂಕ ಶುರುವಾಗಿದೆ. ಈ ನಡುವೆ ಭಾರತದ ಕೇರಳದಲ್ಲೂ ಕೊರೊನಾ ವೈರಸ್ ಪತ್ತೆಯಾಗಿರುವುದು ಆ ಆತಂಕವನ್ನು ಇಮ್ಮಡಿಗೊಳಿಸಿದೆ.
ಆದರೆ ಈ ಬಗ್ಗೆ ಅನಗತ್ಯವಾಗಿ ಆತಂಕ ಉಂಟು ಮಾಡುವ ಕೆಲಸವೂ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹಲವು ವದಂತಿಗಳು ಹರಡುತ್ತಿವೆ.
ಕೊರೊನಾ ವೈರಸ್: ಒಂದೇ ನಗರ.. ಒಂದೇ ದಿನ.. ಹೆಣವಾಗಿದ್ದು 242 ಜನ!
ಈ ನಡುವೆ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳಲ್ಲಿಯೂ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಯಾರೋ ವದಂತಿಯನ್ನು ಹಬ್ಬಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶವನ್ನು ಹರಿಬಿಟ್ಟಿದ್ದಾರೆ. ಈ ವಿಚಾರವಾಗಿ ಕಾಲೇಜು ಆಡಳಿತ ಮಂಡಳಿಯ ಗಮನಕ್ಕೆ ಬಂದಿದ್ದು, ಕಾಲೇಜು ಪ್ರಾಂಶುಪಾಲರಾದ ಡಾ. ಶ್ರೀನಿವಾಸ ರಾವ್ ಮಂಗಳೂರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Comments
English summary
Someone has spread the rumor that the coronavirus has been found in Sahyadri college students. They have left a false message on the social media. The matter has been brought to the notice of the college's principal Dr. Srinivasa Rao and he has lodged a complaint with the Mangalore Cyber Police Station,
Story first published: Friday, February 14, 2020, 18:22 [IST]