ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ವಿರೋಧ
ಮಂಗಳೂರು, ಆ. 23: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣವನ್ನು ತಡೆಯಲು ಒತ್ತಾಯಿಸಿ ಸಿಪಿಐಎಂ ಮನವಿ ಮಾಡಿದೆ.
ದೇಶದ ಲಾಭದಾಯಕ ಸಾರ್ವಜನಿಕ ಸಂಸ್ಥೆಗಳು ಮತ್ತು ಆಸ್ತಿಗಳ ಅಕ್ರಮ ಮಾರಾಟವನ್ನು ಕೇಂದ್ರ ಸರಕಾರ ಮುಂದುವರೆಸಿದೆ. ಇದೀಗ ಅದಾನಿಯವರ ಕಂಪನಿಗೆ ಅಕ್ರಮ ದರಕ್ಕೆ ವಿಶ್ವದ ಅತ್ಯಂತ ಶ್ರೇಷ್ಠ ದರ್ಜೆಯ ಕರ್ನಾಟಕದ, ಮಂಗಳೂರು ಅಂತರಾಷ್ವ್ರೀಯ ವಿಮಾನ ನಿಲ್ದಾಣವನ್ನು ಮಾರಾಟ ಮಾಡಲು ಮುಂದಾಗಿದೆ.
ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಇದನ್ನು ಬಲವಾಗಿ ಖಂಡಿಸುತ್ತದೆ. ಅದೇ ರೀತಿ, ಸದರಿ ನಿಲ್ದಾಣದ ಖಾಸಗೀಕರಣವನ್ನು ತಕ್ಷಣವೇ ಕೈ ಬಿಡುವಂತೆ ಕೇಂದ್ರ ಸರಕಾರವನ್ನು ಬಲವಾಗಿ ಒತ್ತಾಯಿಸುತ್ತದೆ. ರಾಜ್ಯ ಸರಕಾರ ಲಾಭದಾಯಕವಾಗಿ ನಡೆಯುವ ಈ ಸಂಸ್ಥೆಯ ಖಾಸಗೀಕರಣವನ್ನು ತಡೆಯಲು ಮುಂದಾಗದೇ ಮೌನ ವಹಿಸಿ ನೆರವಾಗುತ್ತಿರುವುದು ಅಕ್ಷಮ್ಯವಾಗಿದೆ.

ಕೇರಳದ ಎಡ ಮತ್ತು ಪ್ರಜಾಸತ್ತಾತ್ಮಕ ರಂಗದ ರಾಜ್ಯ ಸರಕಾರ ತಿರುವನಂತಪುರಂ ನ ವಿಮಾನ ನಿಲ್ದಾಣವನ್ನು ಉಳಿಸಿಕೊಳ್ಳಲು ಶತಾಯ- ಗತಾಯ ಪ್ರಯತ್ನ, ತೀವ್ರ ಪ್ರತಿರೋಧ ಒಡ್ಡುತ್ತಿರುವಾಗ, ಕರ್ನಾಟಕ ಸರಕಾರದ ಈ ಅಸಹನೀಯ ಮೌನ ಖಂಡನೀಯವಾಗಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣವನ್ನು ತಡೆಯಲು ರಾಜ್ಯ ಸರಕಾರ ಗಂಭೀರವಾಗಿ ಗಮನ ಹರಿಸಬೇಕು. ಕೇಂದ್ರ ಸರಕಾರ ಅದನ್ನು ಖಾಸಗೀಕರಿಸದಂತೆ ತಡೆಯಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
ಅಗತ್ಯ ಬಿದ್ದರೇ, ಕೇರಳ ಸರಕಾರದ ಮಾದರಿಯಲ್ಲಿ ಮಂಗಳೂರು ವಿಮಾನ ನಿಲ್ದಾಣವನ್ನು ಖರೀದಿಸಲು ರಾಜ್ಯ ಸರಕಾರ ಮುಂದಾಗಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ದ ರಾಜ್ಯ ಸಮಿತಿ ಒತ್ತಾಯಿಸುತ್ತದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications