ದ.ಕ ಜಿಲ್ಲೆಯ ಆಕ್ಸಿಜನ್ ಸಮಸ್ಯೆ, ಚಂಡಮಾರುತ ಹಾನಿ ವಿಚಾರ; ಸಿಎಂ ಮೊರೆ ಹೋದ ಸಚಿವ
ಮಂಗಳೂರು, ಮೇ 20: ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಕಂಡುಬಂದಿದ್ದು, ಇದೀಗ ಈ ಸಮಸ್ಯೆಯನ್ನು ನಿವಾರಿಸಬೇಕೆಂದು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾದ ಕೋಟಾ ಶ್ರೀನಿವಾಸ ಪೂಜಾರಿ ನಿಯೋಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿದ್ದು, ಆಕ್ಸಿಜನ್ ಟ್ಯಾಂಕರ್ನ್ನು ತಕ್ಷಣ ಆದ್ಯತೆಯ ಮೇರಗೆ ಒದಗಿಸಿಕೊಡಬೇಕೆಂದು ಮನವಿ ಮಾಡಿದರು. ಅಲ್ಲದೆ ಆರೋಗ್ಯ ಇಲಾಖೆಯಲ್ಲಿ ನೌಕರರ ಕೊರತೆಯಿಂದ ಬಹಳ ಸಮಸ್ಯೆ ಎದುರಾಗುತ್ತಿದ್ದು, 40 ಜನ ಆರೋಗ್ಯ ಮಿತ್ತ ಕಾರ್ಯನಿರ್ವಾಹಕರನ್ನು ಹೆಚ್ಚುವರಿ ನೇಮಕ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ದ.ಕ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯಲ್ಲಿ ನಿರೀಕ್ಷೆಯ ಪ್ರಮಾಣದಲ್ಲಿ ಸರಬರಾಜು ಆಗದೆ ಜನ ಬಹಳ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಪ್ರತಿದಿನ ಲಸಿಕೆಗಾಗಿ ಬೇಡಿಕೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ತಕ್ಷಣ 1 ಲಕ್ಷ ಲಸಿಕೆಗಳನ್ನು ಸರಬರಾಜು ಮಾಡುವಂತೆ ಕೋಟಾ ಶ್ರೀನಿವಾಸ ಪೂಜಾರಿ ವಿನಂತಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಆಸ್ಪತ್ರೆಗಳಲ್ಲಿ ಎಂಬಿಬಿಎಸ್ ವೈದ್ಯರ ಕೊರತೆಯಿದ್ದು, ಇದರಿಂದಾಗಿ ಬೇರೆ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ತಕ್ಷಣವೇ ವೈದ್ಯರು ಮತ್ತು ದಾದಿಯರ ನೇಮಕ ಮಾಡಬೇಕು. ಈಗಾಗಲೇ ಸರ್ಕಾರದ ಸೇವೆಯಲ್ಲಿರುವವರಿಗೆ ವೇತನ ನೀಡಬೇಕೆಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು.
ಕೋಟಾ ಶ್ರೀನಿವಾಸ ಪೂಜಾರಿ ನಿಯೋಗದಲ್ಲಿ, ಮೀನುಗಾರಿಕಾ ಸಚಿವ ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಇದ್ದರು.

ಚಂಡಮಾರುತದಿಂದ 126 ರೂ.ಕೋಟಿ ನಷ್ಟ
ಇನ್ನು, ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡದಲ್ಲಿ ಹಾನಿಯಾದ ವಿಚಾರವಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯಿಸಿದ್ದು, ಸಚಿವ ಎಸ್.ಅಂಗಾರ ಜೊತೆ ಸಿಎಂ ಭೇಟಿ ಮಾಡಿದ್ದೇವೆ. ಮೊನ್ನೆಯ ಚಂಡಮಾರುತದಿಂದ 126 ರೂ.ಕೋಟಿ ನಷ್ಟವಾಗಿದೆ. ರಸ್ತೆ, ಮೀನುಗಾರಿಕೆ ದಾರಿ, ಸೇತುವೆಗಳು ಹಾನಿಯಾಗಿವೆ ಎಂದರು.
ಮುಖ್ಯಮಂತ್ರಿಗಳ ಬಳಿ ಪರಿಹಾರಕ್ಕೆ ಮನವಿ ಮಾಡಿದ್ದು, ಈ ಬಗ್ಗೆ ಗಮನಹರಿಸುವುದಾಗಿ ಸಿಎಂ ಹೇಳಿದ್ದಾರೆ. ದ.ಕ ಜಿಲ್ಲೆಯಲ್ಲಿ ಕೋವಿಡ್ನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುತ್ತಿದ್ದೇವೆ. ಲಸಿಕೆ, ಆಕ್ಸಿಜನ್ ಟ್ಯಾಂಕ್ಗೆ ಬೇಡಿಕೆ ಇಟ್ಟಿದ್ದೇವೆ, ವೆಂಟಿಲೇಟರ್ಗೂ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಬುಧವಾರದ ಆರ್ಥಿಕ ಪ್ಯಾಕೇಜ್ನಲ್ಲಿ ಅರ್ಚಕರಿಗೆ ನೆರವು ಘೋಷಿಸಿಲ್ಲವೆಂಬ ವಿಚಾರವಾಗಿ ಮಾತನಾಡಿ, ತಸ್ತಿಕ್ ಹೆಚ್ಚಳ ಮಾಡುವಂತೆ ಅರ್ಚಕರು ನನ್ನನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅರ್ಚಕರು ಹಾಗೂ ಮೀನುಗಾರರ ಬೇಡಿಕೆಗಳನ್ನು ಸಿಎಂಗೆ ತಿಳಿಸಿದ್ದೇವೆ. ಸಿಎಂ ಕೂಡ ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ಸಿಎಂ ಪ್ಯಾಕೇಜ್ ಘೋಷಿಸಿದ್ದಾರೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Heat Wave Karnataka: ಕರಾವಳಿ ಬಿಸಿ ಕಾವಲಿಯ ಮೇಲೆ ಮಾಲಿನ್ಯದ ಥಡ್ಕಾ: ರಾಜಾರಾಂ ತಲ್ಲೂರು ಬರಹ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications