'ಇವತ್ತು ಡಿಕೆ ಶಿವಕುಮಾರ್, ನಾಳೆ ಪೂಜಾರಿ, ನಾಡಿದ್ದು ಸೋನಿಯಾ ಗಾಂಧಿ'
ಮಂಗಳೂರು, ಆಗಸ್ಟ್ 02 : ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಮೇಲಿನ ಐಟಿ ದಾಳಿ ಕೇಂದ್ರ ಸರಕಾರದ ಹೀನ ಕೃತ್ಯ ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಕಿಡಿಕಾರಿದ್ದಾರೆ.
ಬುಧವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಇವತ್ತು ಶಿವಕುಮಾರ್, ನಾಳೆ ಪೂಜಾರಿ, ನಾಡಿದ್ದು ಸೋನಿಯಾ ಗಾಂಧಿ, ಆ ಬಳಿಕ ರಾಹುಲ್ ಗಾಂಧಿ ಮೇಲೂ ಐಟಿ ದಾಳಿ ಮಾಡವ ಇರಾದೆ ಮೋದಿ ಅವರಿಗಿದೆ. ಆದರೆ, ಜನರು ಇದನ್ನೆಲ್ಲಾ ಗಮನಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.

"ಆದಾಯ ತೆರಿಗೆ ಇಲಾಖೆ ಯಾವ ಪಕ್ಷ ಇಲಾಖೆಯಲ್ಲ, ಯಾವ ವ್ಯಕ್ತಿಗೂ ಸೇರಿದ ಇಲಾಖೆ ಅಲ್ಲ. ಅದನ್ನು ತಮ್ಮಿಚ್ಛೆಯಂತೆ ಬಳಸುತ್ತಿರುವುದು ಸರಿಯಲ್ಲ. ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಗುರಿ ಮಾಡಿಕೊಂಡು 39 ಕಡೆ ದಾಳಿ ನಡೆಸಲಾಗಿದೆ. ಐಟಿ ದಾಳಿಗೆ ಸೇನೆಯ ಭಾಗವಾಗಿರುವ ಸಿಆರ್ ಪಿಎಫ್ ಪಡೆಯನ್ನು ಬಳಸಿಕೊಡಿರುವುದು ಡಿಕೆಶಿ ಅವರೇನು ಉಗ್ರಗಾಮಿಯೇ ಎಂದು ಅವರು ಪ್ರಶ್ನಿಸಿದರು.
ಪ್ರಧಾನಿ ಮೋದಿ ಅವರನ್ನು ಯಾರು ಪ್ರಶ್ನಿಸುವಂತಿಲ್ಲವೆ. ಪ್ರಜಾಪ್ರಭುತ್ವ ಎಂದರೇ ಇದೇ ನಾ ಎಂದು ಪ್ರಶ್ನಿಸಿದ ಪೂಜಾರಿ, ಐಟಿ ದಾಳಿಗೆ ಮುನ್ನ ಕೆಲವೊಂದು ಕಾನೂನು ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಅದ್ಯಾವುದನ್ನು ಇಲ್ಲಿ ಮಾಡಲಾಗಿಲ್ಲ ಎಂದು ಕಿಡಿಕಾರಿದರು.
ರಾಜ್ಯಸಭಾ ಚುನಾವಣೆಯನ್ನು ಗಮನದಲ್ಲಿಟ್ಟು ಈ ದಾಳಿ ನಡೆಸಲಾಗಿದೆ. ಮೋದಿ ಅಧಿಕಾರಕ್ಕೆ ಬಂದ ಬಳಿಕ ಈವರೆಗೆ 1038 ಕಡೆ ದಾಳಿ ಮಾಡಲಾಗಿದೆ. ಈ ದಾಳಿಗಳಲ್ಲಿ ಈ ವರೆಗೆ ಎಷ್ಟು ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications