ತುಳುನಾಡಿನ ಮೊದಲ ಕಂಬಳದಲ್ಲಿ ಅಂಬರೀಶ್ ಗೆ ಶ್ರದ್ಧಾಂಜಲಿ
ಮಂಗಳೂರು, ನವೆಂಬರ್. 26: ಸ್ಯಾಂಡಲ್ ವುಡ್ ನ ಹಿರಿಯ ನಟ ಹಾಗೂ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಕರಾವಳಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಕರಾವಳಿಯಲ್ಲಿ ಆರಂಭವಾದ ಮೊದಲ ಕಂಬಳದಲ್ಲಿ ಅಗಲಿದ ಅಂಬರೀಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ತುಳುನಾಡಿನಲ್ಲಿ ಕಂಬಳದ ಋತು ಆರಂಭವಾಗಿದೆ. ಈ ವರ್ಷದ ಮೊದಲ ಕಂಬಳ ಬಂಟ್ವಾಳದ 'ಕಕ್ಯಪದವಿನ ಸತ್ಯ ಧರ್ಮ ಜೋಡುಕರೆ'ಗೆ ಚಾಲನೆ ದೊರೆತಿದೆ. ಈ ಸಂದರ್ಭದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಆಚರಿಸಿ ಶ್ರದ್ಧಾಂಜಲಿ ಕೋರಲಾಯಿತು.
ಮೈರ ಬರ್ಕೆಜಾಲು ಎಂಬಲ್ಲಿ ನಡೆಯುವ 6ನೇ ವರ್ಷದ ಸತ್ಯ-ಧರ್ಮ ಜೋಡುಕೆರೆ ಕಂಬಳಕ್ಕೆ ಕಂಬಳದ ಗೌರವಾಧ್ಯಕ್ಷ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಇವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸಹಕಾರದೊಂದಿಗೆ ಬಹಳ ವಿಜೃಂಭಣೆಯಿಂದ ನಡೆದ ಕಂಬಳವನ್ನು ಸುಂದರ ಪೂಜಾರಿ ಕೊರೆಂಜಿಕೊಡಿ ಉದ್ಘಾಟಿಸಿದರು.

ಕಕ್ಯಪದವಿನ ಸತ್ಯ ಧರ್ಮ ಕಂಬಳವನ್ನು ಬೆತ್ತ ಹಿಡಿಯದೆ ವಿಶಿಷ್ಟವಾಗಿ ನಡೆಸಲಾಯಿತು. ಕಂಬಳ ಸಂಘಟಕರ ಈ ನಿರ್ಧಾರ ಅತ್ಯಂತ ವಿಶೇಷವಾಗಿದ್ದು, ಇದು ಕಂಬಳದ ಇತಿಹಾಸದಲ್ಲೇ ಪ್ರಪ್ರಥಮ ಪ್ರಯೋಗವಾಗಿದೆ. ಪ್ರಥಮ ಪ್ರಯೋಗದಲ್ಲೇ ಸಂಘಟಕರು ಯಶಸ್ವಿಯಾಗಿದ್ದು, ಕಂಬಳಾಭಿಮಾನಿಗಳ ಮನ್ನಣೆಗೆ ಪಾತ್ರವಾಯಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications