ದಕ್ಷಿಣ ಕನ್ನಡ: ಬಿಜೆಪಿ-ಕಾಂಗ್ರೆಸ್ ನಡುವೆ ನಾಯಕರ ಟ್ವೀಟ್ ಸಮರ
ಮಂಗಳೂರು, ಜನವರಿ 18 : ಲೋಕ ಸಭಾ ಚುನಾವಣೆ ಹತ್ತಿರ ವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಮಂಗಳೂರಿನ ಪಂಪ್ ವೆಲ್ ಹಾಗು ತೊಕ್ಕೊಟ್ಟು ಫ್ಲೈ ಓವರ್ ವಿಚಾರದಲ್ಲಿ ಟ್ವಿಟ್ಟರ್ ಸಮರ ಆರಂಭವಾಗಿದೆ.
ಮಂಗಳೂರಿನ ಪಂಪ್ ವೆಲ್ ಮತ್ತು ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಕಾಮಗಾರಿ ವಿಳಂಬದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಟೀಕೆ ಹಾಗು ಟ್ರಾಲ್ ಗೆ ಗುರಿಯಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ಟರ್ ಮೂಲಕ ತೀಕ್ಷ್ಣ ಪ್ರತ್ಯುತ್ತರ ನೀಡಿದ್ದಾರೆ.

ಮಂಗಳೂರಿನ ಮಹಾವೀರ ಸರ್ಕಲ್ ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪಂಪ್ ವೆಲ್ ಫ್ಲೈ ಓವರ್ ಮಾಗಾರಿ ಕಳೆದ 9 ವರ್ಷಗಳ ಹಿಂದೆ ಆರಂಭವಾಗಿದ್ದರೂ ಈ ವರೆಗೆ ಫೂರ್ಣಗೊಂಡಿಲ್ಲ . 600 ಮೀ ಉದ್ಧದ ಈ ಫ್ಲೈ ಓವರ್ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ನಳಿನ್ ವಿರುದ್ದ ಸಾಮಾಜಿಕ ತಾಣಗಳಲ್ಲಿ ಟ್ರೋಲ್ ಆಗಿತ್ತು. ಫ್ಲೈ ಓವರ್ ಕಾಮಗಾರಿ ವಿಳಂಬಕ್ಕೆ ಕಾಂಗ್ರೆಸ್ ಮುಖಂಡರು ನಳಿನ್ ವಿರುದ್ಧ ಮುಗಿಬಿದ್ದು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇದರ ವಿಳಂಬಕ್ಕೆ ಯಾರು ಕಾರಣ ಅಂತ ಚರ್ಚೆ ಮಾಡಿ ಅಂತ ನಳಿನ್ ಟ್ವೀಟ್ ಮಾಡಿದ್ದು, ತಾನು ಜಿಲ್ಲೆಗಾಗಿ 1500 ಕೋಟಿ ತಂದಿದ್ದೇನೆ ಎಂದಿದ್ದಾರೆ.
ನಳಿನ್ ಟ್ವಿಟ್ಟರ್ ಮೂಲಕ ಮಾಜಿ ಸಚಿವ ರಮಾನಾಥ್ ರೈ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಆಡುವುದು ಮೋಸದ ಪಗಡೆಯಾಟವಲ್ಲ, ಮಾಡುವುದಾದರೆ ಧರ್ಮಯುದ್ದವನ್ನೇ ಮಾಡೋಣ ಎಂದು ಮಾಜಿ ಸಚಿವ ರಮಾನಾಥ ರೈ ಅವರಿಗೆ ಸವಾಲು ಹಾಕಿದ್ದಾರೆ.

ಅಲ್ಲದೇ ತನ್ನ ವಿರುದ್ದ ಪದೇ ಪದೇ ಆರೋಪ ಮಾಡ್ತಿರೋ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ದವೂ ಟ್ವಿಟ್ಟರ್ ಮೂಲಕ ಕಿಡಿಕಾರಿದ್ದಾರೆ. 'ಐವನ್ ಡಿಸೋಜಾರೆ, ನಾನು ಬಕೆಟ್ ಹಿಡಿದು ಹಿಂಬಾಗಿಲ ಮೂಲಕ ಅಧಿಕಾರ ಹಿಡಿದವನಲ್ಲ, ತಾಕತ್ತಿದ್ರೆ ಮುಂದಿನ ಚುನಾವಣೆಯಲ್ಲಿ ನನ್ನನ್ನು ಎದುರಿಸಿ. ಅದು ಬಿಟ್ಟು ನೀಚ ರಾಜಕಾರಣಕ್ಕೆ ಇಳಿದರೆ ಸಿಕ್ಕ ಅಧಿಕಾರವನ್ನೂ ಕಳೆದುಕೊಳ್ಳಬೇಕಾದೀತು' ಅಂತ ಟ್ವೀಟ್ ಮಾಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications