ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃಷ್ಟಿಮಾಂಧ್ಯ ಮಕ್ಕಳ ಉಚಿತ ಶಿಕ್ಷಣಕ್ಕೆ ಪ್ರವೇಶಾತಿ ಪ್ರಾರಂಭ
ದಕ್ಷಿಣ ಕನ್ನಡ, ಜುಲೈ 22: ದೃಷ್ಟಿಮಾಂದ್ಯ ಮಕ್ಕಳಲ್ಲಿ ಶಿಕ್ಷಣ ಜ್ಯೋತಿ ಬೆಳಗಿಸುವ ಕಾರ್ಯವನ್ನು ದಕ್ಷಿಣ ಕನ್ನಡ ಜಿಲ್ಲೆಯ ವಸತಿ ಶಾಲೆಯೊಂದು ಕಳೆದ 11 ವರ್ಷಗಳಿಂದ ಮಾಡುತ್ತಾ ಬಂದಿದೆ. ಮಂಗಳೂರಿನ ಸೇವಾ ಭಾರತಿಯ ಅಂಗ ಸಂಸ್ಥೆಯಾಗಿರುವ ರೋಮನ್ ಮತ್ತು ಕ್ಯಾಥರಿನ್ ಲೋಬೊ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯು ಜಿಲ್ಲೆಯ ಏಕಮಾತ್ರ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯಾಗಿದೆ.
ಕಳೆದ 11 ವರ್ಷಗಳಲ್ಲಿ ರೋಮನ್ ಮತ್ತು ಕ್ಯಾಥರಿನ್ ಲೋಬೊ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ಈವರೆಗೆ 30ಕ್ಕೂ ಹೆಚ್ಚು ದೃಷ್ಟಿಮಾಂದ್ಯ ಮಕ್ಕಳು ವಿಶೇಷ ವಿದ್ಯಾ ಸಂಸ್ಥೆಯಲ್ಲಿ 10ನೇ ತರಗತಿಯನ್ನು ಪೂರೈಸಿ, ಹೆಚ್ಚಿನ ಶಿಕ್ಷಣವನ್ನು ಮುಂದುವರಿಸಿದ್ದಾರೆ.
2021-22ರ ಶೈಕ್ಷಣಿಕ ಸಾಲಿನಲ್ಲಿ 5 ರಿಂದ 16 ವರ್ಷದೊಳಗಿನ ದೃಷ್ಟಿಮಾಂದ್ಯ ಮಕ್ಕಳಿಗೆ 1 ರಿಂದ 10ನೇ ತರಗತಿಗಳಿಗೆ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮಕ್ಕಳು ಅರ್ಜಿ ಸಲ್ಲಿಸುವುದಕ್ಕೆ ಶಾಲಾ ಆಡಳಿತ ಮಂಡಳಿ ಕೋರಿದೆ.

ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆ ವಿಶೇಷತೆ:
ರೋಮನ್ ಮತ್ತು ಕ್ಯಾಥರಿನ್ ಲೋಬೊ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ದೃಷ್ಟಿಮಾಂದ್ಯ ಮಕ್ಕಳಿಗೆ ಇಂಗ್ಲೀಷ್ ಮಾಧ್ಯಮದಲ್ಲಿ ಬೈಲ್ ಲಿಪಿಯೊಂದಿಗೆ ಕರ್ನಾಟಕ ಸರ್ಕಾರದ ಪಠ್ಯಕ್ರಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೇ ಕಂಪ್ಯೂಟರ್ ತರಬೇತಿ, ಕರಕುಶಲ ವಸ್ತುಗಳ ತಯಾರಿಕೆ, ಸಂಗೀತ, ದೈನಂದಿನ ಚಟುವಟಿಕೆಗಳ ನಿರ್ವಹಣೆ ಮತ್ತು ಚಲನವಲನ ಕೌಶಲ್ಯಗಳನ್ನು ಕಲಿಸಿಕೊಡಲಾಗುವುದು. ಶಿಕ್ಷಣ, ವಸತಿ, ಊಟೋಪಚಾರಗಳನ್ನೂ ಉಚಿತವಾಗಿ ನೀಡಲಾಗುವುದು. ವಸತಿರಹಿತ ಶಿಕ್ಷಣಕ್ಕೂ ಅವಕಾಶವಿದೆ. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications