ಉಡುಪಿ, ದಕ್ಷಿಣ ಕನ್ನಡದಲ್ಲಿ ಸೆ.1ರಂದು ಬಕ್ರೀದ್ ಆಚರಣೆ
ಮಂಗಳೂರು, ಅ.23 : ಇಸ್ಲಾಮ್ ಕ್ಯಾಲೆಂಡರ್ ನ ದುಲ್ ಹಜ್ ತಿಂಗಳ ಪ್ರಥಮ ಚಂದ್ರ ಕೇರಳದ ಕಾಪಾಡ್ ಎಂಬಲ್ಲಿ ಮಂಗಳವಾರ ರಾತ್ರಿ ಗೋಚರಿಸಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1 ರಂದು ಉಡುಪಿ, ದಕ್ಷಿಣ ಕನ್ನಡದಲ್ಲಿ ಬಕ್ರೀದ್ ಆಚರಿಸಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹಮ್ಮದ್ ಮುಸ್ಲಿಯಾರ್ ಸೆಪ್ಟೆಂಬರ್ 1ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬಕ್ರೀದ್ ಆಚರಿಸಲು ಆದೇಶ ಹೊರಡಿಸಿದ್ದಾರೆ. ಮೊದಲ ಚಂದ್ರ ದರ್ಶನವಾಗಿ ಒಂಬತ್ತು ದಿನ ಕಳೆದು 10 ನೇ ದಿನದಂದು ಪ್ರತಿ ವರ್ಷ ಬಕ್ರೀದ್ ಆಚರಿಸಲಾಗುತ್ತದೆ.

ಪ್ರವಾದಿ ಇಬ್ರಾಹಿಂ ಅವರ ತ್ಯಾಗ ಬಲಿದಾನಗಳ ಹಿನ್ನೆಲೆಯಲ್ಲಿ ಬಕ್ರೀದ್ ಅಥವಾ ಈದುಲ್ ಅಝ್ ಹಾ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಪ್ರತಿ ವರ್ಷ ಆಚರಿಸಲಾಗುತ್ತದೆ .
'ಚಂದ್ರದರ್ಶನ ವಾಗಿದ್ದು ಕೇರಳದ ಕಾಪಾಡಿನಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1 ರಂದು ಉಡುಪಿ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬ ಆಚರಿಸಲಾಗುವುದು' ಎಂದು ಉಡುಪಿಯ ಜಿಲ್ಲಾ ಸಂಯುಕ್ತ ಜಮಾತಿನ ಖಾಝಿ ಅಲ್ ಹಾಜ್ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ತಿಳಿಸಿದ್ದಾರೆ .












Click it and Unblock the Notifications