ಆತಂಕ ಮೂಡಿಸಿದ ತೌಕ್ತೆ ಚಂಡಮಾರುತ: ಎಲ್ಲೆಡೆ ಹೈಅಲರ್ಟ್
ತಿರುವನಂತಪುರಂ, ಮೇ 15: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ 'ತೌಕ್ತೆ' ಚಂಡಮಾರುತ ರಚನೆ ಆಗಿದ್ದು, ಇದರ ಚಲನೆ ಕೇರಳದ ಕರಾವಳಿಗೆ ಸಮಾನಾಂತರವಾಗಿ ಉತ್ತರದ ಕಡೆಗೆ ಬೀಸುತ್ತಿದೆ.
Recommended Video
ಉತ್ತರ ಕೇರಳ ಮತ್ತು ಉತ್ತರ ಕರ್ನಾಟಕದ ನಡುವೆ ತಲುಪುವಾಗ ಸೈಕ್ಲೋನ್ ಚಂಡಮಾರುತವಾಗಿ ಬದಲಾಗಳಿದ್ದು, ಸಮುದ್ರ ಪರಿಸ್ಥಿತಿಗಳನ್ನು ಪರಿಗಣಿಸಿ ಕೇರಳ ಕರಾವಳಿಯ ಎಲ್ಲ ಮೀನುಗಾರಿಕೆ ಚಟುವಟಿಕೆಗಳನ್ನು ಕೇರಳ ಸರ್ಕಾರ ನಿಲ್ಲಿಸಿದೆ.
ಕೇರಳವು ಚಂಡಮಾರುತದ ನೇರ ಪಥದಲ್ಲಿ ಬರದಿದ್ದರೂ, ಕೇರಳದ ಮೇಲೆ ಇದು ಹೆಚ್ಚು ಪರಿಣಾಮ ಬೀರಲಿದೆ. ಕೇರಳದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆ ವಿವಿಧ ಜಿಲ್ಲೆಗಳಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚಂಡಮಾರುತ ತೀವ್ರಗೊಂಡ ನಂತರ ಗುಜರಾತ್ ಕಡೆಗೆ ಸಾಗುವಾಗ ಚಂಡಮಾರುತದ ಪಥವು ಕೇರಳ ಕರಾವಳಿಗೆ ಸಮಾನಾಂತರವಾಗಲಿದೆ. ಇನ್ನು ಈ ಚಂಡಮಾರುತದಿಂದ 24 ಗಂಟೆಗಳಲ್ಲಿ 204 ಮಿ.ಮೀ ಮಳೆಯಾಗುವ ನಿರೀಕ್ಷೆಯಿದೆ.
ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಸಹ ಭಾರೀ ಗಾಳಿ ಬೀಸಲಿದೆ ಎಂದು ಐಎಂಡಿ ತಿಳಿಸಿದೆ. ಗಂಟೆಗೆ 60-70 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯು ತಿರುವನಂತಪುರಂ, ಕೊಲ್ಲಂ, ಪಥನಮತ್ತಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಅಪ್ಪಳಿಸಬಹುದು ಎಂದು ತಿಳಿಸಲಾಗಿದೆ.
ತಿರುವನಂತಪುರಂ, ಕೊಲ್ಲಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಈವರೆಗೆ 87 ಜನರನ್ನು ಸ್ಥಳಾಂತರಿಸಿ ರಾಜ್ಯದ ನಾಲ್ಕು ಶಿಬಿರಗಳಲ್ಲಿ ಇರಿಸಲಾಗಿದೆ ಎಂದು ಭೂ ಕಂದಾಯ ಆಯುಕ್ತರು ಮಾಹಿತಿ ನೀಡಿದ್ದಾರೆ.
ತಿರುವನಂತಪುರಂನಲ್ಲಿ 51 ಜನರನ್ನು ಸ್ಥಳಾಂತರಿಸಿ ಶಿಬಿರದಲ್ಲಿ ವಸತಿ ಕಲ್ಪಿಸಲಾಗಿದ್ದು, ಕೊಲ್ಲಂ ಶಿಬಿರದಲ್ಲಿ 24 ಜನರಿದ್ದಾರೆ. ಇಡುಕ್ಕಿಯಲ್ಲಿ ನಾಲ್ಕು ಮತ್ತು ಎರ್ನಾಕುಲಂ ವಿಪತ್ತು ಪರಿಹಾರ ಶಿಬಿರಗಳಲ್ಲಿ ಎಂಟು ಜನರಿದ್ದಾರೆ. ಇನ್ನು ಕರ್ನಾಟಕದ ಕರಾವಳಿ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲೂ ಈ ಚಂಡಮಾರುತ ತನ್ನ ಪ್ರಭಾವ ಬೀರಲಿದ್ದು, ಎರಡೂ ಸರ್ಕಾರಗಳು ಕೂಡ ಮುನ್ನೆಚ್ಚರಿಕೆ ನೀಡಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications