ಇನ್ನು ಮುಂದೆ ಸೈಕ್ಲೋನ್ ಕಡಲತಡಿಗೆ ಅಪ್ಪಳಿಸುವ ಮುಂಚೆಯೇ ಮೊಳಗಲಿದೆ ಸೈರನ್!
ಮಂಗಳೂರು, ನವೆಂಬರ್. 21: ಅರಬ್ಬೀ ಸಮುದ್ರ ಸೇರಿದಂತೆ ಬಂಗಾಳ ಕೊಲ್ಲಿಯಲ್ಲಿ ಪದೇ ಪದೆ ಉಂಟಾಗುವ ವಾಯುಭಾರ ಕುಸಿತದಿಂದ ಸೃಷ್ಟಿಯಾಗುವ ಸೈಕ್ಲೋನ್ ಗೆ ಕರಾವಳಿಯ ಜನರು ಇನ್ನು ಕಂಗೆಡುವ ಅವಶ್ಯಕತೆ ಇಲ್ಲ. ಯಾಕೆಂದರೆ ಸೈಕ್ಲೋನ್ ಕಡಲತಡಿಗೆ ಅಪ್ಪಳಿಸುವ ಮುಂಚಿತವಾಗಿ ರಾಜ್ಯ ಕರಾವಳಿಯಲ್ಲಿ ಸೈರನ್ ಮೊಳಗಲಿದೆ.
ಚಂಡಮಾರುತ ಸುಳಿಯಿಂದ ಪಾರಾಗಲು ಕೇಂದ್ರ ಸರ್ಕಾರದ ನೇತೃತ್ವದಲ್ಲಿ, ಕರ್ನಾಟಕ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಸೈಕ್ಲೋನ್ ಅಪಾಯ ತಡೆ ಯೋಜನೆ ಕೈಗೊಳ್ಳಲಾಗುತ್ತಿದೆ. ಚಂಡಮಾರುತ ಅಪ್ಪಳಿಸುವ ಮುನ್ನ ಕರಾವಳಿಯ ಜನರನ್ನು ಯಾವ ರೀತಿ ಎಚ್ಚರಿಸುವುದು ಎಂಬುದೇ ಈ ಯೋಜನೆಯ ಉದ್ದೇಶವಾಗಿದೆ.
ಸೈಕ್ಲೋನ್ ಬೀಸಿದಾಗ ಕಾಪಾಡಿಕೊಳ್ಳುವುದರ ಬಗ್ಗೆ, 320 ಕಿ.ಮೀ.ಉದ್ದದ ಕರಾವಳಿ ಹೊಂದಿರುವ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಸೈಕ್ಲೋನ್ ಶೆಲ್ಟರ್ ನಿರ್ಮಾಣ, ಸೈಕ್ಲೋನ್ ಸೈರನ್ ಟವರ್ ರಚನೆ, ಯಾವುದೇ ಸಂಪರ್ಕ ವ್ಯವಸ್ಥೆ ಹದಗೆಟ್ಟರೆ ಬಳಕೆ ಮಾಡುವಂತಹ ಆಧುನಿಕ ಸ್ಯಾಟಲೈಟ್ ಫೋನ್, ಡಿಜಿಟಲ್ ರೇಡಿಯೊ ಸಹಿತ ಹಲವು ಅಂಶಗಳನ್ನು ಈ ಯೋಜನೆ ಒಳಗೊಂಡಿದೆ.

ಈ ಯೋಜನೆಯಡಿ ಸೈಕ್ಲೋನ್ ಬೀಸುವ ಪೂರ್ವದಲ್ಲೇ ಕಡಲ ತೀರದ ಜನರಿಗೆ ಹಾಗೂ ಪ್ರವಾಸಿಗರಿಗೆ ಮುನ್ನೆಚ್ಚರಿಕೆ ನೀಡುವಂತಹ ಸೈಕ್ಲೋನ್ ಸೈರನ್ ಟವರ್ಸ್ ನಿರ್ಮಾಣಗೊಳ್ಳಲಿದೆ.ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಉಸ್ತುವಾರಿಯಲ್ಲಿ ಇದನ್ನು ಕೈಗೆತ್ತಿಕೊಳ್ಳಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ 13, ಉಡುಪಿಯಲ್ಲಿ 6 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಸೇರಿದಂತೆ ರಾಜ್ಯ ಕರಾವಳಿಯಲ್ಲಿ ಒಟ್ಟು 26 ಸೈಕ್ಲೋನ್ ಸೈರನ್ ಟವರ್ಗಳು ನಿರ್ಮಾಣಗೊಳ್ಳಲಿವೆ.
ಕೇಂದ್ರ-ರಾಜ್ಯ ಸಹಕಾರದಲ್ಲಿ ಒಟ್ಟು 128 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ , ಹೆಚ್ಚಾಗಿ ಚಂಡಮಾರುತ ಎದುರಿಸುವ ಪೂರ್ವ ಕರಾವಳಿಗೆ ಹೆಚ್ಚಿನ ಮೊತ್ತ ಮೀಸಲಿಡಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications