ಅನಾಥ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಪ್ರೀತಿ ಹಂಚಿದ ದ.ಕ ಜಿಲ್ಲಾಧಿಕಾರಿ
ಮಂಗಳೂರು, ಮೇ 5: ಮಕ್ಕಳಿಗೆ ಬೇಸಿಗೆ ರಜೆ ಎಂದರೆ ಎಲ್ಲಿಲ್ಲದ ಖುಷಿ. ಶಾಲೆಗಳು ರಜೆ ಇರುವ ಸಂದರ್ಭದಲ್ಲಿ ತಮ್ಮ ನೆಚ್ಚಿನ ಜಾಗಗಳಿಗೆ ಹೋಗಿ ಸಂತೋಷ ಪಡುತ್ತಾರೆ. ಆದರೆ, ಇನ್ನೂ ಕೆಲವರಿಗೆ ಆ ಭಾಗ್ಯ ಇರುವುದಿಲ್ಲ. ಆದರೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂತಹ ಮಕ್ಕಳಿಗೂ ಸಹ ಪ್ರೀತಿ ಹಂಚಿ ಮೆಚ್ಚುಗೆಗೆ ಪಾತ್ರ ಆಗಿದ್ದಾರೆ.

ಮಕ್ಕಳೊಂದಿಗೆ ಭೋಜನ ಮಾಡಿದ ಡಿಸಿ
ಶಾಲಾ ಮಕ್ಕಳು ರಜೆಯ ಮಜಾ ಅನುಭವಿಸುತ್ತಿದ್ದಾರೆ. ಹಲವರು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ್ರೆ ಇನ್ನೂ ಹಲವರು ಅಜ್ಜನ ಮನೆ, ಕಾಡು, ತೋಟ ಎಂದು ಬಾಲ್ಯವನ್ನು ಅಸ್ವಾದಿಸುತ್ತಿದ್ದಾರೆ. ಆದರೆ ಇದೆಲ್ಲದವರಿಂದ ವಂಚಿತರಾದ ಅನಾಥ ಮಕ್ಕಳು ಮಾತ್ರ ತಮ್ಮನ್ನು ಯಾರೂ ಕರೆದುಹೋಗುವವರಿಲ್ಲದೇ ಅನಾಥರನ್ನಾಗಿ ಮಾಡಿದ ದೇವರಿಗೆ ಶಪಿಸುತ್ತಾ ದಿನ ಕಳೆಯುತ್ತಿದ್ದಾರೆ. ಆದರೆ ಮಂಗಳೂರು ನಗರದ ಬೋಂದೆಲ್ನ ಬಾಲಮಂದಿರದಲ್ಲಿ ಆಶ್ರಯ ಪಡೆದಿರುವ ಒಟ್ಟು 13 ಅನಾಥ ಮಕ್ಕಳಿಗೆ ಮಾತ್ರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಪ್ರೀತಿಯ ಧಾರೆಯೆರೆದಿದ್ದಾರೆ. ಒಂದೀಡೀ ದಿನ ಮಕ್ಕಳೊಂದಿಗೆ ಆಡಿ ಬೆರೆತು ಸಹಭೋಜನ ಮಾಡಿ ನಿಮ್ಮೊಂದಿಗೆ ನಾನಿದ್ದೇನೆ ಅಂತಾ ಧೈರ್ಯ ತುಂಬಿ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

ಬೊಂದೇಲ್ನ ಬಾಲಕರ ಬಾಲಮಂದಿರ
ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಯ 13 ಮಕ್ಕಳು ವಿದ್ಯಾಭ್ಯಾಸ, ರಕ್ಷಣೆ ಹಾಗೂ ಪೋಷಣೆಗಾಗಿ ಬೊಂದೇಲ್ ನ ಬಾಲಕರ ಬಾಲಮಂದಿರದಲ್ಲಿ ಆಶ್ರಯ ಪಡೆದಿದ್ದಾರೆ. ಇಲ್ಲಿ ಮಕ್ಕಳು 6 ರಿಂದ 17 ವರ್ಷದ ಮಕ್ಕಳಿದ್ದು, ರಜೆಯ ಹಿನ್ನೆಲೆಯಲ್ಲಿ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವವರು ಯಾರೂ ಇರುವುದಿಲ್ಲ. ಆದ್ದರಿಂದ ಅವರು ಬಾಲಮಂದಿರದಲ್ಲೇ ಉಳಿದಿರುತ್ತಾರೆ.

ಅನುಮತಿ ಕೇಳಿದಾಗ ಡಿಸಿಯೇ ಬಂದರು
ಮಕ್ಕಳ ಮನರಂಜನೆಗಾಗಿ ಪ್ರವಾಸ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಅನುಮತಿ ಪಡೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳೇ ಪ್ರವಾಸಕ್ಕೆ ಬೇಕಾಗಿರುವ ವಾಹನದ ವ್ಯವಸ್ಥೆ, ಬೆಳಗ್ಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ಸಂಜೆ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟು ಪ್ರವಾಸದ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೇ ಇಡೀ ದಿನ ಮಕ್ಕಳೊಂದಿಗೆ ಬೆರೆತ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಮಕ್ಕಳೊಂದಿಗೆ ಮಾತನಾಡಿ, ಅವರ ಪ್ರವಾಸದ ಅನುಭವಗಳನ್ನು ಆಲಿಸಿದ್ದಾರೆ.
ಮಕ್ಕಳೂ ಜಿಲ್ಲಾಧಿಕಾರಿಯವರೊಂದಿಗೆ ಸ್ನೇಹಿತರ ರೀತಿ ಬೆರೆತಿದ್ದಾರೆ. ತಮ್ಮ ಬಳಿ ಇರೋದು ಜಿಲ್ಲಾಧಿಕಾರಿ ಎಂಬ ಅರಿವಿಲ್ಲದ ಮಕ್ಕಳು ಜಿಲ್ಲಾಧಿಕಾರಿಯೊಂದಿಗೆ ಹರಟೆ, ಕಾಮಿಡಿ, ಆಟ, ಊಟವನ್ನು ಮಾಡಿ ಸಂಭ್ರಮಿಸಿದ್ದಾರೆ. ಪಿಲಿಕುಳದ ಜೈವಿಕ ಉದ್ಯಾನವನ ಸುತ್ತಾಡಿದ್ದು ಮಾತ್ರವಲ್ಲದೇ ಅಲ್ಲಿಯದ್ದೇ ಮಾನಸ ವಾಟರ್ ಪಾರ್ಕ್ ನಲ್ಲಿ ಮನಸೋ ಇಚ್ಛೆ ನೀರಿನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಆಟ ಆಡಿ ನೋವನ್ನು ಮರೆತಿದ್ದಾರೆ.

ದಿಟ್ಟ ನಿರ್ಧಾರಗಳಿಂದ ಜನರ ಮೆಚ್ಚುಗೆ
ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಯಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಜಿಲ್ಲೆಯ ಜನಮಾನಸದಲ್ಲಿ ನೆಲೆವೂರಿದ್ದರು. ಪುತ್ತೂರು ಉಪವಿಭಾಗದ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ರಾಜೇಂದ್ರ ಕೆವಿ ದಕ್ಷತೆ ಮತ್ತು ದಿಟ್ಟ ನಿರ್ಧಾರಗಳಿಂದ ಜನರ ಮೆಚ್ಚುಗೆ ಗಳಿಸಿದ್ದರು. ಜನಸಾಮಾನ್ಯನ ಸಮಸ್ಯೆಗಳಿಗೂ ಕಿವಿಯಾಗುವ ಜಿಲ್ಲಾಧಿಕಾರಿ, ಸಮಸ್ಯೆಗೆ ಅಲ್ಲೇ ಪರಿಹಾರವನ್ನು ನೀಡುವ ಮೂಲಕ ಜನರ ಗಮನ ಸೆಳೆದಿದ್ದರು. ಅಧಿಕಾರಿಗಳ ವಲಯದಲ್ಲಿ ಶುದ್ಧಹಸ್ತರೆಂದೇ ಹೆಸರುಗಳಿಸಿರುವ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿಯವ ಮಾನವೀಯ ಗುಣಕ್ಕೆ ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಜನ ಕೊಂಡಾಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications