ಚಂಡಮಾರುತ ಪ್ರಭಾವ; ಅಲೆಗಳ ಅಬ್ಬರಕ್ಕೆ ಸ್ಮಶಾನ, ಮನೆ ಸಮುದ್ರ ಪಾಲಾಗುವ ಭೀತಿ
ಮಂಗಳೂರು, ಮೇ 14: ತೌಕ್ತೆ ಚಂಡಮಾರುತ ಕರಾವಳಿ ಕರ್ನಾಟಕವನ್ನು ಪ್ರವೇಶಿಸಲು ಕ್ಷಣಗಣನೆ ಆರಂಭವಾಗಿದ್ದು, ಇದರ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ.
ಮಂಗಳೂರು ಭಾಗದ ಹಲವು ಪ್ರದೇಶಗಳಲ್ಲಿ ಕಡಲ್ಕೊರೆತ ತೀವ್ರವಾಗುತ್ತಿದೆ. ಸಮುದ್ರದ ಅಲೆಗಳು ಅಬ್ಬರಿಸುತ್ತಿದ್ದು, ದಡಕ್ಕೆ ಅಪ್ಪಳಿಸುತ್ತಿದೆ. ಮಂಗಳೂರಿನ ಸೋಮೇಶ್ವರ, ಉಳ್ಳಾಲ, ಪೆಣಂಬೂರು, ಸುರತ್ಕಲ್ ಕಡಲ ಕಿನಾರೆಗಳಲ್ಲಿ ಭಾರೀ ಕಡಲ್ಕೊರೆತವಾಗುತ್ತಿದ್ದು, ಹಲವು ಮನೆಗಳು ಅಪಾಯದ ಅಂಚಿನಲ್ಲಿದೆ.
ಸೋಮೇಶ್ವರದ ಸ್ಮಶಾನದ ಆವರಣ ಗೋಡೆ ಕಡಲ್ಕೊರೆತದಿಂದಾಗಿ ಬಿರುಕು ಬಿಟ್ಟಿದ್ದು, ಸಮುದ್ರದಲ್ಲಿ ಅಬ್ಬರ ಹೆಚ್ಚಾದರೆ ಸ್ಮಶಾನವೇ ಸಮುದ್ರ ಪಾಲಾಗುವ ಆತಂಕ ಎದುರಾಗಿದೆ. ಇನ್ನು ಸೋಮೇಶ್ವರದ ಮೋಹನ್ ಉಚ್ಚಿಲ ಮತ್ತು ಯೋಗಿಶ್ ಎಂಬುವವರ ಮನೆಯೂ ಅಪಾಯದ ಅಂಚಿನಲ್ಲಿದ್ದು, ಚಂಡಮಾರುತದ ತೀವ್ರತೆಗೆ ಜಾಸ್ತಿಯಾದಲ್ಲಿ ಮನೆಗೆ ಹಾನಿಯಾಗುವ ಆತಂಕ ಎದುರಾಗಿದೆ.

ಕೇವಲ ಮಂಗಳೂರು ಮಾತ್ರವಲ್ಲದೆ ಉಡುಪಿ, ಉತ್ತರ ಕನ್ನಡದ ಕೆಲ ಕಡಲ ಕಿನಾರೆಗಳಲ್ಲಿ ಸಮುದ್ರದ ಅಬ್ಬರದಿಂದಾಗಿ ಕಡಲ್ಕೊರೆತ ತೀವ್ರವಾಗುತ್ತಿದೆ. ಬೀಚ್ ಬಳಿಯ ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮೀನುಗಾರಿಕಾ ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಎಸ್.ಅಂಗಾರ, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸುವಂತೆ ಸೂಚಿಸಿದ್ದಾರೆ.

ಸೋಮೇಶ್ವರ ಭಾಗಕ್ಕೆ ಮೀನುಗಾರಿಕಾ ಇಲಾಖೆ ಮತ್ತು ಬಂದರು ಇಲಾಖೆಯ ನಿರ್ದೇಶಕರು ಭೇಟಿ ನೀಡಿದ್ದು, ವರದಿ ನೀಡಿದ್ದಾರೆ. ತೌಖ್ತೆ ಚಂಡಮಾರುತ ಮೇ 15 ಮತ್ತು ಮೇ 16 ರಂದು ರಾಜ್ಯದ ಕರಾವಳಿಗೆ ಅಪ್ಪಳಿಸಲಿದ್ದು, ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications