ಸುಳ್ಯ: ಕಾರ್ ದರೋಡೆ, ಬಂದೂಕುಧಾರಿಗಳು 3 ದಿನ ಪೊಲೀಸ್ ಕಸ್ಟಡಿಗೆ
ಬೆಳಗಾವಿಯಲ್ಲಿ ಬಂಧಿಸಲಾಗಿದ್ದ ಸುಳ್ಯ ಐವರ್ನಾಡಿ ಬಳಿ ಕಾರ್ ದರೋಡೆ ಆರೋಪಿಗಳನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಮಂಗಳೂರು ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಂಗಳೂರು, ಫೆಬ್ರವರಿ. 17 : ಸುಳ್ಯ ಬಳಿಯ ಐವರ್ನಾಡಿ ಬಳಿ ಕಾರೊಂದನ್ನು ಅಡ್ಡಗಟ್ಟಿ ಐದು ಲಕ್ಷ ರು. ದೋಚಿದ್ದ ನಾಲ್ವರು ಬಂದೂಕುಧಾರಿಗಳನ್ನು 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ.
ಮುಂಬೈಯ ಅವಿನಾಶ್ ಜಗನ್ನಾಥ ಮಾರ್ಕೆ (35), ಪುತ್ತೂರು ತಾಲೂಕಿನ ಬೆಳಂದೂರಿನ ಅಬ್ದುಲ್ ಕರೀಂ (24), ಮುಹಮ್ಮದ್ ಹನೀಫ್(33) ಬೆಂಗಳೂರಿನ ತಾಹಿರ್ ಹುಸೇನ್ ಎನ್ನುವರು ಇತ್ತೀಚೆಗೆ ಸುಳ್ಯದ ಐವರ್ನಾಡಿ ಬಳಿ ಕಾರನ್ನು ಅಡ್ಡಗಟ್ಟಿ ಪಿಸ್ತೂಲು ಹಾಗೂ ತಲವಾರುನಿಂದ ಬೆದರಿಸಿ ಐದು ಲಕ್ಷ ರು. ದರೋಡೆ ಮಾಡಿ ಪರಾರಿಯಾಗಿದ್ದರು.[ಸುಳ್ಯ : ಕಾರು ಅಡ್ಡಗಟ್ಟಿ 5 ಲಕ್ಷ ದೋಚಿದ ಬಂದೂಕುಧಾರಿಗಳು]

ಬಳಿಕ ಆರೋಪಿಗಳನ್ನು ಫೆಬ್ರವರಿ 4ರಂದು ಬೆಳಗಾವಿಯಲ್ಲಿ ಬಂಧಿಸಲಾಗಿತ್ತು.
ಘಟನೆ ವಿವರ: ಗುತ್ತಿಗಾರಿನ ಅಡಕೆ ವ್ಯಾಪಾರಿ ಅಬ್ದುಲ್ ಖಾದರ್ ಎನ್ನವುರು ಜನವರಿ 23ರಂದು ತಮ್ಮ ಕಾರಿನಲ್ಲಿ ಬೆಳ್ಳಾರೆಯಿಂದ ಗುತ್ತಿಗಾರುಗೆ ಹೋಗುತ್ತಿದ್ದರು.
ಅಬ್ದುಲ್ ಖಾದರ್ ಅವರ ಕಾರನ್ನು ಹಿಂಬಾಲಿಸಿ ಸುಳ್ಯ ಬಳಿಯ ಐವರ್ನಾಡಿ ಬಳಿ ತಡೆದು ಮಾರಕಾಸ್ತ್ರಗಳನ್ನು ತೋರಿಸಿ ಅವರಲ್ಲಿದ್ದ 5 ಲಕ್ಷ ರು ಹಾಗೂ ಮೊಬೈಲ್ ನ್ನು ದೋಚಿ ಪರಾರಿಯಾಗಿದ್ದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications