ಕಟೀಲು ದುರ್ಗಾಪರಮೇಶ್ವರಿ ಜಾತ್ರೋತ್ಸವ ಅರ್ಧಕ್ಕೆ ಮೊಟಕು
ಮಂಗಳೂರು, ಏಪ್ರಿಲ್ 20: ಕೊರೊನಾ ವೈರಸ್ ಭೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಧಿದೇವತೆ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವ ಅರ್ಧಕ್ಕೆ ಮೊಟಕುಗೊಂಡಿದೆ.
ಸೋಮವಾರ ರಾತ್ರಿ ರಥೋತ್ಸವ ನಡೆದಿದ್ದು, ಈ ವೇಳೆ ಸಹಸ್ರಾರು ಮಂದಿ ಸೇರಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ವಿನಂತಿಯ ಬಳಿಕವೂ ದುರ್ಗಾ ಪರಮೇಶ್ವರಿಯ ಭಕ್ತರು ದೇವಸ್ಥಾನದ ರಥೋತ್ಸವದ ಸಂದರ್ಭದಲ್ಲಿ ಹಾಜರಿದ್ದರು.
ದಕ್ಷಿಣ ಕನ್ನಡ ಜಿಲ್ಲಾಡಳಿತದ ಅಧಿಕಾರಿಗಳು, ತಹಶೀಲ್ದಾರ ಸೇರಿದಂತೆ ಅಧಿಕಾರಿಗಳು ದೇವಸ್ಥಾನದ ಆಡಳಿತ ಮಂಡಳಿಗೆ ಮತ್ತೆ ಸೂಚನೆ ನೀಡಿದ್ದು, ಜಾತ್ರೋತ್ಸವ ಅರ್ಧಕ್ಕೆ ಮೊಟಕುಗೊಂಡಿದೆ.

ಏಪ್ರಿಲ್ 13 ರಿಂದ 20 ರವರೆಗೆ ಕಟೀಲು ಜಾತ್ರೋತ್ಸವ ನಡೆಯಬೇಕಾಗಿದ್ದು, ಇದೀಗ ಅರ್ಧಕ್ಕೆ ಮೊಟಕುಗೊಂಡಿದೆ. ಇಂದು ದೇವಸ್ಥಾನದಲ್ಲಿ ಶಯನ, ಕವಾಟೋಧ್ಛಾಟನೆ, ರಾತ್ರಿ ರಥೋತ್ಸವ, ಅವಭೃತೋತ್ಸವ ನಡೆಯಬೇಕಿತ್ತು. ಆದರೆ ಜಿಲ್ಲಾಡಳಿತದ ಆದೇಶದಂತೆ ಕಟೀಲು ಜಾತ್ರೋತ್ಸವ ರದ್ದುಗೊಂಡಿದೆ.

ಅದೇ ರೀತಿ ಕಟೀಲು ಶ್ರೀದುರ್ಗಾಪರಮೇಶ್ವರಿಯ ಎಕ್ಕಾರು ಕೊಡಮಾಣಿತ್ತಾಯ ಭೇಟಿ ಮತ್ತು ಶಿಬರೂರು ಕೊಡಮಣಿತ್ತಾಯ ಭೇಟಿಯೂ ರದ್ದಾಗಿದೆ. ಕಟೀಲು ದುರ್ಗಾಪರಮೇಶ್ವರಿ ಜಾತ್ರೆಯ ಪ್ರಮುಖ ಆಕರ್ಷಣೆ ತೂಟೆದಾರ ಉತ್ಸವವೂ ರದ್ದಾಗಿದೆ. ತೂಟೆದಾರ ಉತ್ಸವದ ಬಳಿಕ ದೇವಿಯು ವಿಶ್ರಾಂತಿಗೆ ತೆರಳುವ ನಂಬಿಕೆಯಿದ್ದು, ಈ ದಿನ ಕಟೀಲು ಆರು ಮೇಳದ ಯಕ್ಷಗಾನ ಪ್ರದರ್ಶನವೂ ನಡೆಯುವುದಿಲ್ಲ ಎಂದು ತಿಳಿದುಬಂದಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications