ಮಂಗಳೂರು: ಕಳ್ಳತನದ ಆರೋಪಿ ಲಾಕ್ಅಪ್ ಡೆತ್; ಸಂಶಯಾಸ್ಪದ ಸಾವಿನ ಬಗ್ಗೆ ತನಿಖೆಗೆ ಒತ್ತಾಯ
ಮಂಗಳೂರು, ಫೆಬ್ರವರಿ 19: ಕಳ್ಳತನದ ಪ್ರಕರಣದಲ್ಲಿ ಬಂಧನವಾಗಿದ್ದ ಆರೋಪಿ ಲಾಕ್ಅಪ್ನಲ್ಲೇ ಸಾವಿಗೀಡಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯಲ್ಲಿ ಘಟನೆಯಾಗಿದ್ದು, ಮಂಗಳೂರಿನ ಉರ್ವಾ ಮಾರ್ಕೆಟ್ ಬಳಿಯ ನಿವಾಸಿ ರಾಜೇಶ್ ಕುಮಾರ್ ಮೃತ ಆರೋಪಿಯಾಗಿದ್ದಾನೆ.
ಶುಕ್ರವಾರ ಮುಂಜಾನೆ ವೇಳೆಗೆ ಸ್ಮಾರ್ಟ್ ಸಿಟಿ ಕಾಮಗಾರಿಗೆಂದು ರಸ್ತೆ ಬದಿಯಲ್ಲಿ ತಂದಿಡಲಾಗಿದ್ದ ಕಬ್ಬಿಣದ ಸರಳುಗಳನ್ನು ಕದಿಯುತ್ತಿದ್ದ ವೇಳೆ ಆರೋಪಿ ರಾಜೇಶ್, ಬೀಟ್ನಲ್ಲಿದ್ದ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಮಧ್ಯಾಹ್ನದ ವೇಳೆಗೆ ರಾಜೇಶ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಪೊಲೀಸರು ಆಸ್ಪತ್ರೆಗೆ ದಾಖಲಿಸುವ ವೇಳೆಗೆ ರಾಜೇಶ್ ಮೃತಪಟ್ಟಿರುವುದು ಗೊತ್ತಾಗಿದೆ.
ಮೃತ ರಾಜೇಶ್ ಕುಮಾರ್ಗೆ 32 ವರ್ಷ ಪ್ರಾಯವಾಗಿದ್ದು, ಉರ್ವಾ ಮಾರ್ಕೆಟ್ ಹತ್ತಿರದ ಮಾರಿಯಮ್ಮ ದೇವಸ್ಥಾನದ ಬಳಿಯ ನಿವಾಸಿಯಾಗಿದ್ದಾರೆ. ರಾಜೇಶ್ ತನ್ನ ಸ್ನೇಹಿತ ಸುರತ್ಕಲ್ನ ಸತೀಶ್ ಎಂಬಾತನ ಜೊತೆ ಕಬ್ಬಿಣದ ಸರಳು ಕದಿಯುವ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ.

ಇವರಿಬ್ಬರು ಕುಡಿತಕ್ಕೆ ದಾಸರಾಗಿದ್ದು, ಕುಡಿತದ ಚಟ ಹೆಚ್ಚಾದಂತೆ ಮದ್ಯ ಖರೀದಿಗಾಗಿ ಕಳ್ಳತನಕ್ಕಿಳಿದಿದ್ದರು. ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಗೆ ತಂದಿಟ್ಟ ಕಬ್ಬಿಣದ ಸರಳನ್ನು ಕದ್ದೊಯ್ಯುವ ಸಮಯದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದು, ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಶುಕ್ರವಾರ ಬೆಳಗಿನ ಜಾವ 3.30ರ ಸಮಯದಲ್ಲಿ ರಾಜೇಶ್ ಮತ್ತು ಸತೀಶ್ ಮಂಗಳೂರು ನಗರದ ಸ್ಮಾರ್ಟ್ ಸಿಟಿ ಕಾಮಗಾರಿಗೆ ತಂದಿಟ್ಟಿದ್ದ ಕಬ್ಬಿಣದ ಸರಳುಗಳನ್ನು ಕದ್ದೊಯ್ಯುವ ಯತ್ನ ನಡೆಸಿದ್ದರು. ಇದನ್ನು ಗಮನಿಸಿದ್ದ ಬೀಟ್ ಗಸ್ತಿನಲ್ಲಿದ್ದ ಪೊಲೀಸರು ಈ ಇಬ್ಬರು ಕಳ್ಳರನ್ನು ಹಿಡಿದು ಬಂದರು ಪೊಲೀಸ್ ಠಾಣೆಗೆ ಕರೆ ತಂದಿದ್ದರು. ಬಳಿಕ ವಿಚಾರಣೆ ನಡೆಸಿದಾಗ ಕುಡಿತದ ಚಟಕ್ಕಾಗಿ ಈ ಕಳ್ಳತನ ಕೃತ್ಯ ಮಾಡಿರುವುದಾಗಿ ಹೇಳಿಕೊಂಡಿದ್ದರು.
ಸೆಲ್ನಲ್ಲಿದ್ದ ಈ ಇಬ್ಬರು ಆರೋಪಿಗಳಲ್ಲಿ ರಾಜೇಶ್ ಸಂಜೆಯಾಗುತ್ತಲೇ ಎದೆನೋವು ಎಂದು ಹೇಳಿಕೊಂಡಿದ್ದಾನೆ. ತಕ್ಷಣ ಪೊಲೀಸ್ ಜೀಪ್ನಲ್ಲಿ ಆತನನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ತಪಾಸಣೆ ನಡೆಸಿದ ವೈದ್ಯರು, ರಾಜೇಶ್ ಮೃತರಾಗಿರುವುದಾಗಿ ಹೇಳಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಭೇಟಿ ನೀಡಿದ್ದರು. ಆಸ್ಪತ್ರೆ ವೈದ್ಯರು, ರಾಜೇಶ್ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡರು. ಮೃತ ರಾಜೇಶ್ ಹದಿನೆಂಟನೇ ವಯಸ್ಸಿನಿಂದಲೇ ಕುಡಿತದ ಚಟ ಹೊಂದ್ದಿದ್ದು, ಸ್ನೇಹಿತರ ಜೊತೆ ರಾತ್ರಿಹೊತ್ತು ಸುತ್ತಾಟ ನಡೆಸುತ್ತಿದ್ದ ಎಂಬುದಾಗಿ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಈ ನಡುವೆ ಕಳ್ಳತನ ಪ್ರಕರಣದಲ್ಲಿ ಪೊಲೀಸ್ ಕಷ್ಟಡಿಯಲ್ಲಿದ್ದಾಗ ಸಾವು ಸಂಭವಿಸಿರುವುದರಿಂದ ಯಾಕಾಗಿ ಸಾವು ಸಂಭವಿಸಿತು ಎಂದು ಕುಟುಂಬಸ್ಥರು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಠಾಣೆಯಲ್ಲಿನ ಸಿಸಿ ಕ್ಯಾಮೆರಾದಲ್ಲಿ ಎಲ್ಲಾ ದಾಖಲೆಗಳು ಲಭ್ಯವಿರುತ್ತವೆ. ಸೆಲ್ ಮುಂಭಾಗದಲ್ಲೂ ಸಿಸಿ ಕ್ಯಾಮರಾ ಇದೆ. ಉತ್ತರ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದೇನೆ ಎಂದು ಕಮೀಷನರ್ ಹೇಳಿದ್ದಾರೆ.
ರಾಜೇಶ್ ಬೆಳಗಿನ ಜಾವ ಮನೆಯ ಪರಿಸರದಲ್ಲಿದ್ದು, ರಾತ್ರಿ ವೇಳೆ ತಿರುಗಾಡುವ ಚಟವನ್ನು ಹೊಂದಿದ್ದ. ದಿನ ಪೂರ್ತಿ ಕುಡಿತದ ನಶೆಯಲ್ಲಿರುವುದೇ ರಾಜೇಶ್ಗೆ ಹವ್ಯಾಸ ವಾಗಿಬಿಟ್ಟಿತ್ತು. ಕೆಲಸ ಮಾಡುವುದಕ್ಕೂ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಕುಡಿಯುವುದಕ್ಕೆ ಯಾರನ್ನಾದರೂ ಕಾಡಿ, ಬೇಡಿ ಅಥವಾ ಸಣ್ಣ- ಪುಟ್ಟ ವಸ್ತುಗಳನ್ನು ಕದ್ದು ಹಣ ಹೊಂದಿಸುತ್ತಿದ್ದರು ಎಂದು ತಿಳಿದುಬಂದಿದೆ.
ತನಿಖೆಯ ಬಳಿಕ ಸಿಐಡಿಯಿಂದಲು ಪ್ರಕರಣದ ಕುರಿತು ತನಿಖೆ ನಡೆಸಲು ಅವಕಾಶವಿದೆ. ಪೋಸ್ಟ್ ಮಾರ್ಟಂ ವರದಿಯನ್ನು ಸಹ ವಿಡಿಯೋ ರೆಕಾರ್ಡ್ ಮಾಡಿಯೇ ತಯಾರಿಸಲಾಗುತ್ತದೆ. ಸದ್ಯ ಪೋಸ್ಟ್ ಮಾರ್ಟಂ ರಿಪೋರ್ಟ್ ಪೊಲೀಸರ ಕೈ ಸೇರಬೇಕಿದೆ.
ಒಟ್ಟಿನಲ್ಲಿ ರಾಜೇಶ್ ಸಾವು ಯಾಕಾಯ್ತು ಎಂಬುದರ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕಾಗಿದೆ. ರಾಜೇಶ್ ಕುಟುಂಬಸ್ಥರು ಇದೊಂದು ಸಂಶಯಾಸ್ಪದ ಸಾವು ಅಂತಾ ಹೇಳಿದ್ದು, ತನಿಖೆಯ ಬಳಿಕವಷ್ಟೇ ಈ ಎಲ್ಲಾ ಸಂಶಯಗಳಿಗೆ ಉತ್ತರ ದೊರಕಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications