ಸ್ವಾಮೀಜಿಗೆ ಏಕವಚನ ಪ್ರಯೋಗ, ಶಾಸಕ ಜೈನ್ ವಿರುದ್ಧಆಕ್ರೋಶ
ಮಂಗಳೂರು, ಮಾರ್ಚ್ 14: ಮುಲ್ಕಿ ಮೂಡಬಿದ್ರೆ ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್ ಮತ್ತೆ ತಮ್ಮ ಸಿಡುಕು ಸ್ವಭಾವ ಹಾಗೂ ಹೇಳಿಕೆಗಳಿಂದ ವಿವಾದಕ್ಕೆ ಗುರಿಯಾಗಿದ್ದಾರೆ. ಈ ಬಾರಿ ಅವರು ಮೂಡಬಿದ್ರೆಯ ಕರಿಂಜೆ ಮುಕ್ತಾನಂದ ಸ್ವಾಮೀಜಿಯವರನ್ನು ಏಕ ವಚನ ಪದ ಪ್ರಯೋಗ ಮಾಡಿ ನಿಂದಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಕುರಿತ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಇತ್ತೀಚೆಗೆ ಮುಡಬಿದ್ರೆಯಲ್ಲಿ ಪಕ್ಷದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಶಾಸಕ ಅಭಯಚಂದ್ರ ಜೈನ್ , "ಅವಾ ಯಾರೋ ಒಬ್ಬ ಕರಿಂಜೆ ಸ್ವಾಮೀಜಿ ಭಾಷಣದಲ್ಲಿ ಹೇಳಿದನಂತೆ, 'ಒಬ್ಬ ರಾಕ್ಷಸ ಮುಖ್ಯಮಂತ್ರಿ ಇದ್ದಾನೆ. ಒಬ್ಬ ರಾಕ್ಷಸ ಎಂಎಲ್ಎ ಇದ್ದಾನೆ' ಅಂತ. ನನಗೆ ಬೈಯಲಿ. ಅದು ಬಿಟ್ಟು ಮುಖ್ಯಮಂತ್ರಿಗೆ ಇನ್ನೊಮ್ಮೆ ಬೈದರೆ ಅವನು ಎಷ್ಟು ದೊಡ್ಡ ಸ್ವಾಮೀಜಿ ಆದರೂ ಬಿಡುವುದಿಲ್ಲ. ತಾಕತ್ತಿದ್ದರೆ ಕರಿಂಜೆ ಸ್ವಾಮೀಜಿ ಚುನಾವಣೆಗೆ ನಿಲ್ಲಲಿ. ಅವನು ಸರ್ಕಾರಿ ಜಾಗ ಕಬಳಿಸಿದ್ದಾನೆ. ಅವನ ವಿರುದ್ಧ ಹೋರಾಟ ಮಾಡುತ್ತೇನೆ," ಎಂದು ಹೇಳಿದ್ದಾರೆ.
ಶಾಸಕರು ಏಕವಚನದಲ್ಲಿ ಸ್ವಾಮೀಜಿಗೆ ನಿಂದಿಸಿ ಸವಾಲೆಸೆದ ವಿಡಿಯೋ ತುಣುಕು ಈಗ ವೈರಲ್ ಆಗಿದ್ದು ಭಾರೀ ಅಕ್ರೋಶ ವ್ಯಕ್ತವಾಗುತ್ತಿದೆ. ಶಾಸಕ ಅಭಯಚಂದ್ರ ಹೇಳಿಕೆಗೆ ಹಿಂದೂಪರ ಸಂಘಟನೆಗಳು ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿವೆ.

ಈ ನಡುವೆ ಬಿಜೆಪಿ ಕೂಡ ಶಾಸಕ ಅಭಯಚಂದ್ರ ಜೈನ್ ವಿರುದ್ದ ಅಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಉಮಾನಾಥ್ ಕೋಟ್ಯಾನ್ ಶಾಸಕ ಅಭಯ ಚಂದ್ರ ಜೈನ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಕರಿಂಜೆ ಮುಕ್ತಾನಂದ ಸ್ವಾಮೀಜಿ ಆಶೀರ್ವಚನದಲ್ಲಿ ರಾಮ ಹಾಗೂ ರಾವಣ ರಾಜ್ಯದ ಬಗ್ಗೆ ಪ್ರಸ್ತಾವಿಸಿದ್ದರು. ಸಿದ್ಧರಾಮಯ್ಯ ಹಾಗೂ ಅಭಯಚಂದ್ರ ಜೈನ್ ಗೆ ರಾಕ್ಷಸ, ರಾವಣ ಎಂದಿಲ್ಲ. ಆದರೆ ಶಾಸಕ ಅಭಯಚಂದ್ರ ಜೈನ್ ಚೇಲಾಗಳು ಹೇಳಿದ ಮಾತನ್ನು ನಂಬಿ ಸ್ವಾಮೀಜಿ ವಿರುದ್ದ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಅಭಯ ಚಂದ್ರ ಜೈನ್ ಸ್ವಾಮೀಜಿ ಅವರನ್ನು ಚುನಾವಣೆಗೆ ನಿಲ್ಲುವಂತೆ ಸವಾಲು ಒಡ್ಡಿದ್ದಾರೆ. ತಾಕತ್ತಿದ್ದರೆ ಈ ಬಾರಿ ಅಭಯಚಂದ್ರ ಜೈನ್ ಚುನಾವಣೆಗೆ ಸ್ಪರ್ಧಿಸಲಿ ಎಂದು ಅವರು ಕಿಡಿಕಾರಿದರು.

ಕರಿಂಜೆ ಶ್ರೀಗಳು ಸರಕಾರಿ ಜಾಗ ಕಬಳಿಸಿದ್ದಾರೆಂದು ಶಾಸಕ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ. ದೇವಸ್ಥಾನದ ಸಮಿತಿಯಲ್ಲಿ ಅಭಯಚಂದ್ರ ಜೈನ್ ಕೂಡಾ ಸದಸ್ಯರು. ಸ್ವಾಮೀಜಿ ಒಂದು ಇಂಚು ಜಾಗ ಕಬಳಿಸಿದ್ದರೆ ತೋರಿಸಲಿ ಎಂದು ಅವರು ಸವಾಲೊಡ್ಡಿದ್ದಾರೆ.
ಸ್ವಾಮೀಜಿ ವಿರುದ್ಧ ಏಕವಚನ ಪದ ಬಳಕೆ, ಜಾಗ ಕಬಳಿಸಿದ ಆರೋಪ ಮಾಡಿದ್ದಕ್ಕೆ ಅಭಯಚಂದ್ರ ಜೈನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದರು. ಕ್ಷಮೆ ಕೇಳದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications