ಸಿದ್ದರಾಮಯ್ಯನವರನ್ನು ಬೆಂಬಿಡದ ಕಾಗೆ ಕಾಟ!
ಬೆಂಗ್ಳೂರಲ್ಲಿ ಸಿದ್ದರಾಮಯ್ಯನವರಿಗೆ ಕಾಗೆ ಕಾಟಕೊಟ್ಟಿದ್ದು ನಿಮಗೆ ಗೊತ್ತು. ಆದ್ರೆ, ಇಲ್ಲಿಂದ ಕೇರಳಕ್ಕೆ ಹೋದ್ರು ಕಾಗೆ ಕಾಟ ತಪ್ಪಿಲ್ಲ ಅಂದ್ರೆ ಹ್ಯಾಗೆ! ಅದ್ಸರಿ, ಮಂಜೇಶ್ವರದಲ್ಲಿ ನಡೆದಿದ್ದಾರೂ ಏನು? ಕಾಗೆಯ ಇತ್ತೀಚಿನ ಕಾಟಗಳಿಗಾಗಿ ಓದಿ.
ಮಂಗಳೂರು(ಮಂಜೇಶ್ವರ),ಜನವರಿ. 20 : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅದ್ಯಾಕೋ ಕಾಗೆ ಕಾಟ ತಪ್ಪುತ್ತಿಲ್ಲ. ಬೆಂಗಳೂರಿನಲ್ಲಿ ಕಾರು ಮೇಲೆ ಕೂತು ಸುದ್ದಿ ಮಾಡಿದ್ದ ಕಾಗೆ ಸಿದ್ದರಾಮಯ್ಯ ಕೇರಳಕ್ಕೆ ಹೋದರೂ ಬಿಟ್ಟಿಲ್ಲ.
ಕಾರಿನಲ್ಲಿ ಕಾಗೆ ಕುಳಿತ ಬಳಿಕ ಸಿಎಂ ಕಾರು ಬದಲಾಯಿಸಿದ್ದು ಹಳೇ ವಿಷ್ಯವಾದ್ರೂ ಕಾಗೆ ಮಾತ್ರ ಸಿದ್ದರಾಮಯ್ಯನವರ ಬೆನ್ನು ಬಿಟ್ಟಿಲ್ಲ. ಕಳೆದ ಬಾರಿ ಕಾರಿನ ಮೇಲೆ ಕುಳಿತಿದ್ದ ಕಾಗೆ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆಯೇ ಹಿಕ್ಕೆ ಹಾಕಿದೆ.[ಸಿಎಂ ಕಾರಿನ ಮೇಲೆ ಕುಳಿತ ಕಾಗೆಗೆ ಮಾಧ್ಯಮಗಳ ರೆಕ್ಕೆ ಪುಕ್ಕ]

ಗುರುವಾರ ಕರ್ನಾಟಕ ಕೇರಳ ಗಡಿ ಭಾಗದ ಮಂಜೇಶ್ವರದಲ್ಲಿ ಕವಿ ಗೋವಿಂದ ಪೈ ಗಿಳಿವಿಂಡು ಸ್ಮಾರಕ ಉದ್ಘಾಟನೆಗಾಗಿ ಆಗಮಿಸಿದ್ದ ವೇಳೆ ಸಿದ್ದರಾಮಯ್ಯನವರಿಗೆ ಕಾಗೆ ಕಾಟ ನೀಡಿದೆ.[ಕಾಗೆ ಕೂರೋದಕ್ಕೂ, ಕಾರು ಬದಲಾಯಿಸೋದಕ್ಕೂ ಸರಿ ಹೋಯ್ತು!]
ತೆರೆದ ವೇದಿಕೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಕೇರಳ, ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಂತ್ರಿಗಳ ಜೊತೆ ಕೂತಿದ್ದ ವೇಳೆ ವೇದಿಕೆಯ ಹಿಂದಿನ ಮರದಲ್ಲಿ ಕುಳಿತಿದ್ದ ಕಾಗೆಯೊಂದು ನೇರವಾಗಿ ಸಿದ್ದರಾಮಯ್ಯನವರ ಮೇಲೆ ಹಿಕ್ಕೆ ಹಾಕಿದೆ.
ಕಾಗೆ ಹಿಕ್ಕೆ ಕಂಡು ಸಿಎಂ ವಿಚಲಿತರಾದರೂ ತಕ್ಷಣ ಜೊತೆಯಲ್ಲಿದ್ದವರ ಗಮನಕ್ಕೆ ತಂದರು. ಆಮೇಲೆ ಸೆಕ್ಯುರಿಟಿ ಗಾರ್ಡ್ ಹಾಗೂ ಶಾಸಕ ಮೊಯಿದ್ದೀನ್ ಭಾವ ಬಂದು ಸಿಎಂ ಪಂಚೆ ಮೇಲೆ ಕಾಗೆ ಹಾಕಿದ ಹಿಕ್ಕೆಯನ್ನು ಶುಚಿ ಗೊಳಿಸಿದರು.
ಸಾವಿರಾರು ಜನ ನೆರೆದಿದ್ದ ಸಭೆಯಲ್ಲಿ ಕಾಗೆ ಸಿಎಂ ಅವರನ್ನೇ ಗುರಿಯಾಗಿಸಿದ್ದು ನೆರೆದಿದ್ದ ಸಾರ್ವಜನಿಕರನ್ನು ಆಶ್ಚರ್ಯ ಗೊಳಿಸುವಂತೆ ಮಾಡಿತು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications