ಪೂಜಾರಿ ಅವರನ್ನು ಕಾಂಗ್ರೆಸ್ ಮತ್ತೆ ಅವಮಾನಿಸಿದೆ: ಹರಿಕೃಷ್ಣ ಬಂಟ್ವಾಳ್
ಮಂಗಳೂರು, ಮೇ 08: ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಅವರ ಕುರಿತು ಸುಳ್ಳು ಸುದ್ದಿ ಹರಡಿಸಿ ಕಾಂಗ್ರೆಸ್ ಮತ್ತೊಮ್ಮೆ ಅವರನ್ನು ಅವಮಾನಿಸಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಸಂದರ್ಭದಲ್ಲಿ ಜನಾರ್ದನ ಪೂಜಾರಿ ಕುರಿತು ಸುಳ್ಳು ಸುದ್ದಿ ಹರಡಿಸುವುದು ಕಾಂಗ್ರೆಸಿಗರ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.
ಕನ್ನಡ ದಿನ ಪತ್ರಿಕೆ ಉದಯವಾಣಿ ಹೆಸರಿನಲ್ಲಿ ಸುಳ್ಳು ಸುದ್ದಿಯೊಂದನ್ನು ಪೂಜಾರಿ ಅವರ ಕುರಿತು ಸೃಷ್ಠಿಸಲಾಗಿದ್ದು, 'ಬಿಜೆಪಿಯನ್ನು ಸೋಲಿಸಲು ಕರೆ ಕೊಟ್ಟ ಪೂಜಾರಿ' ಎಂಬ ಹೆಡ್ ಲೈನ್ ನೊಂದಿಗೆ ನವರಾತ್ರಿ ಸಂದರ್ಭದಲ್ಲಿ ತೆಗೆದ ಪೋಟೋ ಒಂದನ್ನು ಪ್ರಕಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ.

'ಬಿಜೆಪಿಯನ್ನು ಸೋಲಿಸುವುದೇ ನನ್ನ ಜೀವನದ ಕೊನೆಯ ಆಸೆ ಎಂದ ಬಿಲ್ಲವ ನಾಯಕ' ಎಂದು ಪ್ರಕಟಿಸಲಾಗಿದೆ. ಬಿಜೆಪಿಯನ್ನು ಸೋಲಿಸಿ ಎಂದು ಬಿಲ್ಲವರಿಗೆ ಪೂಜಾರಿ ಕರೆ ನೀಡಿದ್ದಾರೆ ಎಂದು ಪ್ರಕಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಅವರು ಆರೋಪಿಸಿದರು.
"ಪೂಜಾರಿ ಅವರ ಬಗೆಗಿನ ಈ ಅಪಪ್ರಚಾರದ ಹಿಂದೆ ರಮಾನಾಥ ರೈ ಕೈವಾಡವಿದೆ ಎಂದು ಅವರು ಆರೋಪಿಸಿದರು. ಇದಲ್ಲದೇ ಸಂಸದ ನಳಿನ್ ಕುಮಾರ್ ಕಟೀಲ್ ಬಗ್ಗೆಯೂ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗಿದೆ. ಪೂಜಾರಿ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ನೀಡಿದಷ್ಟು ಗೌರವ , ಸಚಿವ ರಮಾನಾಥ ರೈ ತಮ್ಮ ಜನ್ಮದಲ್ಲಿ ಪೂಜಾರಿ ಅವರಿಗೆ ನೀಡಿಲ್ಲ," ಎಂದು ಕಿಡಿಕಾರಿದರು.

"ಬಂಟ್ವಾಳ ಕ್ಷೇತ್ರದಲ್ಲಿ ರಮಾನಾಥ ರೈ ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಈಗ ಬಿಲ್ಲವರ ಮತ ಪಡೆಯಲು ಶತಾಯಗತಾಯ ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಗೆ ಬಿಲ್ಲವರು ಮತ ಹಾಕುವುದಿಲ್ಲ. ಬಿಲ್ಲವರು ಎಂದೂ ಜಾತಿ ನೋಡಿ ಮತ ಹಾಕಿಲ್ಲ. ಬಿಲ್ಲವರು ಎಂದಿಗೂ ರಾಷ್ಚ್ರವಾದಿಗಳು. ಈ ಬಾರಿ ನರೇಂದ್ರ ಮೋದಿ ಅವರಿಗೆ ಬಿಲ್ಲವರು ಮತ ನೀಡಲಿದ್ದಾರೆ," ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ಚುನಾವಣೆ ಕಾಂಗ್ರೆಸ್ ಸಂಸ್ಕೃತಿ ಹಾಗೂ ಭಾರತೀಯ ಸಂಸ್ಕೃತಿ ನಡುವಿನ ಹೋರಾಟ. ರಾಹುಲ್ ಗಾಂಧಿ ಅವರಿಂದ ಭಾರತೀಯ ಸಂಸ್ಕೃತಿಯ ರಕ್ಷಣೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications