ಕರಾವಳಿಯಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಗೆ 'ತ್ರಿಮೂರ್ತಿ'ಗಳು ಕಾರಣ: ದಿನೇಶ್ ಅಮೀನ್ ಮಟ್ಟು
ಮಂಗಳೂರು, ಆಗಸ್ಟ್ 11: ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಇಂದಿನ ಸ್ಥಿತಿಗೆ ತ್ರಿಮೂರ್ತಿಗಳಾದ ವೀರಪ್ಪ ಮೊಯ್ಲಿ, ಜನಾರ್ಧನ ಪೂಜಾರಿ, ಆಸ್ಕರ್ ಫರ್ನಾಂಡಿಸ್ ಕಾರಣ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ಮಟ್ಟು ಹೇಳಿದರು.
ಬಿ.ವಿ.ಕಕ್ಕಿಲ್ಲಾಯರ ಜನ್ಮ ಶತಾಬ್ದಿಯ ಪ್ರಯುಕ್ತ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು .
ಕಳೆದ ಲೋಕಸಭಾ ಹಾಗು ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲಲು ಕರಾವಳಿಯಕಾಂಗ್ರೆಸ್ ನ ತ್ರಿಮೂರ್ತಿ ಗಳೇ ನೇರ ಕಾರಣ . ದಕ್ಷಿಣ ಕನ್ನಡ ದಲ್ಲಿ ಕಾಂಗ್ರೆಸ್ ಸೋಲಿಗೆ ಜನಾರ್ದನ ಪೂಜಾರಿ, ವೀರಪ್ಪ ಮೊಯ್ಲಿ ಮತ್ತು ಉಡುಪಿ ಯಲ್ಲಿ ಆಸ್ಕರ್ ಫೆರ್ನಾಂಡೀಸ್ ಅವರೇ ನೇರ ಕಾರಣ ಎಂದು ಅವರು ಆರೋಪಿಸಿದರು.

ಕರ್ನಾಟಕದಲ್ಲಿ ಭೂ ಸುಧಾರಣೆ ವಿಚಾರದಲ್ಲಿ ಮಾತನಾಡಿದ ಅವರು ಭೂ ಸುಧಾರಣೆ ಕಾಯ್ದೆಯು ದೇವರಾಜ ಅರಸರ ಅವಸರದ ಕ್ರಾಂತಿಕಾರಿ ತೀರ್ಮಾನವಾಗಿತ್ತು. ಹಿಂದುಳಿದ ವರ್ಗದವರಿಗೆ ರಾಜಕೀಯ ಸ್ಥಾನಮಾನ ನೀಡುವುದಕ್ಕಾಗಿ ಅವರು ಪೂಜಾರಿಯಂತಹವರಿಗೆ ಟಿಕೆಟ್ ಕೊಡಿಸಿ ಬೆಳೆಸಿದರು. ಆದರೆ ಕರಾವಳಿಯ ಈ ಮೂವರು ಕಾಂಗ್ರೆಸ್ ನಾಯಕರು ಎಂದಿಗೂ ಕೂಡ ಭೂ ಸುಧಾರಣೆಯ ಕಾಯ್ದೆ ಜಾರಿಗೊಳ್ಳುವಲ್ಲಿ ದೇವರಾಜ ಅರಸು ಅವರ ಪಾತ್ರದ ಬಗ್ಗೆ ಹೇಳಿಕೊಳ್ಳಲಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.
ಪೂಜಾರಿ, ಮೊಯ್ಲಿ, ಆಸ್ಕರ್ ಫೆರ್ನಾಂಡೀಸ್ ವಾಸ್ತವ ಸ್ಥಿತಿಯನ್ನು ಯುವ ಪೀಳಿಗೆಯ ಮುಂದೆ ಆವಾಗಲೆ ಇಟ್ಟಿದ್ದರೆ ಇಂದು ಯುವ ಜನತೆ ಬಿಜೆಪಿಯತ್ತ ವಾಲುತ್ತಿರಲಿಲ್ಲ. ಭೂ ಸುಧಾರಣೆಯ ಕಾಯ್ದೆಯ ಫಲಾನುಭವಿಗಳ ಮಕ್ಕಳು ಕೇಸರಿ ಪಟ್ಟಿ ಕಟ್ಟಿಕೊಳ್ಳುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications