ಮಂಗಳೂರಿಗರಿಗೆ ಸಂತಸದ ಸುದ್ದಿ, ಉಳ್ಳಾಲದಲ್ಲಿ ಸ್ಕೂಬಾ ಡೈವಿಂಗ್ ಆರಂಭ
ಮಂಗಳೂರು, ಡಿಸೆಂಬರ್ 30 : ಸಮುದ್ರದ ಆಳಕ್ಕಿಳಿದು ಅಲ್ಲಿಯ ಪ್ರಾಕೃತಿ ವಿಸ್ಮಯಗಳನ್ನು ಕಣ್ತುಂಬಿಕೊಳ್ಳುವ ಕನಸು ಕಾಣುವ ಮಂಗಳೂರಿಗರಿಗೆ ಸಂತಸದ ಸುದ್ದಿ ಇಲ್ಲಿದೆ.
ಇನ್ಮುದೆ ಸ್ಕೂಬಾ ಡೈವಿಂಗ್ ನ ರೋಮಾಂಚಕ ಅನುಭವ ಪಡೆಯಲು ಉತ್ತರ ಕನ್ನಡ ಜಿಲ್ಲೆಯ ನೆತ್ರಾಣಿ ಅಥವಾ ಉಡುಪಿಯ ಕಾಪುಗೆ ಹೋಗಬೇಕಾಗಿಲ್ಲ. ಸ್ಕೂಬಾ ಡೈವಿಂಗ್ ನ ಸಹಾಸಿ ಅನುಭವ ಮಂಗಳೂರಿನಲ್ಲಿಯೂ ದೊರೆಯಲಿದೆ.
ಹೌದು..ಸ್ಕೂಬಾ ಡೈವಿಂಗ್ ಮೂಲಕ ಕಡಲಾಳದ ಬೆರಗುಗಳಿಗೆ ಸಾಕ್ಷಿಯಾಗುವ ಸಾಹಸ ಜಲಕ್ರೀಡೆ ಮಂಗಳೂರು ಹೊರವಲಯದ ಉಳ್ಳಾಲ ಕಡಲತೀರದಲ್ಲಿ ಆರಂಭಗೊಳ್ಳಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಜಿಲ್ಲಾಡಳಿತ ಸ್ಕೂಬಾ ಡೈವಿಂಗ್ ಜಲ ಸಾಹಸ ಕ್ರೀಡೆ ಆರಂಭಿಸಲು ಮುಂದಾಗಿದೆ. ಮಂಗಳೂರಿನ ಕಡಲತಡಿಯಲ್ಲಿ ಈ ಸ್ಕೂಬಾ ಡೈವಿಂಗ್ ಸಾಹಸ ಜಲಕ್ರೀಡೆಗೆ ಸೂಕ್ತ ಜಾಗವನ್ನು ಪರಿಶೀಲನೆ ನಡೆಸಲಾಗುತ್ತಿತ್ತು. ಅಂತಿಮವಾಗಿ ಉಳ್ಳಾಲ ಸಮೀಪ ಸ್ಕೂಬಾ ಡೈವಿಂಗ್ ಜಲ ಸಾಹಸ ಕ್ರೀಡೆಗೆ ಅವಕಾಶ ನೀಡಲಾಗಿದೆ.
ಸ್ಕೂಬಾ ಡೈವಿಂಗ್ ನಡೆಸಲಾಗುವ ಈ ಪ್ರದೇಶದಲ್ಲಿ ಹವಳದ ದಿಬ್ಬಗಳು, ಆಕರ್ಷಕ ಬಣ್ಣ ಬಣ್ಣದ ಮೀನುಗಳು ಹಾಗೂ ವೈವಿಧ್ಯಮಯವಾದ ಜಲ ಜೀವರಾಶಿ ಇದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಸ್ಕೂಬಾ ಡೈವಿಂಗ್ ನೆಡೆಸಲು ವೆಸ್ಟ್ ಕೋ ಅಡ್ವೆಂಚರ್ಸ್ ಕಂಪೆನಿ ಹಾಗು ಸರ್ಫೆಸ್ ಸಂಸ್ಥೆ ಮುಂದೆ ಬಂದಿವೆ. ಇದೇ ಕಂಪನಿ ಗೋವಾ, ಮುಂಬೈ ಮತ್ತು ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಸಾಹಸ ಜಲಕ್ರೀಡೆಗೆ ವೇದಿಕೆ ಕಲ್ಪಿಸಿದೆ.
ಎಲ್ಲವೂ ಕ್ರಮ ಪ್ರಕಾರ ನಡೆದರೆ ಶೀಘ್ರದಲ್ಲಿಯೇ ಮಂಗಳೂರಿನ ಉಳ್ಳಾಲದಲ್ಲಿ ಸ್ಕೂಬಾ ಡೈವಿಂಗ್ ಸಾಹಸಕ್ಕೆ ಅವಕಾಶ ದೊರೆಯಲಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications