ಕೈ, ತೆನೆ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಪ್ರಮೋದ್ ಮಧ್ವರಾಜ್
ಉಡುಪಿ, ಮಾರ್ಚ್ 25:ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇಂದು ನಾಮಪತ್ರ ಸಲ್ಲಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರೊಂದಿಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ , ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಮತ್ತಿತರರು ಹಾಜರಿದ್ದರು.
7 ಮಂದಿ ಮೀನುಗಾರರ ನಾಪತ್ತೆಗೆ ನೌಕಾಸೇನೆಯೇ ಕಾರಣ:ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ
ಈ ಮೊದಲು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಧು ಬಂಗಾರಪ್ಪ ಸೇರಿದಂತೆ ಜಿಲ್ಲಾ ಜೆಡಿಎಸ್ ನಾಯಕರು ಕಾಂಗ್ರೆಸ್ ಕಚೇರಿಯಲ್ಲಿ ಹಾಜರಿದ್ದರು. ಈ ನಡುವೆ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ಗೆ ಜಯಕಾರ ಕೇಳಿಬಂತು.
ಪ್ರಮೋದ್ ಮಧ್ವರಾಜ್ ನಾಮಪತ್ರ ಸಲ್ಲಿಕೆಗೂ ಮುನ್ನ ಶ್ರೀ ಕೃಷ್ಣಮಠ ಸೇರಿದಂತೆ ಉಡುಪಿಯ ಹಲವು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು . ಅದಲ್ಲದೇ ಮಸೀದಿ ಹಾಗೂ ಚರ್ಚ್ ಗೆ ತೆರಳಿದ ಪ್ರಮೋದ್ ಮಧ್ವರಾಜ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪ್ರಮೋದ್ ಮಧ್ವರಾಜ್ ವಿರುದ್ಧ ಟಿ ಜೆ ಅಬ್ರಹಂ ವಾಗ್ದಾಳಿ
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಮೋದ್ ಮಧ್ವರಾಜ್, ಜೆಡಿಎಸ್ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಖುಷಿ ಇದೆ. ಕೋಮು ಶಕ್ತಿಯ ವಿರುದ್ಧ ನಮ್ಮ ಹೋರಾಟವಿದು. ನಾನು ಬ್ರಹ್ಮಶ್ರೀ ನಾರಯಣ ಗುರುಗಳ ತತ್ವದಲ್ಲಿ ನಂಬಿಕೆ ಇಟ್ಟಿದ್ದೇನೆ. ಈ ಹಿನ್ನೆಲೆಯಲ್ಲಿ ದೇವಾಲಯ, ಮಸೀದಿ ಹಾಗೂ ಚರ್ಚ್ ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಚುನಾವಣೆಯಲ್ಲಿ ಗೆಲುವ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.