Get Updates
Get notified of breaking news, exclusive insights, and must-see stories!

'ಕಾಂಗ್ರೆಸ್ ಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಬಡವರ ನೆನಪಾಗುತ್ತದೆ'

ಮಂಗಳೂರು, ಏಪ್ರಿಲ್ 11:ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಬಡತನ ನಿರ್ಮೂಲನೆಗೆಂದು ನ್ಯಾಯದ ಘೋಷಣೆ ಮಾಡಿದೆ. ಹಾಗಾದ್ರೆ ಈವರೆಗೆ ಕಾಂಗ್ರೆಸ್ ಬಡವರಿಗೆ ಮಾಡಿದ್ದು ಅನ್ಯಾಯವೇ? ಎಂದು ಬಿಜೆಪಿ ವಕ್ತಾರೆ ಮಾಳವಿಕಾ ಕಿಡಿಕಾರಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ 1971ರಲ್ಲಿ ಗರೀಬಿ ಹಠಾವೋ ಘೋಷಣೆ ಮಾಡಿದ್ದರು. ಕಾಂಗ್ರೆಸ್ ಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಬಡವರ ನೆನಪಾಗುತ್ತದೆ. ಆದರೆ ಇಷ್ಟು ವರ್ಷ ಅಧಿಕಾರದಲ್ಲಿದ್ದರೂ ಈವರೆಗೆ ದೇಶದಿಂದ ಬಡತನ ನಿರ್ಮೂಲನೆ ಮಾಡಲಾಗಿಲ್ಲ ಎಂದು ಟೀಕಿಸಿದರು.

Congress remembers poor people only during election:Malavika

ಈ ಹಿನ್ನೆಲೆಯಲ್ಲಿ ಪರೋಕ್ಷವಾಗಿ 70 ವರ್ಷಗಳಲ್ಲಿ ಅನ್ಯಾಯ ಮಾಡಿದ್ದೇವೆಂದು ಕಾಂಗ್ರೆಸ್ ನವರು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 124 ಎ ಕಲಂ ರದ್ದುಪಡಿಸುವ ಭರವಸೆ ನೀಡಿದ್ದು, ಇದರಿಂದ ಪ್ರತ್ಯೇಕತಾವಾದಿಗಳಿಗೆ ಕಾಂಗ್ರೆಸ್ ಬೆಂಬಲಿಸುವ ಸೂಚನೆ ನೀಡಿದೆ ಎಂದು ಮಾಳವಿಕಾ ತಿಳಿಸಿದರು.

Congress remembers poor people only during election:Malavika

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಗುಡುಗಿದ ಮಾಳವಿಕಾ ಅವರು ಚುನಾವಣೆ ಹೊತ್ತಲ್ಲಿ ಅಲ್ಪಸಂಖ್ಯಾತ ಅಪರಾಧಿಗಳನ್ನು ಬಿಡುಗಡೆ ಮಾಡಲು ರಾಜ್ಯ ಸರಕಾರ ಹೊರಟಿದೆ. ಈ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಯಾವ ಸಂದೇಶ ನೀಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+