ಬಂಟ್ವಾಳ: ಲೋಕಾರ್ಪಣೆಗೆ ಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಪಿಂಕ್ ಟಾಯ್ಲೆಟ್
ಮಂಗಳೂರು, ಸೆಪ್ಟೆಂಬರ್, 23: ಮನೆಯಿಂದ ಹೊರಬಂದರೆಂದರೆ ಶೌಚದ ಸಮಸ್ಯೆ ಮಹಿಳೆಯರಿಗೆ ಎಲ್ಲರಿಗೂ ಕಾಡುತ್ತಿರುತ್ತದೆ. ಆದರೆ ಸರಿಯಾದ ವ್ಯವಸ್ಥೆಯಿಲ್ಲದೆ ಮಹಿಳೆಯರು ಪರದಾಡುವಂತಾಗುತ್ತದೆ. ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲೆಂದೇ ಮಹಿಳಾ ಅಧಿಕಾರಿಯೊಬ್ಬರು ಮುತುವರ್ಜಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಪಿಂಕ್ ಟಾಯ್ಲೆಟ್ ಲೋಕಾರ್ಪಣೆಗೆ ಸಿದ್ಧವಾಗಿದೆ.
ಬಂಟ್ವಾಳ ಮಿನಿವಿಧಾನಸೌಧ ಸನಿಹದಲ್ಲೇ ಈ ಪಿಂಕ್ ಟಾಯ್ಲೆಟ್ ನಿರ್ಮಾಣವಾಗುತ್ತಿದೆ. ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಪರಿಕಲ್ಪನೆಯಲ್ಲಿ ಪಿಂಕ್ ಟಾಯ್ಲೆಟ್ ತಲೆಯೆತ್ತುತ್ತಿದೆ. ಮಹಿಳೆಯರಿಗೆಂದೇ ಈ ವಿಶೇಷ ಶೌಚಾಲಯವನ್ನು ನಿರ್ಮಿಸಲಾಗಿದೆ. ಶೌಚಾಲಯ ಮಾತ್ರವಲ್ಲದೆ ಇದರೊಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯನ್ನೂ ನಿರ್ಮಿಸಲಾಗಿದೆ. ಮಕ್ಕಳಿಗೆ ಹಾಲುಣಿಸುವ ತಾಯಂದಿರಿಗೆ ಹಾಲುಣಿಸುವುಕ್ಕೆ ಇಲ್ಲಿ ಪ್ರತ್ಯೇಕ ಫೀಡಿಂಗ್ ಏರಿಯಾ ನಿರ್ಮಿಸಲಾಗಿದೆ.

ಇಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಶೌಚಾಲಯದ ಪಕ್ಕದಲ್ಲೇ ತಾಲೂಕು ಕಚೇರಿ, ನ್ಯಾಯಾಲಯ ಸೇರಿದಂತೆ ಹಲವಾರು ಸರ್ಕಾರಿ ಕಚೇರಿಗಳು ಇರುವುದರಿಂದ ಅಲ್ಲಿಗೆ ಆಗಮಿಸಿದ ಮಹಿಳೆಯರಿಗೆ ಈ ವ್ಯವಸ್ಥೆ ಅನುಕೂಲವಾಗಲಿದೆ. ವಿಶ್ರಾಂತಿ ಕೊಠಡಿಗೆ ಎಸಿ ಅಳವಡಿಸಲಾಗಿದೆ. ತೊಟ್ಟಿಲು ಅಳವಡಿಸುವ ಚಿಂತನೆಯೂ ಇದೆ. ಈ ಮೂಲಕ ಮಹಿಳೆಯರ ಕೆಲವು ವೈಯುಕ್ತಿಕ ಸಮಸ್ಯೆಗಳಿಗೆ ಒಂದೇ ಸೂರಿನಡಿಯಲ್ಲಿ ಪರಿಹಾರ ಸಿಗುವಂತಾಗಿದೆ.
ಅಮೃತ ನಿರ್ಮಲ ನಗರ ಯೋಜನೆಯಲ್ಲಿ ಬಂಟ್ವಾಳ ಪುರಸಭೆಗೆ ಒಂದು ಕೋಟಿ ಅನುದಾನ ಬಂದಿದೆ. ಈ ಯೋಜನೆಯಡಿಯಲ್ಲಿ 26 ಲಕ್ಷ ಅನುದಾನವನ್ನು ಪಿಂಕ್ ಟಾಯ್ಲೆಟ್ಗೆ ಬಳಕೆ ಮಾಡಲಾಗಿದೆ. ಪ್ರಸ್ತುತ ಕಾಮಗಾರಿ ಅಂತಿಮ ಹಂತದಲ್ಲಿದೆ. ಆಶ್ಚರ್ಯವೆಂದರೆ ಯೋಜನೆಗೆ ಎರಡೆರಡು ಬಾರಿ ತಡೆಯಾಜ್ಞೆ ಬಂದಿತ್ತು. ನಿರ್ಮಾಣ ಹಂತದ ಸಂದರ್ಭದಲ್ಲಿ ಶೌಚಾಲಯ ಕಟ್ಟಡದ ಮುಂಭಾಗ ಕುಂಬಳಕಾಯಿ, ಕುಂಕುಮ ಮೊದಲಾದ ವಸ್ತುಗಳು ಪತ್ತೆಯಾಗಿತ್ತು.
2022ರ ಎಪ್ರಿಲ್ನಲ್ಲಿ ಪಿಂಕ್ ಶೌಚಾಲಯದ ನಿರ್ಮಾಣ ಕಾಮಗಾರಿ ಆರಂಭಿಸಿಲಾಗಿತ್ತು. ಈ ಶೌಚಾಲಯವು ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಗೇಟ್ನ ಪಕ್ಕವೇ ನಿರ್ಮಾಣವಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಂದಿನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕಾಮಗಾರಿಗೆ ತಡೆ ಆದೇಶ ನೀಡಿದ್ದರು.
ಬಳಿಕ ಈ ವಿಚಾರ ಪುರಸಭಾ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿ ತಡೆ ತೆರವುಗೊಂಡಿತ್ತು. ಒಟ್ಟಿನಲ್ಲಿ ಮಹಿಳೆಯರಿಗಾಗಿ ನಿರ್ಮಾಣವಾಗುತ್ತಿರುವ ಪಿಂಕ್ ಟಾಯ್ಲೆಟ್ ಸದ್ಯ ಲೋಕಾರ್ಪಣೆಯ ಹೊಸ್ತಿಲಲ್ಲಿದೆ. ಸಾಮಾನ್ಯ ಮಹಿಳೆಯರ ಕಷ್ಟವನ್ನು ಅರಿತು ಪ್ರತ್ಯೇಕ ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿ ನಿರ್ಮಿಸಿರುವ ಮಹಿಳಾ ಅಧಿಕಾರಿ ಲೀನಾ ಬ್ರಿಟ್ಟೋ ಅವರ ಯೋಜನೆ ಶ್ಲಾಘನೀಯವಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications