Get Updates
Get notified of breaking news, exclusive insights, and must-see stories!

ಆಸ್ಕರ್ ಫರ್ನಾಂಡೀಸ್ ಗಂಭೀರ ಹಿನ್ನಲೆ; ಕಾಂಗ್ರೆಸ್ ಮಹತ್ವದ ಸಭೆ ರದ್ದು

ಮಂಗಳೂರು, ಜುಲೈ 22: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಜುಲೈ 23ರಂದು ನಡೆಯಬೇಕಿದ್ದ ಕಾಂಗ್ರೆಸ್ ನಾಯಕರ ಸಭೆ ರದ್ದುಗೊಳಿಸಲಾಗಿದೆ. ಸಭೆ ರದ್ದುಗೊಳಿಸಿದ ಬಗ್ಗೆ ಕಾಂಗ್ರೆಸ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸಬೇಕಾಗಿದ್ದ ಸಭೆ ಇದಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಕ್ಷದ ನಾಯಕರು ಸಭೆಯಲ್ಲಿ ಭಾಗವಹಿಸುವವರಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಸಭೆಯಲ್ಲಿ ಭಾಗವಹಿಸಲಿದ್ದರು.

ಸಭೆ ರದ್ದುಗೊಳಿಸಿ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಲು ಗುರುವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆ ಹೊತ್ತಿಗೆ ಮಂಗಳೂರಿಗೆ ಆಗಮಿಸಲಿರುವ ಡಿ.ಕೆ. ಶಿವಕುಮಾರ್, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ಆಸ್ಕರ್ ಫರ್ನಾಂಡೀಸ್‌ರವರ ಆರೋಗ್ಯ ವಿಚಾರಣೆ ಮಾಡಲಿದ್ದಾರೆ.

Mangaluru: Congress Leaders Cancels July 23rd Meeting After Oscar Fernandes Hospitalised

ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫರ್ನಾಂಡಿಸ್ ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದರು. ಮೆದುಳಿಗೆ ಏಟು ಬಿದ್ದು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+