Get Updates
Get notified of breaking news, exclusive insights, and must-see stories!

ಸಿದ್ದರಾಮಯ್ಯನವರನ್ನು ಬೆಂಬಿಡದ ಕಾಗೆ ಕಾಟ!

ಬೆಂಗ್ಳೂರಲ್ಲಿ ಸಿದ್ದರಾಮಯ್ಯನವರಿಗೆ ಕಾಗೆ ಕಾಟಕೊಟ್ಟಿದ್ದು ನಿಮಗೆ ಗೊತ್ತು. ಆದ್ರೆ, ಇಲ್ಲಿಂದ ಕೇರಳಕ್ಕೆ ಹೋದ್ರು ಕಾಗೆ ಕಾಟ ತಪ್ಪಿಲ್ಲ ಅಂದ್ರೆ ಹ್ಯಾಗೆ! ಅದ್ಸರಿ, ಮಂಜೇಶ್ವರದಲ್ಲಿ ನಡೆದಿದ್ದಾರೂ ಏನು? ಕಾಗೆಯ ಇತ್ತೀಚಿನ ಕಾಟಗಳಿಗಾಗಿ ಓದಿ.

ಮಂಗಳೂರು(ಮಂಜೇಶ್ವರ),ಜನವರಿ. 20 : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅದ್ಯಾಕೋ ಕಾಗೆ ಕಾಟ ತಪ್ಪುತ್ತಿಲ್ಲ. ಬೆಂಗಳೂರಿನಲ್ಲಿ ಕಾರು ಮೇಲೆ ಕೂತು ಸುದ್ದಿ ಮಾಡಿದ್ದ ಕಾಗೆ ಸಿದ್ದರಾಮಯ್ಯ ಕೇರಳಕ್ಕೆ ಹೋದರೂ ಬಿಟ್ಟಿಲ್ಲ.

ಕಾರಿನಲ್ಲಿ ಕಾಗೆ ಕುಳಿತ ಬಳಿಕ ಸಿಎಂ ಕಾರು ಬದಲಾಯಿಸಿದ್ದು ಹಳೇ ವಿಷ್ಯವಾದ್ರೂ ಕಾಗೆ ಮಾತ್ರ ಸಿದ್ದರಾಮಯ್ಯನವರ ಬೆನ್ನು ಬಿಟ್ಟಿಲ್ಲ. ಕಳೆದ ಬಾರಿ ಕಾರಿನ ಮೇಲೆ ಕುಳಿತಿದ್ದ ಕಾಗೆ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆಯೇ ಹಿಕ್ಕೆ ಹಾಕಿದೆ.[ಸಿಎಂ ಕಾರಿನ ಮೇಲೆ ಕುಳಿತ ಕಾಗೆಗೆ ಮಾಧ್ಯಮಗಳ ರೆಕ್ಕೆ ಪುಕ್ಕ]

Crow poops on Karnataka CM Siddaramaiah's spotless white dhoti

ಗುರುವಾರ ಕರ್ನಾಟಕ ಕೇರಳ ಗಡಿ ಭಾಗದ ಮಂಜೇಶ್ವರದಲ್ಲಿ ಕವಿ ಗೋವಿಂದ ಪೈ ಗಿಳಿವಿಂಡು ಸ್ಮಾರಕ ಉದ್ಘಾಟನೆಗಾಗಿ ಆಗಮಿಸಿದ್ದ ವೇಳೆ ಸಿದ್ದರಾಮಯ್ಯನವರಿಗೆ ಕಾಗೆ ಕಾಟ ನೀಡಿದೆ.[ಕಾಗೆ ಕೂರೋದಕ್ಕೂ, ಕಾರು ಬದಲಾಯಿಸೋದಕ್ಕೂ ಸರಿ ಹೋಯ್ತು!]

ತೆರೆದ ವೇದಿಕೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಕೇರಳ, ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಂತ್ರಿಗಳ ಜೊತೆ ಕೂತಿದ್ದ ವೇಳೆ ವೇದಿಕೆಯ ಹಿಂದಿನ ಮರದಲ್ಲಿ ಕುಳಿತಿದ್ದ ಕಾಗೆಯೊಂದು ನೇರವಾಗಿ ಸಿದ್ದರಾಮಯ್ಯನವರ ಮೇಲೆ ಹಿಕ್ಕೆ ಹಾಕಿದೆ.

ಕಾಗೆ ಹಿಕ್ಕೆ ಕಂಡು ಸಿಎಂ ವಿಚಲಿತರಾದರೂ ತಕ್ಷಣ ಜೊತೆಯಲ್ಲಿದ್ದವರ ಗಮನಕ್ಕೆ ತಂದರು. ಆಮೇಲೆ ಸೆಕ್ಯುರಿಟಿ ಗಾರ್ಡ್ ಹಾಗೂ ಶಾಸಕ ಮೊಯಿದ್ದೀನ್ ಭಾವ ಬಂದು ಸಿಎಂ ಪಂಚೆ ಮೇಲೆ ಕಾಗೆ ಹಾಕಿದ ಹಿಕ್ಕೆಯನ್ನು ಶುಚಿ ಗೊಳಿಸಿದರು.

ಸಾವಿರಾರು ಜನ ನೆರೆದಿದ್ದ ಸಭೆಯಲ್ಲಿ ಕಾಗೆ ಸಿಎಂ ಅವರನ್ನೇ ಗುರಿಯಾಗಿಸಿದ್ದು ನೆರೆದಿದ್ದ ಸಾರ್ವಜನಿಕರನ್ನು ಆಶ್ಚರ್ಯ ಗೊಳಿಸುವಂತೆ ಮಾಡಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+