ತೌಖ್ತೆ ಚಂಡಮಾರುತ; ಮೇ 14ರಿಂದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ
ಮಂಗಳೂರು, ಮೇ 14: ರಾಜ್ಯದ ಕರಾವಳಿ ಭಾಗಗಳಿಗೆ ತೌಕ್ತೆ ಚಂಡಮಾರುತ ಅಬ್ಬರದ ಭೀತಿ ಎದುರಾಗಿದೆ. ಮೇ 14 ರಿಂದ ಮೇ 16ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮೇ 17 ಮತ್ತು 18 ರಂದು ಆರೆಂಜ್ ಅಲರ್ಟ್ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರೆಡ್ ಅಲರ್ಟ್ ವೇಳೆಯಲ್ಲಿ ಕರಾವಳಿಯಲ್ಲಿ ಭಾರೀ ಗಾಳಿ, ಸಿಡಿಲು-ಮಿಂಚು ಸಹಿತ ಅತ್ಯಧಿಕ ಮಳೆಯಾಗಲಿದ್ದು, ಮಳೆಯ ಪ್ರಮಾಣ 204.5 ಮಿ.ಮೀಗೂ ಅಧಿಕ ಇರಲಿದೆ ಎಂಬ ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಮೇ 14ರ ಸಂಜೆಯಿಂದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮಾರುತಗಳು ಬಲ ಪಡೆದುಕೊಂಡು ಕರಾವಳಿಗೆ ಅಪ್ಪಳಿಸಲಿದ್ದು, ಮೇ 15 ಮತ್ತು ಮೇ 16 ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದರೆ ತಕ್ಷಣ ಜಿಲ್ಲಾಡಳಿತಕ್ಕೆ ಸೂಚಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚಿಸಿದೆ. ಈ ಸಂಬಂಧ ಕಟ್ರೋಲ್ ರೂಂ ತೆರೆದಿದ್ದು, ತುರ್ತು ಸಂದರ್ಭದಲ್ಲಿ ಜನ 1077 ಅಥವಾ 9483908000 ನಂಬರ್ ಗೆ ಸಂಪರ್ಕ ಮಾಡುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮನವಿ ಮಾಡಿದ್ದಾರೆ.
ಅಲ್ಲದೆ, ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲೇ ಇರಬೇಕು. ಸಾರ್ವಜನಿಕರು ಸಮುದ್ರ, ನದಿ ಹಾಗೂ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚಿಸಿದೆ.

ಚಂಡಮಾರುತದ ಪ್ರಭಾವದಿಂದ ಕಾಸರಗೋಡು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಚಾಮರಾಜನಗರದಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಗದಗ, ಉಡುಪಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications