ಇಡೀ ದೇಶವೇ ಕಾಂಗ್ರೆಸ್ ಮುಕ್ತ: ನಳಿನ್ ಕುಮಾರ್ ಕಟೀಲ್
ಮಂಗಳೂರು, ಮೇ 25: ಚುನಾವಣೆಯ ಫಲಿತಾಂಶದ ಬಳಿಕ ದೇಶ, ರಾಜ್ಯ ಮತ್ತು ಜಿಲ್ಲೆ ಕಾಂಗ್ರೆಸ್ ಮುಕ್ತವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮುಂದೆ ದೇಶದಲ್ಲಿ ರಚಿಸಲಾಗಿದ್ದ ಮಹಾ ಘಟಬಂಧನ್ ಮತ್ತು ಕಾಂಗ್ರೆಸ್ ಮಿತ್ರ ಪಕ್ಷಗಳು ರಾಜಕೀಯವಾಗಿ ಹೇಳ ಹೆಸರಿಲ್ಲದಂತಾಗಿವೆ ಎಂದು ಅಭಿಪ್ರಾಯಪಟ್ಟರು.
ಪುತ್ತೂರು ಮತ್ತು ಸುಳ್ಯದಲ್ಲಿ ಬಿಜೆಪಿ ಸಂಪೂರ್ಣ ಹಿಡಿತ ಸಾಧಿಸಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ವಿಪಕ್ಷಗಳು ಮತ್ತೆ ತಲೆಯೆತ್ತಲಾರದ ಸ್ಥಿತಿ ನಿರ್ಮಾಣವಾಗಿದೆ. ಸಮೀಕ್ಷೆಗೆ ನಿಲುಕದ ಫಲಿತಾಂಶ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಂದಿದೆ. ಕಾರ್ಯಕರ್ತರ ಅವಿರತ ಪರಿಶ್ರಮ, ಮತದಾರರ ಅಭೂತಪೂರ್ವ ಬೆಂಬಲ ಇದಕ್ಕೆ ಕಾರಣ ಎಂದು ಹೇಳಿದರು.
ಭಾರತ ತ್ಯಾಗ ಭೂಮಿ. ಗುರು ಪರಂಪರೆಯನ್ನು ಹೊಂದಿದೆ. ಗುರುವಿನ ಮಾರ್ಗದರ್ಶನದಲ್ಲಿ ಇಲ್ಲಿನ ರಾಜರು ಆಡಳಿತ ನಡೆಸುತ್ತಿದ್ದರು. ಭಗವಾಧ್ವಜವನ್ನು ಗುರುವಾಗಿ ಸ್ವೀಕರಿಸಿರುವ ರಾಜಕೀಯ ಸಂತನ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ತ್ಯಾಗ ಭೂಮಿ ಭಾರತವನ್ನು ಪರಮ ವೈಭವ ಸ್ಥಿತಿಗೆ ಕೊಂಡೊಯ್ಯಲಿದ್ದಾರೆ ಎಂದರು.

ಆದರ್ಶ ರಾಜಕಾರಣದ ಮೂಲಕ ಮೋದಿ ಈ ದೇಶದ ಜನರ ಹೃದಯ ಗೆದ್ದಿದ್ದಾರೆ. ಮೋದಿಯವರೊಂದಿಗೆ ಕೆಲಸ ಮಾಡಲು ಅವಕಾಶ ನೀಡಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತದಾರರಿಗೆ ನನ್ನ ಅನಂತ ವಂದನೆ ಎಂದು ಹೇಳಿದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications