ಕರಾವಳಿಯಲ್ಲಿ ಕಡಲ ಅಬ್ಬರ: ನೋಡನೋಡುತ್ತಿದ್ದಂತೆಯೇ ಕಡಲ ಪಾಲಾದ ಮನೆ-ರಸ್ತೆ!
ಮಂಗಳೂರು, ಜುಲೈ 15: ಕರಾವಳಿಯಲ್ಲಿ ಮಳೆ ಅಬ್ಬರ ಕಡಿಮೆಯಾದರೂ, ಮಳೆ ಬಳಿಕದ ಹಾನಿ ಮುಂದುವರಿದಿದೆ. ನದಿಗಳು ಶಾಂತವಾಗಿವೆ, ಆದರೆ ಅರಬ್ಬೀ ಸಮುದ್ರ ಮಾತ್ರ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದೆ. ಕಡಲತೀರದ ಜನ ಹಗಲು ರಾತ್ರಿ ಆತಂಕದಲ್ಲೇ ಮನೆಯಲ್ಲಿ ದಿನಕಳೆಯುವಂತಾಗಿದೆ.
ಮಂಗಳೂರಿನಲ್ಲಿ ಕಡಲ್ಕೊರೆತ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ನಗರದ ಹೊರವಲಯ ಮೀನಕಳಿಯ ಬಳಿ ಕಡಲ್ಕೊರೆತ ತೀವ್ರಗೊಂಡ ಪರಿಣಾಮ 500 ಕ್ಕೂ ಅಧಿಕ ಮನೆಗಳು ಆತಂಕದಲ್ಲಿದೆ. ಮೀನಕಳಿಯ ಜನರು ನೋಡುತ್ತಿದ್ದಂತೆಯೇ ಕಡಲು ಮತ್ತಷ್ಟು ರಸ್ತೆಯನ್ನು ಅಪೋಷನ ಪಡೆದು ಮನೆಗಳತ್ತ ಸಮುದ್ರ ಮುನ್ನುಗ್ಗುತ್ತಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನಲೆಯಲ್ಲಿ ಮೀನಕಳಿಯ ಭಾಗದ ಜನರು ಸಂಪರ್ಕ ರಸ್ತೆಯನ್ನೇ ಕಳೆದುಕೊಂಡಿದ್ದಾರೆ. ಸ್ಥಳೀಯ ಶಾಸಕರು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ಮಾಡಿ, ಈ ಬಾರಿಯ ಮಳೆಗಾಲದವರೆಗೆ ತಾತ್ಕಾಲಿಕ ತಡೆಗೋಡೆ ನಿರ್ಮಾಣದ ಭರವಸೆ ನೀಡಿದ್ದಾರೆ.
ಅಲೆಗಳ ಹೊಡೆತಕ್ಕೆ ಈಗಾಗಲೇ ಸಾಕಷ್ಟು ಮನೆಗಳು ಸಮುದ್ರ ಪಾಲಾಗಿದೆ. ಅಪಾಯದಲ್ಲಿದ್ದ ಹಲವು ಮನೆಗಳ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದ್ದು, ಇನ್ನುಳಿದ ನಿವಾಸಿಗಳು ಆತಂಕದಲ್ಲಿಯೇ ಜೀವನ ನಡೆಸುತ್ತಿದ್ದಾರೆ.

ಕಡಲ್ಕೊರತಕ್ಕೆ ಸಮುದ್ರ ಪಾಲಾದ ಮನೆಗಳು
ಮೀನಕಳಿಯ ಭಾಗದಲ್ಲಿ ಈಗಾಗಲೇ ಸ್ಥಳೀಯಾಡಳಿತ ಕಡಲಿಗೆ ಮರಳಿನ ಬ್ಯಾಗ್ಗಳನ್ನು ಹಾಕುವ ಕೆಲಸ ಮಾಡುತ್ತಿದೆ. ಆದರೆ ಕಡಲು ಮಾತ್ರ ಅಬ್ಬರಿಸುತ್ತಿದ್ದು,ಈಗಾಗಲೇ ಮೀನು ಮಾರುಕಟ್ಟೆಗೆ ದಕ್ಷಿಣದಲ್ಲಿ ಎಂಟಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಈ ಮನೆಗಳ ನಿವಾಸಿಗಳು ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. ಮನೆಗಳ ಜೊತೆಗೆ ಹಲವಾರು ತೆಂಗಿನ ಮರಗಳು ಬುಡಮೇಲಾಗಿವೆ ಎಂದು ತಿಳಿದುಬಂದಿದೆ.

8 ವರ್ಷಗಳಲ್ಲೇ ದೊಡ್ಡ ಪ್ರಮಾಣದ ಕಡಲ್ಕೊರತೆ
ಕಡಲ್ಕೊರೆತ ಸಮಸ್ಯೆ ಬಗ್ಗೆ ಮಾತನಾಡಿರುವ ಮೀನಕಳಿಯ ನಿವಾಸಿ ದಾಮೋದರ ಪೂಜಾರಿ, ನಾನು ಈ ಭಾಗದಲ್ಲಿ ಕಳೆದ ಎಂಟು ವರ್ಷಗಳಿಂದ ವಾಸಿಸುತ್ತಿದ್ದು ಆದರೆ ಇಷ್ಟು ಪ್ರಮಾಣದ ಕಡಲ್ಕೊರೆತ ಸಮಸ್ಯೆಯನ್ನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆ. ಕಡಲ್ಕೊರೆತ ಸಮಸ್ಯೆಗೆ ಈ ಹಿಂದೆ ಬಂದಿದ್ದ ಚಂಡಮಾರುತವೇ ಕಾರಣ. ಚಂಡಮಾರುತದ ಬಳಿಕ ಕಡಲು ಮತ್ತಷ್ಟು ಮುಂದೆ ಬಂದಿದೆ. ಕಡಲ್ಕೊರೆತದಿಂದಾಗಿ ಆದ ಹಾನಿಗೆ ಸರಕಾರ ಸೂಕ್ತ ಪರಿಹಾರ ನೀಡುತ್ತದೆ ಎಂಬ ವಿಶ್ವಾಸ ಇದೆ ಅಂತಾ ಹೇಳಿದ್ದಾರೆ.

ಮರವಂತೆ ಮಾದರಿತ ತಡೆಗೋಡೆಗೆ ಒತ್ತಾಯ
ಮರವಂತೆ ಮಾದರಿಯಲ್ಲಿ ತಡೆಗೋಡೆ ಹಾಕೋಕೆ ಸ್ಥಳೀಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದಕ್ಕೆ ಇಪ್ಪತ್ತು ಕೋಟಿ ರೂಪಾಯಿ ಅನುದಾನ ಬೇಕಾಗಿದ್ದು, ಮರವಂತೆ ಮಾದರಿಯಲ್ಲಿ ತಡೆಗೋಡೆಯನ್ನು ಹಾಕಿದರೆ ಕಡಲ್ಕೊರೆತ ಸಮಸ್ಯೆ ನಿವಾರಣೆ ಆಗಬಹುದು ಎನ್ನುವ ಅಭಿಪ್ರಾಯ ಸ್ಥಳೀಯರದ್ದಾಗಿದೆ. ಅಲ್ಲದೆ ಸಮುದ್ರಕ್ಕೆ ಕಲ್ಲುಹಾಕಿ ತಡೆಗೋಡೆ ನಿರ್ಮಿಸುವುದರಿಂದ ಅಸುಪಾಸು ಪ್ರದೇಶಕ್ಕೆ ಸಮುದ್ರ ವ್ಯಾಪಿಸುತ್ತಿದೆ. ಮೀನುಗಾರಿಕೆ ನಡೆಸಲು ದೋಣಿ ಇತ್ಯಾದಿಗಳನ್ನು ಸಮುದ್ರಕ್ಕೆ ಕೊಂಡೊಯ್ಯಲು ಕಲ್ಲಿನ ತಡೆಗೋಡೆ ಅಡ್ಡಿಯಾಗುತ್ತಿದೆ ಎಂದು ಮೀನುಗಾರರು ಹೇಳುತ್ತಾರೆ.

ತಾತ್ಕಾಲಿಕವಾಗಿ ಮುನ್ನೂರು ಮೀಟರ್ ತಡೆಗೋಡೆ ನಿರ್ಮಾಣ
" ಮರವಂತೆ ಮಾದರಿಯಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಕಳೆದ ಫ್ರೆಬ್ರವರಿಯಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಅದನ್ನು ಮಂಜೂರು ಮಾಡುವ ಎಲ್ಲಾ ಪ್ರಯತ್ನವನ್ನು ಮಾಡುತ್ತೇವೆ. ಈಗ ಕಡಲ್ಕೊರೆತವನ್ನು ನಿವಾರಿಸಲು ತಾತ್ಕಾಲಿಕವಾಗಿ ಮುನ್ನೂರು ಮೀಟರ್ ಉದ್ದಕ್ಕೆ 1.75 ಕೋಟಿ ರೂಪಾಯಿ ವೆಚ್ಚದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಾಣಕ್ಕೆ ಜಿಲ್ಲಾಧಿಕಾರಿಯವರಿಗೆ ಪ್ರಸ್ತಾಪ ಕಳುಹಿಸಿದ್ದೇನೆ" ಎಂದು ಸ್ಥಳೀಯ ಶಾಸಕ ಡಾ.ವೈ ಭರತ್ ಶೆಟ್ಟಿ, ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications