ಸಲಿಂಗ ಕಾಮ ಆರೋಪ: ಮಂಗಳೂರಿನಲ್ಲಿ ದೈವ ಪಾತ್ರಿ ಮೇಲೆ ಹಲ್ಲೆ!
ಮಂಗಳೂರು, ಮೇ 13:ಸಲಿಂಗ ಕಾಮ ಆರೋಪದ ಮೇಲೆ ದೈವ ಪಾತ್ರಿಯೊಬ್ಬರ ತಲೆ ಬೋಳಿಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ನಗರದ ಬಿಕರ್ನಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ದೈವಪಾತ್ರಿಯೊಬ್ಬರಿಗೆ ಮಹಿಳೆಯರೂ ಸಹಿತ ಕೂದಲನ್ನು ಬಲವಂತವಾಗಿ ಕತ್ತರಿಸಿ ಹಲ್ಲೆ ನಡೆಸಿರುವುದು ದಾಖಲಾಗಿದೆ.
ಇಲ್ಲಿಯ ಸ್ಥಳೀಯ ದೈವ ಪಾತ್ರಿ ಲೋಕೇಶ್ ಪೂಜಾರಿ ಅವರ ಮೇಲೆ ಈ ಹಲ್ಲೆ ನಡೆಸಲಾಗಿದ್ದು, ದೈವದ ನರ್ತನ ಸೇವೆ ನಡೆದ ಬಳಿಕ ಕೆಲವರು ಸೇರಿ ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಲೋಕೇಶ್ ಅವರಿಗೆ ಸಲಿಂಗಕಾಮದ ಬಗ್ಗೆ ಜನರ ಗುಂಪೊಂದು ಪ್ರಶ್ನಿಸಿದ್ದು, ಕೈಯ್ಯಲ್ಲಿನ ಖಡ್ಗ ತೆಗೆಯುವಂತೆ ಒತ್ತಾಯಿಸಿದ್ದಾರೆ.

ಅಲ್ಲದೇ, ಬಲವಂತವಾಗಿ ಪಾತ್ರಿಯ ತಲೆ ಕೂದಲನ್ನು ಕತ್ತರಿಸಿದ್ದಾರೆ. ಈ ನಡುವೆ ಹಿರಿಯರು ತಡೆಯಲು ಯತ್ನಿಸಿದರೂ ಯುವಕರ ಗುಂಪು ಲೋಕೇಶ್ ಮೇಲೆ ಹಲ್ಲೆ ನಡೆಸಿದೆ.ಈ ಘಟನೆ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಚರ್ಚೆಗೆ ಆರಂಭವಾಗಿದೆ. ಆದರೆ ಈ ಘಟನೆ ಕುರಿತಾಗಲಿ, ಹಲ್ಲೆಯ ಬಗ್ಗೆಯಾಗಲೀ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ಲೋಕೇಶ್ ಪೂಜಾರಿ ವೃತ್ತಿಯಲ್ಲಿ ದೈವ ಪಾತ್ರಿಯಾಗಿದ್ದರೂ, ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಯುವಕರು ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದೈವ ಪಾತ್ರಿಗಳೇ ಇಂಥ ವರ್ತನೆ ತೋರಿದರೆ ಹೇಗೆ? ಎನ್ನುವ ಆಕ್ರೋಶದಿಂದ ಯುವಕರು ಈ ರೀತಿ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications