ದಕ್ಷಿಣ ಕನ್ನಡ ಜಿಲ್ಲೆಗೆ 'ಸ್ವಚ್ಛತಾ ದರ್ಪಣ್' ಪ್ರಶಸ್ತಿ
ಮಂಗಳೂರು, ಅಕ್ಟೋಬರ್ 2: ಕೇಂದ್ರ ಸರ್ಕಾರದಿಂದ ಸ್ವಚ್ಛತೆಗಾಗಿ ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ 'ಸ್ವಚ್ಛತಾ ದರ್ಪಣ್' ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಆಯ್ಕೆಯಾಗಿದೆ.
ಪ್ರಶಸ್ತಿಗಾಗಿ ರ್ಯಂಕಿಂಗ್ ನಲ್ಲಿರುವ ದೇಶದ ನಾನಾ ರಾಜ್ಯಗಳ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಹಾಗೂ ನೆರೆಯ ಉಡುಪಿ ಜಿಲ್ಲೆ ಕೂಡ ಸೇರಿರುವುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ ಎಂ.ಆರ್. ರವಿ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಸಲಾದ ಸಮೀಕ್ಷೆ ಹಾಗೂ ಪರಿಶೀಲನೆಯಿಂದ ದೊರಕಿರುವ ವರದಿಯಂತೆ 3230 ಕುಟುಂಬಗಳಿಗೆ ಶೌಚಾಲಯ ನಿರ್ಮಿಸಬೇಕಾಗಿದೆ. ಆ.15 ರೊಳಗೆ ನಾನಾ ಯೋಜನೆಗಳಡಿ ಇವರಿಗೆ ಶೌಚಾಲಯ ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಿಇಒ ರವಿ ತಿಳಿಸಿದ್ದಾರೆ.
ಕಳೆದ ವರ್ಷ ಅ.2ರಂದು ಜಿಲ್ಲೆಯನ್ನು ಬಯಲು ಮುಕ್ತ ಶೌಚಾಲಯದ ಜಿಲ್ಲೆ ಎಂದು ಘೋಷಿಸಲಾಗಿತ್ತು. 2012 ರಿಂದ 16ರ ವರೆಗಿನ ಬೇಸ್ ಲೈನ್ ಸರ್ವೆ 'ಪಂಚತಂತ್ರ'ದ ಪ್ರಕಾರ ಈ ಘೋಷಣೆ ಮಾಡಲಾಗಿತ್ತು.
ಬಳಿಕ ಪ್ರಸ್ತುತ ಸಾಲಿನ ಅ.16 ರಿಂದ ಸೆಪ್ಟೆಂಬರ್ 20ರವರೆಗೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 366 ಗ್ರಾಮಗಳು ಬಯಲು ಶೌಚಾಲಯ ಮುಕ್ತ ಗ್ರಾಮಗಳು ಎಂಬುದು ಸಾಮಾಜಿಕ ಪರಿಶೋಧನೆಯಲ್ಲಿ ತಿಳಿದು ಬಂದಿತ್ತು. ಒಟ್ಟು 3,00,695 ಮನೆಗಳನ್ನು ಸಮೀಕ್ಷೆ ನಡೆಸಲಾಗಿದ್ದು, ಅದರನ್ವಯ 3,230 ಕುಟುಂಬಗಳಿಗೆ ಶೌಚಾಲಯವಿಲ್ಲವೆಂದು ವರದಿಯಾಗಿತ್ತು.
ಇನ್ನು ಮನೆ ನಂಬರ್ ಇಲ್ಲದ ಕುಟುಂಬಗಳಿಗೂ ಮುಂದಿನ ದಿನಗಳಲ್ಲಿ ಶೌಚಾಲಯ ಲಭ್ಯವಾಗಲಿದೆ. ಈ ಪ್ರಕ್ರಿಯೆ ನಿರಂತರ ಮುಂದುವರಿಯಲಿದೆ ಎಂದು ಡಾ ರವಿ ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications