Get Updates
Get notified of breaking news, exclusive insights, and must-see stories!

ಶಶಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ

ಮಂಗಳೂರು, ಅಕ್ಟೋಬರ್ 11: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕೆ ಜಿ ಜಗದೀಶ್ ರನ್ನು ಏಕಾಏಕಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಶಶಿಕಾಂತ್ ಸೆಂಥಿಲ್ ಅವರನ್ನು ರಾಜ್ಯ ಸರಕಾರ ನೇಮಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಶಶಿಕಾಂತ್ ಸೆಂಥಿಲ್ 2009 ಐಎಎಸ್ ಕೇಡರ್ ನ ಅಧಿಕಾರಿಯಾಗಿದ್ದಾರೆ .

Dakshina Kannada DC Dr. K. G. Jagadeesh has been transferred

ದಕ್ಷಿಣ ಕನ್ನಡದಿಂದ ವರ್ಗಾವಣೆ ಗೊಂಡಿರುವ ಡಾ. ಕೆ. ಜಿ ಜಗದೀಶ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ಸರ್ಕಾರ ನಿಯುಕ್ತಿಗೊಳಿಸಿದೆ.

ನಿರ್ಗಮನ ಜಿಲ್ಲಾಧಿಕಾರಿ ಜಗದೀಶ ಅವರು 2016 ಜುಲೈ ತಿಂಗಳಿನಲ್ಲಿ ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 14 ತಿಂಗಳುಗಳ ಕಾಲ ಜಿಲ್ಲಾಧಿಕಾರಿಯಾಗಿದ್ದ ಡಾ.ಜಗದೀಶ್ ಪ್ರಚಾರದಿಂದ ದೂರವೇ ಉಳಿದು ತಮ್ಮ ಕಟ್ಟುನಿಟ್ಟಿನ ಆಡಳಿತದಿಂದ ಜನರ ಮನ ಗೆದ್ದಿದ್ಧರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+